ಗುಡ್ ನ್ಯೂಸ್: ಭಾರತದಲ್ಲಿ ಕೋವಿಡ್ ಸೋಂಕು-ಶೇ.90ರಷ್ಟು ಚೇತರಿಕೆ ಕಂಡ ಮೊದಲ ರಾಜ್ಯ ದೆಹಲಿ

ದೇಶದ ಸುಮಾರು 32.34 ಲಕ್ಷ ಸೋಂಕಿತರಲ್ಲಿ ಈವರೆಗೆ 26.67 ಲಕ್ಷ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

Team Udayavani, Aug 26, 2020, 3:18 PM IST

ಗುಡ್ ನ್ಯೂಸ್: ಭಾರತದಲ್ಲಿ ಕೋವಿಡ್ ಸೋಂಕು-ಶೇ.90ರಷ್ಟು ಚೇತರಿಕೆ ಕಂಡ ಮೊದಲ ರಾಜ್ಯ ದೆಹಲಿ

ನವದೆಹಲಿ: ಇಡೀ ದೇಶದಲ್ಲಿಯೇ ಕೋವಿಡ್ 19ನ ಸೋಂಕಿತರಲ್ಲಿ ಶೇ.90ರಷ್ಟು ಗುಣಮುಖ ಹೊಂದಿದ ರಾಜ್ಯಗಳಲ್ಲಿ ದೆಹಲಿ ಪ್ರಥಮ ಸ್ಥಾನ ಪಡೆದಿದೆ. ಈವರೆಗೆ 1.62 ಲಕ್ಷ ಮಂದಿ ಸೋಂಕಿತರದಲ್ಲಿ 1.46ಲಕ್ಷಕ್ಕೂ ಅಧಿಕ ಜನರು ಗುಣಮುಖರಾಗಿರುವುದಾಗಿ ಘೋಷಿಸಿದೆ.

ಕೋವಿಡ್ 19 ಸೋಂಕಿನ ಅಟ್ಟಹಾಸದ ನಡುವೆ ತಮಿಳುನಾಡು, ಬಿಹಾರ ಮತ್ತು ಹರ್ಯಾಣ ರಾಜ್ಯಗಳಲ್ಲಿ ಶೇ.80ರಷ್ಟು ಗುಣಮುಖರಾಗುತ್ತಿರುವುದಾಗಿ ವರದಿ ತಿಳಿಸಿದೆ. ಇನ್ನುಳಿದ 13 ರಾಜ್ಯಗಳಲ್ಲಿ ಶೇ.70ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ವಿವರಿಸಿದೆ.

ಕೋವಿಡ್ 19 ಸೋಂಕಿತರಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದನ್ನು ನಿಸರ್ಗದತ್ತ ಕೊಡುಗೆ ಎಂದು ಹೇಳಬೇಕೇ ವಿನಃ ಬೇರೆ ಯಾವ ಅರ್ಥವನ್ನೂ ಕಲ್ಪಿಸಿಕೊಳ್ಳುವಂತಿಲ್ಲ.

ರಾಷ್ಟ್ರರಾಜಧಾನಿ ಸೇರಿದಂತೆ ಭಾರತದಾದ್ಯಂತ ಆರಂಭದಲ್ಲಿ ಕೋವಿಡ್ 19 ಸೋಂಕಿತರ ಗುಣಮುಖರಾಗುವವರ ಸಂಖ್ಯೆ ತುಂಬಾ ಕಡಿಮೆ ಇತ್ತು. ಯಾಕೆಂದರೆ ಜನರು ಈಗಲೂ ಸೋಂಕಿನಿಂದ ಗುಣಮುಖರಾಗುತ್ತಿದ್ದಾರೆ. ಯಾವಾಗ ಸೋಂಕು ಕೊನೆಗೊಳ್ಳುತ್ತದೋ ಯಾರು ಸೋಂಕಿಗೆ ಒಳಗಾಗಿದ್ದಾರೋ ಅವರನ್ನು ಹೊರತುಪಡಿಸಿ ಪ್ರತಿಯೊಬ್ಬರು ಚೇತರಿಸಿಕೊಳ್ಳಲಿದ್ದಾರೆ ಎಂದು ವರದಿ ವಿವರಿಸಿದೆ.

ಕೋವಿಡ್ 19 ಪೀಡಿತ ಸೋಂಕಿತರಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಶೇ.1ಕ್ಕಿಂತ ಕಡಿಮೆಯಾಗಿರುವುದಾಗಿದೆ ತಿಳಿಸಿದೆ. ಸೋಂಕು ಕೊನೆಗೊಳ್ಳುವ ಹೊತ್ತಿನಲ್ಲಿ ಶೇ.99ರಷ್ಟು ಜನರು ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದೆ.

ಈಗಿರುವ ಸೋಂಕಿತರು ಗುಣಮುಖರಾಗುತ್ತಿರುವಂತೆಯೇ ಅವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಯಾವ ರಾಜ್ಯಗಳಲ್ಲಿ ತುಂಬಾ ವೇಗವಾಗಿ ಕೋವಿಡ್ 19 ಸೋಂಕಿತರನ್ನು ಪತ್ತೆಹಚ್ಚಿ, ಚಿಕಿತ್ಸೆ ನೀಡುತ್ತಿದ್ದಾರೋ ಆ ಪ್ರದೇಶದಲ್ಲಿ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಾಗಿ ಹೇಳಿದೆ.

ಭಾರತದಲ್ಲಿ ಶೇ.76.3ರಷ್ಟು ಸೋಂಕಿತರು ಚೇತರಿಸಿಕೊಂಡಿದ್ದಾರೆ. ದೇಶದ ಸುಮಾರು 32.34 ಲಕ್ಷ ಸೋಂಕಿತರಲ್ಲಿ ಈವರೆಗೆ 26.67 ಲಕ್ಷ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ 2,91,826 ಮಂದಿ ಸೋಂಕಿತರಿದ್ದು, ಈಗಾಗಲೇ 2,04, 439 ಜನರು ಗುಣಮುಖರಾಗಿದ್ದಾರೆ. ಈವರೆಗೆ 4,977 ಮಂದಿ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದಲ್ಲಿ 7,03,823 ಮಂದಿ ಸೋಂಕಿತರಿದ್ದು, ಇವರದಲ್ಲಿ 5,14,790 ಜನರು ಗುಣಮುಖರಾಗಿದ್ದಾರೆ. ಈವರೆಗೆ 23,112 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.