ಮತ್ತೆ ಹುಟ್ಟಿ ಬನ್ನಿ: ಭಾರತದ ಬ್ಯಾಡ್ಮಿಂಟನ್ ದಂತಕಥೆ ನಂದು ನಾಟೇಕರ್ ವಿಧಿವಶ
ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿನ ಸಾಧನೆಗಾಗಿ 1961ರಲ್ಲಿ ನಾಟೇಕರ್ ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Team Udayavani, Jul 28, 2021, 4:21 PM IST
ನವದೆಹಲಿ: ಭಾರತದ ಬ್ಯಾಡ್ಮಿಂಟನ್ ಕ್ಷೇತ್ರದ ದಂತಕಥೆ ನಂದು ನಾಟೇಕರ್ (88ವರ್ಷ) ಬುಧವಾರ (ಜುಲೈ 28) ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬ್ಯಾಂಡ್ಮಿಟನ್ ಕೋರ್ಟ್ ನಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ನಾಟೇಕರ್ ಅವರು ವಿದೇಶದ ಟೂರ್ನ್ ಮೆಂಟ್ ಅವಕಾಶ ಪಡೆದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಭಾಜನರಾಗಿದ್ದರು.
ಇದನ್ನೂ ಓದಿ:ಆರೋಗ್ಯದ ಮೇಲೆ ಪರಿಣಾಮ…ಖಾಲಿ ಹೊಟ್ಟೆಗೆ ಇವುಗಳನ್ನು ಸೇವಿಸಬೇಡಿ
1956ರಲ್ಲಿ ಮಲೇಶ್ಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ನಂದು ನಾಟೇಕರ್ ಗೆಲ್ಲುವ ಮೂಲಕ ಕ್ರೀಡಾಲೋಕದ ಗಮನಸೆಳೆದಿದ್ದರು. ಆಲ್ ಇಂಗ್ಲೆಂಡ್ ನ ಕ್ವಾರ್ಟರ್ ಫೈನಲ್ ತಲುಪಿದ್ದ ಪ್ರಥಮ ಭಾರತೀಯ ಬ್ಯಾಡ್ಮಿಂಟನ್ ಆಟಗಾರರಾಗಿದ್ದ ಅವರು ಐದು ರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು.
ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿನ ಸಾಧನೆಗಾಗಿ 1961ರಲ್ಲಿ ನಾಟೇಕರ್ ಅವರಿಗೆ ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 1965ರಲ್ಲಿ ಜಮೈಕಾದಲ್ಲಿ ನಡೆದ ಕಾಮನ್ ವೆಲ್ತ್ ಗೇಮ್ಸ್ ನಲ್ಲಿಯೂ ನಾಟೇಕರ್ ಭಾರತವನ್ನು ಪ್ರತಿನಿಧಿಸಿದ್ದರು.
ನಂದು ನಾಟೇಕರ್ ಅವರ ಪುತ್ರ ಗೌರವ್ ಕೂಡಾ ಕ್ರೀಡಾಪಟುವಾಗಿದ್ದಾರೆ. ಗೌರವ್ ಟೆನ್ನಿಸ್ ಆಟಗಾರರಾಗಿದ್ದು, ಇವರು 1994ರಲ್ಲಿ ಹಿರೋಶಿಮಾ ಏಷ್ಯನ್ ಗೇಮ್ಸ್ ನಲ್ಲಿ ಲಿಯಾಂಡರ್ ಪೇಸ್ ಜತೆಗೂಡಿ ಆಟವಾಡಿದ್ದು, ಚಿನ್ನದ ಪದಕವನ್ನು ಜಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ