ಭಾರತದಲ್ಲಿ 44 ಸಾವಿರ ಕೋವಿಡ್ ಪ್ರಕರಣ ಪತ್ತೆ, 5 ಲಕ್ಷಕ್ಕಿಂತ ಕೆಳಕ್ಕಿಳಿದ ಸಕ್ರಿಯ ಪ್ರಕರಣ
ಅರುಣಾಚಲ ಪ್ರದೇಶ, ತ್ರಿಪುರಾ, ಒಡಿಶಾ, ಚತ್ತೀಸ್ ಗಢ್ ಮತ್ತು ಮಣಿಪುರಕ್ಕೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Team Udayavani, Jul 3, 2021, 9:51 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 44,111 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 738 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ(ಜುಲೈ03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಇಂದು ಅನ್ಲಾಕ್ 3.0 ಕುರಿತು ಸಭೆ: ಮತ್ತಷ್ಟು ನಿರ್ಬಂಧ ಸಡಿಲಿಕೆ ಸಾಧ್ಯತೆ
ಸುಮಾರು 100 ದಿನಗಳ ನಂತರ ದೇಶದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕೆಳಕ್ಕೆ ಇಳಿಕೆಯಾಗಿದೆ. ದೇಶದಲ್ಲಿ ಈಗ 4,95,533 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಹೇಳಿದೆ.
ಕಳೆದ 24ಗಂಟೆಯಲ್ಲಿ ಕೋವಿಡ್ ನಿಂದ 738 ಮಂದಿ ಸಾವನ್ನಪ್ಪಿದ್ದು, 57,477 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಈವರೆಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,01,050ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಟ್ಟು 2,96,05,779 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.
ದೇಶದಲ್ಲಿನ ವಾರದ ಪಾಸಿಟಿವಿಟಿ ದರ ಶೇ.2.50ಕ್ಕೆ ಇಳಿಕೆಯಾಗಿದ್ದು, ದಿನದ ಪಾಸಿಟಿವಿಟಿ ದರ ಶೇ.2.35ಕ್ಕೆ ಇಳಿಕೆಯಾಗಿದೆ. ಏತನ್ಮಧ್ಯೆ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಕೇರಳ, ಅರುಣಾಚಲ ಪ್ರದೇಶ, ತ್ರಿಪುರಾ, ಒಡಿಶಾ, ಚತ್ತೀಸ್ ಗಢ್ ಮತ್ತು ಮಣಿಪುರಕ್ಕೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!