ICC World Cup Test Championship ಫೈನಲ್‌: ಫಾಲೋಆನ್‌ ತಪ್ಪಿಸಲು ಭಾರತ ಪ್ರಯತ್ನ


Team Udayavani, Jun 9, 2023, 7:44 AM IST

ICC INDIA

ಲಂಡನ್‌: ಬಲಿಷ್ಠ ಆಸ್ಟ್ರೇಲಿಯ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹೋರಾಟದಲ್ಲಿ ಭಾರತ ಫಾಲೋಆನ್‌ ತಪ್ಪಿಸಲು ಪ್ರಯತ್ನ ನಡೆಸುತ್ತಿದೆ. ಆಸ್ಟ್ರೇಲಿಯ ಮೊದಲ ಇನ್ನಿಂಗ್ಸ್‌ನಲ್ಲಿ 469 ರನ್‌ ಗಳಿಸಿದ್ದರೆ ಭಾರತ ದ್ವಿತೀಯ ದಿನದ ಆಟದ ಮುಕ್ತಾಯಕ್ಕೆ ಈಗಾಗಲೇ ಐದು ವಿಕೆಟನ್ನು ಕಳೆದುಕೊಂಡಿದ್ದು 151 ರನ್‌ ಗಳಿಸಿದೆ. ಇನ್ನುಳಿದ ಐದು ವಿಕೆಟ್‌ಗಳಿಂದ ಭಾರತ ಫಾಲೋಆನ್‌ ತಪ್ಪಿಸಲು ಗರಿಷ್ಠ ಪ್ರಯತ್ನ ಮಾಡಬೇಕಾಗಿದೆ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಬೇಕಾದರೆ ಇನ್ನೂ 318 ರನ್‌ ಗಳಿಸಬೇಕಾಗಿದೆ.

ಆರಂಭಿಕ ಬಳಿಕ ಟೆಸ್ಟ್‌ ಅನುಭವಿ ಚೇತೇಶ್ವರ ಪೂಜಾರ, ವಿರಾಟ್‌ ಕೊಹ್ಲಿ ಮತ್ತು ರವೀಂದ್ರ ಜಡೇಜ ಅವರನ್ನು ತಂಡ ಕಳೆದುಕೊಂಡಿದೆ. ಪೂಜಾರ ಮತ್ತು ಕೊಹ್ಲಿ 14 ರನ್ನಿಗೆ ಔಟಾದರೆ ಜಡೇಜ 48 ರನ್‌ ಗಳಿಸಿ ಔಟಾದರು. ಅವರು ಅಜಿಂಕ್ಯ ರಹಾನೆ ಜತೆ ಐದನೇ ವಿಕೆಟಿಗೆ 71 ರನ್‌ ಪೇರಿಸಿದ್ದು ತಂಡವನ್ನು ಆಧರಿಸುವ ಪ್ರಯತ್ನ ಮಾಡಿದರು. ದ್ವಿತೀಯ ದಿನದ ಆಟ ನಿಂತಾಗ ರಹಾನೆ 29 ಮತ್ತು ಶ್ರೀಕರ್‌ ಭರತ್‌ 5 ರನ್ನಿನಿಂದ ಆಡುತ್ತಿದ್ದರು. ಮೂರನೇ ದಿನದ ಬೆಳಗ್ಗಿನ ಅವಧಿಯಲ್ಲಿ ಭಾರತ ಎಚ್ಚರಿಕೆಯಿಂದ ಆಡಿ ಫಾಲೋಆನ್‌ ತಪ್ಪಿಸಲು ಪ್ರಯತ್ನಿಸಬೇಕಾಗಿದೆ.

ಭಾರತದ ಬ್ಯಾಟಿಂಗ್‌ ಶಕ್ತಿಗೆ ಬಲವಾದ ಏಟು ನೀಡಿರುವ ಆಸ್ಟ್ರೇಲಿಯ ಸದ್ಯದ ಸ್ಥಿತಿಯಲ್ಲಿ ಮೇಲುಗೈ ಸಾಧಿಸಿದೆ. ಭಾರತದ ಐದು ವಿಕೆಟನ್ನು ಹಾರಿಸಿರುವ ಆಸ್ಟ್ರೇಲಿಯ ಇನ್ನುಳಿದ ವಿಕೆಟ್‌ ಉರುಳಿಸಲು ಪ್ರಯತ್ನ ಮಾಡುತ್ತಿದೆ. ಬೌಲಿಂಗ್‌ ಮಾಡಿದ ಐವರು ಬೌಲರ್‌ಗಳು ತಲಾ ಒಂದು ವಿಕೆಟ್‌ ಉರುಳಿಸಿದ್ದಾರೆ.

ಆರಂಭಿಕರ ಪತನ
ಟೀ ವಿರಾಮದ ಮೊದಲು 10 ಓವರ್‌ ಆಡಿದ ಭಾರತವು ಆರಂಭಿಕರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ನಾಯಕ ರೋಹಿತ್‌ ಶರ್ಮ 15 ರನ್ನಿಗೆ ಔಟಾದರೆ ಶುಭ್‌ಮನ್‌ ಗಿಲ್‌ ಅವರು ಸ್ಕಾಟ್‌ ಬೋಲ್ಯಾಂಡ್‌ ಅವರ ಎಸೆತವನ್ನು ಅರ್ಥಮಾಡಿಕೊಳ್ಳಲು ವಿಫ‌ಲರಾಗಿ ಕ್ಲೀನ್‌ಬೌಲ್ಡ್‌ ಆದರು.

ಆಸ್ಟ್ರೇಲಿಯ 469ಕ್ಕೆ ಆಲೌಟ್‌
ಈ ಮೊದಲು ಮೂರು ವಿಕೆಟಿಗೆ 327 ರನ್ನುಗಳಿಂದ ದಿನದಾಟ ಆರಂಭಿಸಿದ ಆಸ್ಟ್ರೇಲಿಯ ತಂಡವು ಟ್ರ್ಯಾವಿಸ್‌ ಹೆಡ್‌, ಸ್ಮಿತ್‌ ಮತ್ತು ಕ್ಯಾರಿ ಅವರ ಉತ್ತಮ ಆಟದಿಂದಾಗಿ 469 ರನ್‌ ಗಳಿಸಿ ಆಲೌಟಾಯಿತು. ಮೊದಲ ದಿನ ಅಜೇಯರಾಗಿ ಉಳಿದಿದ್ದ ಹೆಡ್‌ ಮತ್ತು ಸ್ಮಿತ್‌ ಆಟ ಮುಂದುವರಿಸಿದ್ದು ನಾಲ್ಕನೇ ವಿಕೆಟಿಗೆ 285 ರನ್ನುಗಳ ಜತೆಯಾಟ ನಡೆಸಿ ತಂಡದ ಬೃಹತ್‌ ಮೊತ್ತಕ್ಕೆ ಕಾರಣರಾದರು.

ಮೊದಲ ದಿನ 95 ರನ್‌ ಗಳಿಸಿದ್ದ ಸ್ಮಿತ್‌ ದ್ವಿತೀಯ ದಿನ ಸಿರಾಜ್‌ ಅವರ ಬೌಲಿಂಗ್‌ನಲ್ಲಿ ಎರಡು ಬೌಂಡರಿ ಬಾರಿಸಿ ಶತಕ ಪೂರ್ತಿಗೊಳಿಸಿದರು. ಇದು ಇಂಗ್ಲೆಂಡಿನಲ್ಲಿ ಅವರ ಏಳನೇ ಮತ್ತು ಓವಲ್‌ನಲ್ಲಿ ಮೂರನೇ ಶತಕವಾಗಿದೆ. ಒಟ್ಟಾರೆ ಟೆಸ್ಟ್‌ ಬಾಳ್ವೆಯ 31ನೇ ಶತಕ ಆಗಿದೆ. ಸ್ಮಿತ್‌ ಅಂತಿಮವಾಗಿ 268 ಎಸೆತ ಎದುರಿಸಿ 121 ರನ್‌ ಗಳಿಸಿ ಔಟಾದರು. ಮೊದಲ ದಿನ ಶತಕ ಸಿಡಿಸಿ ಸಂಭ್ರಮಿಸಿದ್ದ ಹೆಡ್‌ 174 ಎಸೆತಗಳಿಂದ 163 ರನ್‌ ಗಳಿಸಿ ಔಟಾದರು. 25 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದರು.

ಕೊನೆ ಹಂತದಲ್ಲಿ ಅಲೆಕ್ಸ್‌ ಕ್ಯಾರಿ ಬಿರುಸಿನ ಆಟ ಆಡಿದ್ದರಿಂದ ಆಸ್ಟ್ರೇಲಿಯದ ಮೊತ್ತ 450ರ ಗಡಿ ದಾಟುವಂತಾಯಿತು. ಅವರು 69 ಎಸೆತಗಳಿಂದ 48 ರನ್‌ ಹೊಡೆದರು. ಈ ನಡುವೆ ಭಾರತ ಬೆಳಗ್ಗಿನ ಅವಧಿಯಲ್ಲಿ ಆಸ್ಟ್ರೇಲಿಯದ ನಾಲ್ಕು ವಿಕೆಟ್‌ ಕಿತ್ತ ಕಾರಣ ಸ್ವಲ್ಪಮಟ್ಟಿಗೆ ಮೇಲುಗೈ ಸಾಧಿಸಿತ್ತು.

ಬಿಗು ದಾಳಿ ಸಂಘಟಿಸಿದ ಮೊಹಮ್ಮದ್‌ ಸಿರಾಜ್‌ 108 ರನ್ನಿಗೆ 4 ವಿಕೆಟ್‌ ಪಡೆದರೆ ಶಮಿ ಮತ್ತು ಠಾಕೂರ್‌ ತಲಾ ಎರಡು ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.