2000 ಕಿ.ಮೀ.ವರೆಗೂ ದಾಳಿ ನಡೆಸಬಲ್ಲ ಅತ್ಯಾಧುನಿಕ ಅಗ್ನಿ ಪ್ರೈಮ್ ಕ್ಷಿಪಣಿ ಯಶಸ್ವಿ ಉಡಾವಣೆ
ಉನ್ನತ ಮಟ್ಟದ ನಿಖರತೆಯೊಂದಿಗೆ ಗುರಿ ತಲುಪಿರುವುದಾಗಿ ತಿಳಿಸಿದೆ.
Team Udayavani, Jun 28, 2021, 1:52 PM IST
ನವದೆಹಲಿ:ಒಡಿಶಾ ಕರಾವಳಿ ಪ್ರದೇಶದಲ್ಲಿ ಭಾರತ ಸೋಮವಾರ(ಜೂನ್ 28) ಹೊಸ ತಲೆಮಾರಿನ ನೂತನ ಅತ್ಯಾಧುನಿಕ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆಗೊಳಿಸಿದ್ದು, ಇದು ಎರಡು ಸಾವಿರ ಕಿಲೋ ಮೀಟರ್ ದೂರದವರೆಗೆ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೆಂಪುಕೋಟೆ ಹಿಂಸಾಚಾರ ಪ್ರಕರಣ: ಪಂಜಾಬ್ ನಲ್ಲಿ ಆರೋಪಿ ಗುರ್ಜೋತ್ ಸಿಂಗ್ ಬಂಧನ
ಈ ಹೊಸ ಪರಮಾಣು ಸಾಮರ್ಥ್ಯದ ಕ್ಷಿಪಣಿಯನ್ನು ಸಂಕೀರ್ಣ ಉಪಕರಣಗಳಿಂದ ತಯಾರಿಸಲ್ಪಟ್ಟಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. ನೂತನ ಅಗ್ನಿ ಪ್ರೈಮ್ ಕ್ಷಿಪಣಿಯಲ್ಲಿ ಸಾಕಷ್ಟು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ ಎಂದು ಡಿಆರ್ ಡಿಒ ಅಧಿಕಾರಿಗಳು ತಿಳಿಸಿದ್ದಾರೆ.
ಅತ್ಯಾಧುನಿಕ ತಂತ್ರಜ್ಞಾನದ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಸೋಮವಾರ ಒಡಿಶಾ ತೀರದಲ್ಲಿ ಬೆಳಗ್ಗೆ 10.55ಕ್ಕೆ ಪರೀಕ್ಷಾರ್ಥ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
India successfully test-fired the Agni-Prime missile today, off the coast of Odisha.
It can hit targets up to a range of 2000 kms, & is very short & light in comparison with other missiles in this class. A lot of new technologies incorporated in the new missile: DRDO officials pic.twitter.com/zq7ffypqFM
— ANI (@ANI) June 28, 2021
ಕ್ಷಿಪಣಿ ಉಡಾವಣೆ ಮತ್ತು ಸಾಮರ್ಥ್ಯದ ಪರೀಕ್ಷೆಗಾಗಿ ಪೂರ್ವ ಕರಾವಳಿಯುದ್ಧಕ್ಕೂ ಇರುವ ವಿವಿಧ ಟೆಲಿಮೆಟ್ರಿ ಮತ್ತು ರಾಡಾರ್ ಕೇಂದ್ರಗಳು ಪರಿಶೀಲನೆ ನಡೆಸಿರುವುದಾಗಿ ವರದಿ ಹೇಳಿದೆ. ಅಗ್ನಿ ಪ್ರೈಮ್ ಕ್ಷಿಪಣಿ ಸೂಕ್ತ ಪಥದಲ್ಲಿ ಚಲಿಸಿದ್ದು, ಉನ್ನತ ಮಟ್ಟದ ನಿಖರತೆಯೊಂದಿಗೆ ಗುರಿ ತಲುಪಿರುವುದಾಗಿ ಡಿಆರ್ ಡಿಒ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…