ಖೈದಿಗಳ ದಿನಗೂಲಿ ಏರಿಕೆ ಸತ್ಯಕ್ಕೆ ದೂರವಾದದ್ದು: ಗೃಹ ಸಚಿವ ಆರಗ ಜ್ಞಾನೇಂದ್ರ

ಅಂತಹ ಆದೇಶ ಇದುವರೆಗೂ ಹೊರಡಿಸಿಲ್ಲ; ಭಾರಿ ಚರ್ಚೆ ಬಳಿಕ ಸ್ಪಷ್ಟನೆ

Team Udayavani, Jul 20, 2022, 3:27 PM IST

araga

ಬೆಂಗಳೂರು : ಜೈಲಿನಲ್ಲಿರುವ ಖೈದಿಗಳಿಗೆ ದಿನಗೂಲಿ ಏರಿಕೆ ಮಾಡಲಾಗಿದೆ ಎಂಬ ವಿಷಯ ಸತ್ಯಕ್ಕೆ ದೂರವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ , ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಖೈದಿಗಳ ದಿನಗೂಲಿಯನ್ನ 525 ರೂಗಳಿಗೆ ಏರಿಸಿದ್ದು ಬೇರೆ ಉದ್ಯೋಗಗಳಿಗಿಂತ ಜೈಲುವಾಸವೇ ಲಾಭದಾಯಕ ಎಂಬಂತೆ ಹಲವರು ಗೇಲಿ ಮಾಡಿ ಹರಿಬಿಟ್ಟಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.

ನಮ್ಮ ರಾಜ್ಯದಲ್ಲಿ ಸುಮಾರು ಹದಿನೈದು ಸಾವಿರ ಖೈದಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. ಜೈಲುವಾಸದಲ್ಲಿರುವ ಖೈದಿಗಳಿಗೆ ಕೂಲಿ ಹಣವನ್ನು 200 ರೂಗಳಿಂದ ಸ್ವಲ್ಪ ಹೆಚ್ಚಿಗೆ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತೂ ಅಂತಹ ಆದೇಶ ಇದುವರೆಗೂ ಹೊರಡಿಸಿಲ್ಲ ಎಂದಿದ್ದಾರೆ.

ಜೈಲುಶಿಕ್ಷೆಯಲ್ಲಿರುವ ಹಲವು ಖೈದಿಗಳಿಂದ ಪ್ರತಿದಿನ ಕೆಲಸಕಾರ್ಯಗಳನ್ನು, ದುಡಿಮೆ ಮಾಡಿಸಲಾಗುತ್ತಿದ್ದು ಪ್ರತಿಯೊಬ್ಬ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆಯನ್ನು ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ. ಖೈದಿಗಳಿಗೆ ಕೈಮಗ್ಗ, ಕರಕುಶಲ ವಸ್ತುಗಳ ತಯಾರಿಕೆ , ಸೋಪ್ , ಮೇಣದಬತ್ತಿ ತಯಾರಿಕೆ ಸೇರಿದಂತೆ ಇಲಾಖೆಗೆ ಸೇರಿದ ಕೃಷಿ ಜಮೀನಿನಲ್ಲಿ ಹಣ್ಣು ತರಕಾರಿಗಳನ್ನು ಬೆಳೆದು ಮಾರಾಟ ಮಾಡಲಾಗುತ್ತದೆ. ಈ ಮೂಲಕ  ಇಲಾಖೆಗೆ  ಆದಾಯವೂ ಬರುತ್ತಿದೆ. ಆದರೆ ಶಿಕ್ಷೆಯಲ್ಲಿರುವ ಖೈದಿಗಳಿಗೆ ಈಗಲೂ ಕೊಡುತ್ತಿರುವುದು ದಿನಕ್ಕೆ 200 ರೂಗಳು. ಅದರಲ್ಲಿ ಊಟದ ಖರ್ಚು 100 ರೂಗಳನ್ನು ಸಹ ಕಳೆಯಲಾಗುತ್ತಿದೆ. ಖೈದಿಯಾದ ಮಾತ್ರಕ್ಕೆ ಆತನಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ  ಸರಕಾರಕ್ಕೂ ಇಲ್ಲ ಎಂದು ಹೇಳಿದ್ದಾರೆ.

ಈ ಕಾರಣದಿಂದಾಗಿ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ ಅಷ್ಟೇ. ಕಾರಾಗೃಹವಾಸಿಗಳಲ್ಲಿ 50% ಗಿಂತಲೂ ಹೆಚ್ಚು ಅನಕ್ಷರಸ್ಥರೇ ಇದ್ದು ಈಗಾಗಲೇ ನಾನು ಗೃಹಸಚಿವನಾದ ಬಳಿಕ ಅವರಿಗೆಲ್ಲಾ ಅಕ್ಷರಾಭ್ಯಾಸ ನಡೆಸುವ ಯೋಜನೆಗೆ ಒತ್ತುಕೊಟ್ಟಿದ್ದು ಈಗಾಗಲೇ ಬಹಳಷ್ಟು ಪ್ರಗತಿ ಕಂಡುಬಂದಿದೆ.

ಸೆರೆವಾಸ ಮುಗಿಸಿ ಒಬ್ಬ ಪ್ರಜ್ಞಾವಂತ ನಾಗರೀಕನಾಗಿ ಬದುಕಬೇಕಾದ ಒಬ್ಬ ವ್ಯಕ್ತಿ ಬರಿಗೈಯಲ್ಲಿ ಮನೆಗೆ ಹೋದರೆ ಆತನ ಜೀವನ ಕಷ್ಟ. ತನ್ನ ಜೀವನಕ್ಕೆ ಏನೂ ಆಧಾರ, ಆದಾಯ ಇಲ್ಲದೇ ಸಮಾಜದ ದೃಷ್ಠಿಯಲ್ಲಿ ಅಸ್ಪೃಶ್ಯರಂತಾಗುವ    ಆತ ಮತ್ತೆ ತನ್ನ ಜೀವನ ನಡೆಸಲು ಕೆಟ್ಟ ದಾರಿಯನ್ನೇ ಆರಿಸಿಕೊಳ್ಳುವ ಸಂಭವ ಇರುತ್ತದೆ. ಖೈದಿಗಳ ಕೂಲಿ ಏರಿಸಿದರೂ ಜೈಲಿನಿಂದ ಹೊರಬಂದ ನಂತರವೇ ಅವರಿಗೆ ಹಣ ನೀಡಲಾಗುತ್ತದೆ. ತಮ್ಮ ಕುಟುಂಬದ ನಿರ್ವಹಣೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ , ಸ್ವಂತ ಉದ್ಯೋಗಕ್ಕೆ ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಈ ಎಲ್ಲಾ ಮಾನವೀಯತೆಯ ದೃಷ್ಠಿಯಿಂದ ಖೈದಿಗಳಿಂದ ಬರುತ್ತಿರುವ ಆದಾಯದಿಂದಲೇ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದ್ದು ಇದರ ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಖೈದಿಗಳ ಕೂಲಿ ಹೆಚ್ಚಿಸುವ ಆದೇಶ ಇನ್ನೂ ಜಾರಿಯಾಗಿಲ್ಲ ಆದರೆ ಹೀಗೊಂದು ಸದುದ್ದೇಶದ ಆಲೋಚನೆ ಮಾಡಲಾಗಿದೆಯಷ್ಟೆ.ಆದರೆ ಹಲವರು ಊಹಾಪೋಹಗಳನ್ನು ನಂಬಿ  ಖೈದಿಗಳ ಸಂಬಳ ಶಿಕ್ಷಕರ ವೃತ್ತಿಗಿಂತಲೂ ಲೇಸು ಎಂದು ಎಲ್ಲೆಡೆ ಸುದ್ದಿ ಹರಡುತ್ತಿರುವುದು ತಿಳಿದುಬಂದಿದ್ದು ಈ ಬಗ್ಗೆ ಮೇಲಿನ ಸ್ಪಷ್ಟೀಕರಣ ನೀಡಬಯಸುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.