ಹೊಸ ಮಜಲಿನತ್ತ ಹೊರಳಿದ ಭಾರತ-ಅಮೆರಿಕ ಬಾಂಧವ್ಯ


Team Udayavani, Jun 24, 2023, 6:27 AM IST

MODI BAIDEN

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಕೇವಲ ಉಭಯ ರಾಷ್ಟ್ರಗಳಲ್ಲಿ ಮಾತ್ರವಲ್ಲದೆ ಜಾಗತಿಕವಾಗಿ ಸಂಚಲನ ಮೂಡಿಸಿತ್ತು. ರಕ್ಷಣೆ, ತಂತ್ರಜ್ಞಾನ, ಬಾಹ್ಯಾಕಾಶ ಸಹಿತ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ಒಪ್ಪಂದಗಳಿಗೆ ಎರಡೂ ರಾಷ್ಟ್ರಗಳು ಸಹಿ ಹಾಕಿವೆ. ವಿಸ್ತರಣವಾದ, ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟವನ್ನು ಮುಂದುವರಿಸುವ ಕುರಿತಂತೆ ಒಮ್ಮತದ ನಿಲುವು ತಾಳಿರುವ ಭಾರತ ಮತ್ತು ಅಮೆರಿಕ ತಮ್ಮ ಆದ್ಯತೆಯೇನು ಎಂಬುದನ್ನು ಸಾರುವ ಮೂಲಕ ಈ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಜಗತ್ತಿನ ಕೆಲವು ರಾಷ್ಟ್ರಗಳಿಗೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶವನ್ನು ರವಾನಿಸಿವೆ.

ಅಮೆರಿಕದಲ್ಲಿನ ವಿವಿಧ ಕ್ಷೇತ್ರಗಳ ತಜ್ಞರು, ಉದ್ಯಮಿಗಳು, ಭಾರತೀಯ ಸಮುದಾಯದವರು ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಿದರು. ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವ ರೊಡನೆ ನಡೆಸಿದ ಮಾತುಕತೆಯ ವೇಳೆ ಉಭಯ ರಾಷ್ಟ್ರಗಳ ಸಂಬಂಧ, ದ್ವಿಪಕ್ಷೀಯ ಸಹಕಾರ ಮತ್ತು ರಷ್ಯಾ-ಉಕ್ರೇನ್‌ ನಡುವೆ ನಡೆಯು ತ್ತಿರುವ ಯುದ್ಧವನ್ನು ರಾಜತಾಂತ್ರಿಕ ನೆಲೆಯಲ್ಲಿ ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸುವ ಕುರಿತಂತೆ ಪ್ರಸ್ತಾವಿಸಿದರು. ಈ ಎಲ್ಲ ವಿಷಯಗಳ ಬಗ್ಗೆಯೂ ಜೋ ಬೈಡೆನ್‌ ಅವರು ಸಹಮತ ವ್ಯಕ್ತಪಡಿಸಿದರು.

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಅಮೆರಿಕದ ವಿವಿಧ ಸಂಸ್ಥೆಗಳು, ವಾಣಿಜ್ಯ ಕಂಪೆನಿಗಳ ಮುಖ್ಯಸ್ಥರೊಂದಿಗೆ ಮೋದಿ ಅವರು ನಡೆಸಿದ ಸಮಾಲೋಚನೆಯ ಸಂದರ್ಭದಲ್ಲಿ ಪ್ರಮುಖ ಒಪ್ಪಂದಗಳಿಗೆ ಅಂಕಿತ ಹಾಕಲಾಯಿತಲ್ಲದೆ ವಿವಿಧ ವಿಚಾರಗಳಲ್ಲಿ ಸಹಭಾಗಿತ್ವವನ್ನು ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ರಕ್ಷಣ ಕ್ಷೇತ್ರದಲ್ಲಿ ಉಭಯ ದೇಶಗಳು ಮಹತ್ವದ ಒಪ್ಪಂದಗಳನ್ನು ಮಾಡಿಕೊಂಡಿವೆ. ಯುದ್ಧ ವಿಮಾನಗಳ ಎಂಜಿನ್‌ ಅನ್ನು ಭಾರತದಲ್ಲಿಯೇ ಉತ್ಪಾದಿಸುವ ಸಂಬಂಧ ಅಮೆರಿಕದ ಜನರಲ್‌ ಎಲೆಕ್ಟ್ರಿಕಲ್‌ ಮತ್ತು ಭಾರತದ ಎಚ್‌ಎಎಲ್‌ ನಡುವಣ ಒಪ್ಪಂದಕ್ಕೆ ಅಂಕಿತ ಹಾಕಲಾಯಿತು. ಈ ಬಗೆಗಿನ ತಂತ್ರಜ್ಞಾನ ವರ್ಗಾವಣೆಗೂ ಅಮೆರಿಕನ್‌ ಕಂಪೆನಿ ಸಮ್ಮತಿಸಿದೆ. ಇನ್ನು 30 ಪ್ರಿಡೇಟರ್‌ ಡ್ರೋನ್‌ಗಳನ್ನು ಖರೀದಿಸುವ ಪ್ರಸ್ತಾವನೆಗೆ ಅಮೆರಿಕ ತನ್ನ ಒಪ್ಪಿಗೆ ಸೂಚಿಸಿದೆ. ಮುಂದಿನ ವರ್ಷ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಜಂಟಿ ಗಗನಯಾನ ಕೈಗೊಳ್ಳಲು ಇಸ್ರೋ ಮತ್ತು ನಾಸಾ ಪರಸ್ಪರ ಒಪ್ಪಿಗೆ ಸೂಚಿಸಿವೆ.

ಸೆಮಿಕಂಡಕ್ಟರ್‌ಗಳ ಜೋಡಣೆ ಮತ್ತು ಪರೀಕ್ಷಾ ವ್ಯವಸ್ಥೆ ನಿರ್ಮಾಣಕ್ಕೆ ಸಹಕಾರ, ಅಮೆರಿಕ ನೇತೃತ್ವದ ಖನಿಜಗಳ ಸುರಕ್ಷ ಭಾಗೀದಾರಿಕೆಯಲ್ಲಿ ಭಾರತದ ಸೇರ್ಪಡೆ, ಸುಸ್ಥಿರ ಇಂಧನಗಳಿಗೆ ಉತ್ತೇಜನ, ಎಲೆಕ್ಟ್ರಿಕ್‌ ವಾಹನಗಳಲ್ಲಿ ಬಳಸಲ್ಪಡುವ ಬ್ಯಾಟರಿಗಳ ಉತ್ಪಾದನೆ, ಸುಧಾರಿತ ದೂರಸಂಪರ್ಕ, ಕೃತಕ ಬುದ್ಧಿಮತ್ತೆ, ಸುಧಾರಿತ ಕಂಪ್ಯೂಟಿಂಗ್‌ ತಂತ್ರಜ್ಞಾನ, ಸ್ಟೆಮ್‌ ವಲಯದಲ್ಲಿ ಪ್ರತಿಭಾವಂತರಿಗೆ ಉತ್ತೇಜನ, ಪ್ರಯಾಣಿಕ ವಿಮಾನಗಳ ಖರೀದಿ, ಎಚ್‌-1ಬಿ ವೀಸಾ ನಿಯಮಾವಳಿಗಳಲ್ಲಿ ಸಡಿಲಿಕೆ, ಬೆಂಗಳೂರು ಮತ್ತು ಅಹ್ಮದಾಬಾದ್‌ನಲ್ಲಿ ಅಮೆರಿಕದ ದೂತಾವಾಸ ಕಚೇರಿ ಸ್ಥಾಪನೆ, ಇಂಡೋ-ಫೆಸಿಫಿಕ್‌ ಪ್ರದೇಶದಲ್ಲಿ ಪರಸ್ಪರ ಸಹಕಾರದಿಂದ ಕಾರ್ಯಾಚರಣೆ, ಶಿಕ್ಷಣ, ಆರೋಗ್ಯ ಸಹಿತ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲು ಭಾರತ ಮತ್ತು ಅಮೆರಿಕ ಸಮ್ಮತಿಸಿವೆ.

ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಈ ಪ್ರವಾಸ ನಿರೀಕ್ಷೆಗೂ ಮೀರಿ ಯಶ ಕಂಡಿದೆ. ಉಭಯ ದೇಶಗಳು ಮಾಡಿಕೊಂಡಿರುವ ಒಪ್ಪಂದಗಳು ಮತ್ತು ಸಹಮತ ವ್ಯಕ್ತಪಡಿಸಿರುವ ವಿಚಾರಗಳು ಅಕ್ಷರಶಃ ಅನುಷ್ಠಾನಕ್ಕೆ ಬಂದದ್ದೇ ಆದಲ್ಲಿ ಭಾರತ ಮತ್ತು ಅಮೆರಿಕ ನಡುವಣ ಬಾಂಧವ್ಯವನ್ನು ಹೊಸ ಮಜಲಿನತ್ತ ಕೊಂಡೊಯ್ಯಲಿರುವುದು ನಿಶ್ಚಿತ.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.