ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿ : ಭಾರತದ ರೂಟ್‌ ಸುಗಮವೇ?


Team Udayavani, Feb 5, 2021, 6:20 AM IST

ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿ : ಭಾರತದ ರೂಟ್‌ ಸುಗಮವೇ?

ಚೆನ್ನೈ : ಒಂದೆಡೆ ಆಸ್ಟ್ರೇಲಿಯವನ್ನು ಅವರದೇ ನೆಲದಲ್ಲಿ ಬಗ್ಗುಬಡಿದು ಬಂದ ಭಾರತ, ಇನ್ನೊಂದೆಡೆ ಶ್ರೀಲಂಕಾಕ್ಕೆ ವೈಟ್‌ವಾಶ್‌ ಮಾಡಿ ಏಶ್ಯನ್‌ ಟ್ರ್ಯಾಕ್‌ ಮೇಲೆ ಪಾರಮ್ಯ ಮೆರೆದ ಇಂಗ್ಲೆಂಡ್‌… ಈ ಎರಡು ತಂಡಗಳ ನಡುವಿನ ಮಹತ್ವದ ಟೆಸ್ಟ್‌ ಸರಣಿ ಶುಕ್ರವಾರದಿಂದ ಚೆನ್ನೈನ “ಎಂ.ಎ. ಚಿದಂಬರಂ ಸ್ಟೇಡಿಯಂ’ನಲ್ಲಿ ಮೊದಲ್ಗೊಳ್ಳಲಿದೆ. ಕೊಹ್ಲಿ ಹಾಗೂ ರೂಟ್‌ ಪಡೆಗಳೆರಡೂ ಹಿಂದಿನ ಸರಣಿಯ ಜೋಶ್‌, ಪರಾಕ್ರಮ, ಕೆಚ್ಚನ್ನು ಮುಂದುವರಿಸಿಕೊಂಡು ಹೋದರೆ ಈ ಮುಖಾಮುಖೀ ನಿರೀಕ್ಷೆಗೂ ಮೀರಿದ ಕುತೂಹಲ ಸೃಷ್ಟಿಸುವುದು ಖಂಡಿತ.

ಈ ಸರಣಿ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ವ್ಯಾಪ್ತಿಗೆ ಬರುವುದರಿಂದ ಭಾರತಕ್ಕೆ ಹೆಚ್ಚು ಮಹತ್ವದ್ದಾಗಿದೆ. ಭಾರತ ದ್ವಿತೀಯ ತಂಡವಾಗಿ ಫೈನಲ್‌ ಪ್ರವೇಶಿಸುವ ಹೆಚ್ಚಿನ ಅವಕಾಶ ಹೊಂದಿರುವುದೇ ಇದಕ್ಕೆ ಕಾರಣ. ಹಾಗೆಯೇ ಇದು ಸುದೀರ್ಘ‌ ಕೋವಿಡ್‌-19 ಬ್ರೇಕ್‌ ಬಳಿಕ ಭಾರತದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಯೆಂಬ ಕಾರಣಕ್ಕೆ ಎಲ್ಲರನ್ನೂ ತುದಿಗಾಗಲಲ್ಲಿ ನಿಲ್ಲಿಸಿದೆ.

ವಿರಾಟ್‌ ಕೊಹ್ಲಿ ಮರಳಿ ಟೀಮ್‌ ಇಂಡಿಯಾದ ಚುಕ್ಕಾಣಿ ಹಿಡಿಯುವುದು, ಬುಮ್ರಾ ತವರಲ್ಲಿ ಮೊದಲ ಟೆಸ್ಟ್‌ ಆಡುವುದು, ಇಂಗ್ಲೆಂಡ್‌ ನಾಯಕ ಜೋ ರೂಟ್‌ 100ನೇ ಟೆಸ್ಟ್‌ ಆಡಲಿಳಿಯುವುದರಿಂದಲೂ ಮೊದಲ ಟೆಸ್ಟ್‌ ಪಂದ್ಯ ತನ್ನ ಮೌಲ್ಯವನ್ನು ಹೆಚ್ಚಿಸಿಕೊಂಡಿದೆ. ಬೇಸರವೆಂದರೆ, ವೀಕ್ಷಕರಿಗೆ ಪ್ರವೇಶ ಇಲ್ಲದಿರುವುದು. ಇದಕ್ಕಾಗಿ ದ್ವಿತೀಯ ಟೆಸ್ಟ್‌ ತನಕ ಕಾಯಬೇಕಿದೆ.

ವಿಶ್ವ ದರ್ಜೆಯ ಕ್ರಿಕೆಟಿಗರು
ವಿಶ್ವದ ಯಾವುದೇ ಟ್ರ್ಯಾಕ್‌ಗಳಿಗೂ ಒಗ್ಗಿಕೊಳ್ಳಬಲ್ಲ ಸಾಕಷ್ಟು ಮಂದಿ ವಿಶ್ವ ದರ್ಜೆಯ ಕ್ರಿಕೆಟಿಗರು ಇಂಗ್ಲೆಂಡ್‌ ತಂಡ ದಲ್ಲಿದ್ದಾರೆ. ರೂಟ್‌, ಸ್ಟೋಕ್ಸ್‌, ಬಟ್ಲರ್‌, ಆ್ಯಂಡರ್ಸನ್‌ ಮತ್ತು ಬ್ರಾಡ್‌ ಇವರಲ್ಲಿ ಪ್ರಮುಖರು. ಮೊಯಿನ್‌ ಅಲಿ, ಆರ್ಚರ್‌ ಕೂಡ ಅಪಾಯಕಾರಿಗಳು. ಉಳಿದವರೆಲ್ಲ “ಯಂಗ್‌ ಗನ್ಸ್‌’. ಪೋಪ್‌, ಲಾರೆನ್ಸ್‌, ಲಂಕೆಯಲ್ಲಿ ಮಿಂಚಿದ ಸ್ಪಿನ್‌ದ್ವಯರಾದ ಲೀಚ್‌ ಮತ್ತು ಬೆಸ್‌ ಭಾರತದ ಟರ್ನಿಂಗ್‌ ಟ್ರ್ಯಾಕ್‌ಗಳಲ್ಲೂ ಮ್ಯಾಜಿಕ್‌ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ ಇಂಗ್ಲೆಂಡಿನ ಓಪನಿಂಗ್‌ ಮಾತ್ರ ದುರ್ಬಲ. ಏನೇ ಆದರೂ ಕೊಹ್ಲಿ ಪಡೆ ಆಂಗ್ಲ ರನ್ನು ತೀವ್ರ ಎಚ್ಚರಿಕೆಯಿಂದ ನಿಭಾಯಿಸಬೇಕಾದುದು ಅಗತ್ಯ.

ಭಾರತದ ಕಾಂಬಿನೇಶನ್‌
ಈ ಸರಣಿಯಲ್ಲಿ ಭಾರತದ ಟೀಮ್‌ ಕಾಂಬಿನೇಶನ್‌ನಲ್ಲಿ ಕೆಲವು ಬದಲಾವಣೆ ಕಂಡುಬರಲಿದೆ. ಬ್ಯಾಟಿಂಗ್‌ ವಿಭಾಗದಲ್ಲಿ ತಲೆ ಕೆಡಿಸಿಕೊಳ್ಳಬೇಕಿಲ್ಲ.ರೋಹಿತ್‌-ಗಿಲ್‌, ಪೂಜಾರ, ಕೊಹ್ಲಿ, ರಹಾನೆ, ಪಂತ್‌… ಈ 6 ಸ್ಥಾನಕ್ಕೆ ಸಿಮೆಂಟ್‌ ಹಾಕಲಾಗಿದೆ. ಬೌಲಿಂಗ್‌ ವಿಭಾಗದಲ್ಲಿ ಅಶ್ವಿ‌ನ್‌, ಇಶಾಂತ್‌, ಬುಮ್ರಾ ಅನಿವಾರ್ಯ. ಉಳಿದೆರಡು ಸ್ಥಾನಗಳಿಗೆ ದೊಡ್ಡ ಸ್ಪರ್ಧೆಯೇ ಇದೆ. ಪಾಂಡ್ಯ, ಸುಂದರ್‌, ಠಾಕೂರ್‌, ಸಿರಾಜ್‌, ಪಟೇಲ್‌, ಕುಲದೀಪ್‌ ಅವರಲ್ಲಿ ಯಾರಿಗೆ ಲಕ್‌ ಹೊಡೆಯುತ್ತದೋ ನೋಡಬೇಕು. ಆಡುವ ಬಳಗದಿಂದ ಖಂಡಿತ ವಾಗಿಯೂ ಬೇರ್ಪಡುವವರೆಂದರೆ ರಾಹುಲ್‌, ಅಗರ್ವಾಲ್‌ ಮತ್ತು ಸಾಹಾ.

ಮೈಮರೆತರೆ ಅಪಾಯ!
ಅನುಮಾನವೇ ಇಲ್ಲ, ಭಾರತೀಯರು ಕಾಂಗರೂ ನೆಲದಲ್ಲಿ ತೋರ್ಪಡಿಸಿದ ಪರಾಕ್ರಮ ಈ ಸರಣಿಗೂ ಸ್ಫೂರ್ತಿಯಾಗಲಿದೆ. ಜತೆಗೆ ತವರಿನಂಗಳದ ಲಾಭವೂ ಇದೆ. ಆದರೆ ಯಾವುದೇ ಕಾರಣಕ್ಕೂ ಈ ಎರಡು ಅಂಶಗಳನ್ನು ಲಘುವಾಗಿ ತೆಗೆದುಕೊಳ್ಳುವಂತಿಲ್ಲ, ಮೈಮರೆಯುವಂತಿಲ್ಲ. ಆಗ ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ. ಹೀಗಾಗಿ ಟೀಮ್‌ ಇಂಡಿಯಾ ಪಾಲಿಗೆ ಇದು ನೂತನ ಆರಂಭ, ನೂತನ ಸವಾಲು.

ಇಲ್ಲಿ ಭಾರತದ ಟೀಮ್‌ ಕಾಂಬಿನೇಶನ್‌ ಬದಲಾಗಲಿದೆ. ಕೊಹ್ಲಿ, ಇಶಾಂತ್‌ ತಂಡಕ್ಕೆ ಮರಳಲಿದ್ದಾರೆ. ಆಸ್ಟ್ರೇಲಿಯ ವಿರುದ್ಧ ಬಹಳ ಜಾಣ್ಮೆ ಹಾಗೂ ಅಷ್ಟೇ ಪ್ರಬುದ್ಧ ನಾಯಕತ್ವ ನಿಭಾಯಿಸಿದ ರಹಾನೆ ಇಲ್ಲಿ ಕೇವಲ ಬ್ಯಾಟ್ಸ್‌ಮನ್‌ ಹಾಗೂ ಉಪನಾಯಕರಾಗಿ ಇರುತ್ತಾರೆ. ಅವರೇ ಹೇಳಿದಂತೆ, ಆಸ್ಟ್ರೇಲಿಯ ಸರಣಿ ಈಗ ಇತಿಹಾಸ. ಭಾರತವೀಗ ಇಂಗ್ಲೆಂಡ್‌ ತಂಡಕ್ಕೆ ಗೌರವ ನೀಡಬೇಕಿದೆ.

ಹೌದು, ಆಸ್ಟ್ರೇಲಿಯಕ್ಕೆ ಹೋಲಿಸಿದರೆ ಇಂಗ್ಲೆಂಡ್‌ ಹೆಚ್ಚು ಬಲಿಷ್ಠ ಪಡೆ. ಶಿಸ್ತಿನ ಆಟಕ್ಕೆ ಹೆಸರುವಾಸಿ. ಕಾಂಗರೂಗಳಂತೆ ನಿಂದಿಸುವುದು, ಎದುರಾಳಿ ಆಟಗಾರರನ್ನು ಕೀಳಾಗಿ ಕಾಣುವುದು, ಹೇಗಾದರೂ ಮಾಡಿ ಗೆಲ್ಲಲು ವಾಮಮಾರ್ಗ ಹಿಡಿಯುವುದು ಇವರಿಗೆ ತಿಳಿದಿಲ್ಲ. ಆಂಗ್ಲರದ್ದೇನಿದ್ದರೂ ಸೀದಾ, ಸ್ವತ್ಛ ಆಟ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.