ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ


Team Udayavani, Mar 26, 2023, 6:14 PM IST

G PARAMESHWAR

ಕೊರಟಗೆರೆ : ರಾಜ್ಯ ಸರ್ಕಾರದಿಂದ ಸದಾಶಿವ ಆಯೋಗದ ವರದಿಯ ಒಳಮೀಸಲಾತಿ ಹೆಚ್ಚಳ ವಿಚಾರವನ್ನು ನಾನು ಸ್ವಾಗತಿಸಿದರೂ ಕೂಡ ಇದು ಚುನಾವಣಾ ಗಿಮಿಕ್ ಆಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ಪ್ರತಿಕ್ರಿಯಿಸಿದರು.

ಅವರು ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಒಳ ಮೀಸಲಾತಿ ಬೇಡಿಕೆ ನಮ್ಮ ಆಗಿನ ಸಮ್ಮಿಶ್ರ ಸರ್ಕಾರದ ಆರಂಭದಲ್ಲೂ ಇತ್ತು, ಒಳಮೀಸಲಾತಿ ಸದಾಶಿವ ಆಯೋಗದ ವರದಿ ಸರ್ಕಾರದಲ್ಲಿ ಇದ್ದದ್ದು ನಿಜ ಆದರೆ ನಾಲ್ಕು ವರ್ಷಗಳು ತೆಗೆದುಕೊಳ್ಳದ ತೀರ್ಮಾನ ರಾಜ್ಯ ಸರ್ಕಾರ ಕೊನೆ ಕ್ಯಾಬಿನೆಟ್‌ನಲ್ಲಿ ತೆಗೆದುಕೊಳ್ಳೋದು ಇದು ಏನು ಎಂಬ ಪ್ರಶ್ನೆ ಉದ್ಬವವಾಗುತ್ತದೆ, ಅಂದರೇ ಇದು ಮಾಡಿದಂಗೂ ಇರಬೇಕು ಹಾಗೂ ಆಗದಂಗೂ ಇರಬೇಕು ಇದು ಚುನಾವಣಾ ಗಿಮಿಕ್ ಎಂದು ತಿಳಿಸಿದ ಅವರು ಇದನ್ನು ಕಾನೂನಾತ್ಮಕವಾಗಿ ನೋಡೊದಾದ್ರೇ ಒಳಮೀಸಲಾತಿಯನ್ನು ಯಾವ ರೀತಿ ಸಮರ್ಥನೆ ಮಾಡಿಕೊಳ್ತಾರೆ ಗೊತ್ತಿಲ್ಲಾ ಇದು ಮುಂದೆ ಬರೋ ದಿನಗಳಲ್ಲಿ ತಿರ್ಮಾನ ಆಗುತ್ತೇ ಎಂದು ತಿಳಿಸಿದರು.

ಕಾಂಗ್ರೆಸ್ ಆಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಊಹಾಪೋಹಕ್ಕೆ ತೆರೆ ;-

ನನಗೂ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮೊದಲ ಪಟ್ಟಿಯಲ್ಲೇ ಘೋಷಣೆ ಮಾಡಿದ್ದು ಬಹಳ ಜನರಿಗೆ ಡಾ.ಜಿ.ಪರಮೇಶ್ವರ ಕೊರಟಗೆರೆ ವಿಧಾನ ಸಭಾ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗ್ತಾರೆ ಎಂಬ ಊಹಾ ಪೋಹಗಳಿಗೆ ತೆರೆ ಬಿದ್ದಿದೆ. ನಾನು ಮೊದಲಿನಿಂದಲೂ ಕೊರಟಗೆರೆ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದಾಗಿ ಹೇಳಿಕೊಂಡು ಬಂದಿದ್ದೆ ಆದರೂ ಬಹಳ ಜನಕ್ಕೆ ಅನುಮಾನ ಇತ್ತು, ಬೆಂಗಳೂರಿಗೆ ಬನ್ನಿ ಅಂತಾ ಪ್ರಕಟಣೆ ಮಾಡ್ತಿದ್ರು ಇವತ್ತು ಅದಕ್ಕೆ ತೆರೆಬಿದ್ದಿದೆ ಎಂದರು. ಮೊದಲ ಪಟ್ಟಿಯಲ್ಲಿ ೧೨೪ ಕ್ಷೇತ್ರಗಳ ಸೀಟ್‌ಗಳನ್ನು ಅನೌನ್ಸ್ ಆಗಿದೆ ಇನ್ನು ೧೦೦ ಕ್ಷೇತ್ರಗಳು ಉಳಿದಿವೆ, ಅದನ್ನು ಕೊಡಲೆ ಅದಷ್ಟು ಶೀಘ್ರದಲ್ಲಿ ಅನೌನ್ಸ್ ಮಾಡ್ತಾರೆ ಎಂದು ಅಂದುಕೊಂಡಿದ್ದೀನಿ, ಕಾಂಗ್ರೆಸ್ ಪಕ್ಷದ ಸರ್ಕಾರ ಮಾಡೋದಕ್ಕೆ ಅನುಕೂಲಕರ ವಾತಾವರಣ ಸೃಷ್ಠಿಯಾಗುತ್ತೆ ಅನ್ನೊದು ಈ ಪಟ್ಟಿ ನೋಡಿದ್ಮೇಲೆ ಅನಿಸಿದೆ, ಕೆಲವರಿಗೆ ಟಿಕೆಟ್ ದೊರೆಯದೆ ನಿರಾಶೆ ಆಗಿರಬೇಕು, ಬಹಳ ಜನ ಅರ್ಹರಿದ್ದಂತಹವರಿಗೆ ಟಿಕೆಟ್ ಸಿಕ್ಕಿಲ್ಲಾ, ಅವರೂ ೨ ಲಕ್ಷ ಕೊಟ್ಟು ಪಕ್ಷಕ್ಕೆ ಅರ್ಜಿ ಹಾಕಿದ್ರು ಅವರಲ್ಲಿ ನಾನು ಮನವಿ ಮಾಡಿಕೊಳ್ತೇನೆ ನಿರಾಸೆ ಆಗಬೇಡಿ, ಮುಂದೆ ಭವಿಷ್ಯದಲ್ಲಿ ನಿಮಗೂ ಕೂಡ ಉತ್ತಮ ಅವಕಾಶಗಳು ಸಿಗುತ್ತೆ, ಸರ್ಕಾರ ಬಂದಾಗ ಅನೇಕ ಜವಾಬ್ದಾರಿಗಳು ಸಿಗೋ ಅವಕಾಶ ನಿಮಗಿದೆ, ನಾವು ನೀವೆಲ್ಲಾ ಸೇರಿಕೊಂಡು ಪಕ್ಷವನ್ನ ಕಟ್ಟೋಣ ಎಂದು ತಿಳಿಸಿದರು.

ಇದನ್ನೂ ಓದಿಎಲ್ಲೇ ಸ್ಪರ್ಧೆ ಮಾಡಿದರೂ ಸಿದ್ದರಾಮಯ್ಯ ಗೆಲ್ಲುತ್ತಾರೆ : ಶಾಸಕ ಜೆ.ಎನ್.ಗಣೇಶ್

ರಾಹುಲ್ ಗಾಂಧಿ ಅನರ್ಹತೆ ಪ್ರಜಾತಂತ್ರ ವಿರೋಧಿ;-

ಕಾಂಗ್ರೆಸ್ ಪಕ್ಷದ ಪ್ರಮುಖ ಯುವ ನಾಯಕ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಿದ ಕ್ರಮವನ್ನು ತೀವ್ರವಾಗಿ ಖಂಡಿಸಿದ ಡಾ.ಜಿ.ಪರಮೇಶ್ವರ ಇದು ಪ್ರಜಾತಂತ್ರ ವಿರೋಧಿ ಕ್ರಮವಾಗಿದೆ, ಗುಜರಾತ್ ರಾಜ್ಯದ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರೆಂದು ಪರಿಗಣಿಸಿ ಎರಡು ವರ್ಷಗಳ ಶಿಕ್ಷೆ ವಿಧಿಸಿದ ಬೆನ್ನ ಹಿಂದೆಯೇ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ತರಾತುರಿಯ ಕ್ರಮವಾಗಿದೆ, ಇದರ ಹಿಂದೆ ಬಿಜೆಪಿ ನಾಯಕರ ಷಡ್ಯಂತ್ರ ಅಡಗಿದೆ ಎಂದರು. ಅವರು ನನಗೆ ನ್ಯಾಯಾಲಯ ಮತ್ತು ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ, ಗೌರವಗಳಿವೆ, ನ್ಯಾಯಾಲಯ ತೀರ್ಪು ನೀಡಿದ ತಕ್ಷಣವೇ ಅವರ ಲೋಕಸಭಾ ಸದಸ್ಯತ್ವ ರದ್ದುಪಡಿಸಿರುವುದು ಸರಿಯೇ, ನ್ಯಾಯಾಲಯವೇ ತಿಂಗಳ ಕಾಲ ಸಮಯ ನೀಡಿರುವಾಗ ಲೋಕಸಭೆಯ ಕಾರ್ಯದರ್ಶಿ ಉತ್ಪಲ್‌ಕುಮಾರ್ ಅವರು ಆತುರಾತುರವಾಗಿ ರಾಹುಲ್‌ಗಾಂಧಿ ಅವರನ್ನು ಅನರ್ಹಗೊಳಿಸಿ ಅದೇಶ ಹೊರಡಿಸಿರುವುದು ಸಮಂಜಸವೇ ಎಂಬುದನ್ನು ಬಿಜೆಪಿಯ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.