ಮಣಿಪಾಲ: ಮಂಚಿ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ
Team Udayavani, Jan 16, 2022, 10:27 PM IST
ಉಡುಪಿ: ಮಣಿಪಾಲ 80 ಬಡಗಬೆಟ್ಟು ಗ್ರಾಮದ ಮಂಚಿ ರಾಜೀವನಗರದಲ್ಲಿ ರವಿವಾರ ರಾತ್ರಿ ಹಡಿಲು ಗದ್ದೆ ಹಾಗೂ ಮೀಸಲು ಅರಣ್ಯಕ್ಕೆ ಬೆಂಕಿ ಬಿದ್ದಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ರಾಜೀವನಗರದ ಶ್ರೀನಿವಾಸ ಆಚಾರ್ಯ ಎಂಬವರ ಹಡಿಲು ಗದ್ದೆಯಲ್ಲಿ ಇಂದು ಸಂಜೆ 7.30ರ ಸುಮಾರಿಗೆ ಬೆಂಕಿ ಅವಘಡ ಉಂಟಾಗಿದ್ದು, ಅದು ಬಳಿಕ ಸಮೀಪದ ಮೀಸಲು ಅರಣ್ಯಕ್ಕೂ ವ್ಯಾಪಿಸಿದೆ ಎನ್ನಲಾಗಿದೆ.
ಬೆಂಕಿ ಅವಘಡದಿಂದ ಗದ್ದೆಯ ಹುಲ್ಲು ಸಂಪೂರ್ಣವಾಗಿ ಸುಟ್ಟಿದ್ದು, ಅರಣ್ಯ ಇಲಾಖೆಯ ಕೆಲವು ಅಕೇಶಿಯ ಮರಗಳು ಕೂಡ ಬೆಂಕಿಗೆ ಆಹುತಿಯಾಗಿದೆ.
ಆರಂಭದಲ್ಲಿ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ, ಬೆಂಕಿ ಹತೋಟಿಗೆ ಬಾರದಿದ್ದಾಗ ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದ್ದಾರೆ. ಅದರಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.
ಗದ್ದೆಯ ಸಮೀಪವೇ ಕೆಲವು ಮನೆಗಳಿದ್ದು, ಬೆಂಕಿಯ ಕೆನ್ನಾಲಿಗೆ ಆ ಮನೆಗಳಿಗೂ ವ್ಯಾಪಿಸುವ ಆತಂಕ ಎದುರಾಗಿತ್ತು. ಆದರೆ ಕ್ಲಪ್ತ ಸಮೀಪದಲ್ಲಿ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ.
ಕಾರ್ಯಾಚರಣೆ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಸ್ಥಳೀಯರು ಸಹಕರಿಸಿದರು.
ಕಾರ್ಯಾಚರಣೆಯಲ್ಲಿ ಉಡುಪಿ ಅಗ್ನಿಶಾಮಕ ಠಾಣಾಧಿಕಾರಿ ಸತೀಶ್, ಪ್ರಮುಖ ಅಗ್ನಿಶಾಮಕದಾರರಾದ ಅಶ್ವಿನ್, ಸುನಿಲ್, ಚಾಲಕ ಶಂಕರ್, ಸಿಬ್ಬಂದಿ ವಿನಾಯಕ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಆಕಾಶ್, ಆದರ್ಶ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್