26/11 ಮುಂಬೈ ದಾಳಿ ಕೃತ್ಯಕ್ಕೆ 12 ವರ್ಷ: ದಾಳಿಯ ನೋವನ್ನು ಭಾರತ ಎಂದಿಗೂ ಮರೆಯಲ್ಲ: ಪ್ರಧಾನಿ
ದಾಳಿಯಲ್ಲಿ ಹುತಾತ್ಮರಾದ ಪೊಲೀಸರು, ಪ್ರಾಣ ಕಳೆದುಕೊಂಡಿದ್ದ ಜನರನ್ನು ಸ್ಮರಿಸಿ ಗೌರವ ಸಲ್ಲಿಸಿದರು.
Team Udayavani, Nov 26, 2020, 3:25 PM IST
ನವದೆಹಲಿ:ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ 2008ರ ನವೆಂಬರ್ 26ರಂದು ನಡೆದ ಭಯೋತ್ಪಾದಕ ದಾಳಿಯ 12ನೇ ವರ್ಷದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, 2008ರಲ್ಲಿ ಮುಂಬೈ ಮೇಲೆ ನಡೆದ ಉಗ್ರ ದಾಳಿಯ ನೋವನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ. ಅಲ್ಲದೇ ಭಾರತ ಭಯೋತ್ಪಾದಕ ಕೃತ್ಯವನ್ನು ಹೊಸ ನೀತಿಯ ಮೂಲಕ ಹುಟ್ಟಡಗಿಸಲು ಮುಂದಾಗಿರುವುದಾಗಿ ತಿಳಿಸಿದರು.
ಗುರುವಾರ(ನವೆಂಬರ್ 26, 2020) ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಪೊಲೀಸರು, ಪ್ರಾಣ ಕಳೆದುಕೊಂಡಿದ್ದ ಜನರನ್ನು ಸ್ಮರಿಸಿ ಗೌರವ ಸಲ್ಲಿಸಿದರು.
2008ರಲ್ಲಿ ಪಾಕಿಸ್ತಾನ ಮುಂಬೈ ನೆಲದಲ್ಲಿ ನಡೆಸಿದ ಭಯೋತ್ಪಾದಕ ದಾಳಿ ಕೃತ್ಯದಲ್ಲಿ ಹಲವಾರು ಭಾರತೀಯರು ಸಾವನ್ನಪ್ಪಿದ್ದರು. ವಿವಿಧ ದೇಶಗಳ ಪ್ರಜೆಗಳು ಕೂಡಾ ಪ್ರಾಣ ಕಳೆದುಕೊಂಡಿದ್ದರು. ನಾನು ಈ ಸಂದರ್ಭದಲ್ಲಿ ಅವರೆಲ್ಲರಿಗೂ ಗೌರವ ಸಲ್ಲಿಸುವುದಾಗಿ ಪ್ರಧಾನಿ ಹೇಳಿದರು.
2008ರ ನವೆಂಬರ್ 26ರಂದು ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಮುಂಬೈ ನಗರಿಯಲ್ಲಿ ನಾಲ್ಕು ದಿನಗಳ ಕಾಲ 12 ಕಡೆ ಶೂಟೌಟ್ ಮತ್ತು ಬಾಂಬ್ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಆರು ಅಮೆರಿಕನ್ ಪ್ರಜೆಗಳು, 9 ಉಗ್ರರು ಸೇರಿದಂತೆ 166 ಮಂದಿ ಸಾವನ್ನಪ್ಪಿದ್ದರು.
ಮುಂಬೈನ ಪ್ರತಿಷ್ಠಿತ ತಾಜ್ ಮಹಲ್ ಹೋಟೆಲ್, ದ ಒಬೆರಾಯ್ ಹೋಟೆಲ್, ದ ಲಿಯೋಪೋಲ್ಡ್ ಕೆಫೆ, ನಾರಿಮನ್ ಹೌಸ್ ಮತ್ತು ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
MUST WATCH
ಹೊಸ ಸೇರ್ಪಡೆ
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ