ಕೆನಡಾ/ಅಮೆರಿಕ ಗಡಿ: ಹಿಮಪಾತಕ್ಕೆ ಸಿಲುಕಿ ಸಾವನ್ನಪ್ಪಿದ್ದ ಭಾರತೀಯ ಕುಟುಂಬದ ಗುರುತು ಪತ್ತೆ
ಹಿಮಪಾತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.
Team Udayavani, Jan 28, 2022, 11:18 AM IST
ವಾಷಿಂಗ್ಟನ್: ಮೈಕೊರೆಯುವಂತಹ ಚಳಿಗಾಳಿ, ಹಿಮಪಾತಕ್ಕೆ ಸಿಲುಕಿ ಇತ್ತೀಚೆಗೆ ಕೆನಡಾ/ಅಮೆರಿಕದ ಗಡಿಭಾಗದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದ ನಾಲ್ವರು ಭಾರತೀಯರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತ: 24ಗಂಟೆಯಲ್ಲಿ 2.51 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಪಾಸಿಟಿವಿಟಿ ದರ ಶೇ.16
ಈ ಭಾರತೀಯ ಕುಟುಂಬ ಕಾನೂನು ಬಾಹಿರವಾಗಿ ಮಧ್ಯವರ್ತಿಗಳ ಸಲಹೆಯಂತೆ ಗಡಿಯನ್ನು ದಾಟಿದ್ದು, ರಾತ್ರಿ ವೇಳೆ ಮೈನಸ್ 36 ಡಿಗ್ರಿ ಸೆಲ್ಸಿಯಸ್ ಮೈಕೊರೆಯುವಂತಹ ಚಳಿಗಾಳಿ, ಹಿಮಪಾತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರು.
ಜನವರಿ 19ರಂದು ಮ್ಯಾನಿಟೋಬಾ ಸಮೀಪದ ಎಮರ್ಸನ್ ಪ್ರದೇಶದಲ್ಲಿ ಅಮೆರಿಕವನ್ನು ಅಕ್ರಮವಾಗಿ ಗಡಿಭಾಗದ ಮೂಲಕ ಒಳಪ್ರವೇಶಿಸುವ ವೇಳೆ ಭಾರತೀಯ ಮೂಲದ ಜಗದೀಶ್ ಬಲ್ ದೇವ್ ಭಾಯಿ ಪಟೇಲ್ (39), ಪತ್ನಿ ವೈಶಾಲಿಬೆನ್ ಜಗದೀಶ್ ಕುಮಾರ್ ಪಟೇಲ್ 37ವರ್ಷ), ವಿಹಾಂಗಿ ಜಗದೀಶ್ ಕುಮಾರ್ (11ವರ್ಷ) ಮತ್ತು ಧಾರ್ಮಿಕ್ ಜಗದೀಶ್ ಕುಮಾರ್ (3ವರ್ಷ) ಭಾರೀ ಚಳಿ, ಹಿಮಪಾತ ತಾಳಲಾರದೆ ಸಾವನ್ನಪ್ಪಿರುವುದಾಗಿ ಕೆನಡಾದ ಅಧಿಕಾರಿಗಳು ವಿವರಿಸಿದ್ದಾರೆ.
ಪಟೇಲ್ ಕುಟುಂಬ ಗುಜರಾತ್ ನ ಕಾಲೋಲ್ ನ ದಿಂಗುಚಾ ಗ್ರಾಮದವರಾಗಿದ್ದಾರೆ ಎಂದು ವರದಿ ತಿಳಿಸಿದೆ. ಇದಕ್ಕೂ ಮುನ್ನ ಕೆನಡಾ ಅಧಿಕಾರಿಗಳು, ಹಿಮಪಾತ, ಚಳಿಗಾಳಿಗೆ ಸಿಲುಕಿ ಭಾರತೀಯ ಮೂಲದ ಪುರುಷ, ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರ ಶವ ಪತ್ತೆಯಾಗಿರುವುದಾಗಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಒಣ ಪಡಿತರ ನೀಡಿ ಆಕ್ರೋಶಕ್ಕೆ ಗುರಿಯಾದ ಚೀನಾ
ಕಾಡ್ಗಿಚ್ಚಿ ನಲ್ಲೂ ಟಿಕ್ ಟಾಕ್ ಹುಚ್ಚು!; ಪಾಕಿಸ್ತಾನಿ ಮಹಿಳೆಯ ವಿರುದ್ಧ ಆಕ್ರೋಶ
ಶ್ರೀಲಂಕಾ ಏರ್ಲೈನ್ಸ್ ಮಾರಲು ಹೊರಟ ಪ್ರಧಾನಿ ವಿಕ್ರಮ ಸಿಂಘೆ
6 ತಿಂಗಳಲ್ಲಿ ಗ್ರೀನ್ ಕಾರ್ಡ್ ಪ್ರಕ್ರಿಯೆ ನಡೆಸಲು ಜೋ ಬೈಡೆನ್ ಅವರಿಗೆ ಶಿಫಾರಸು
ಜಮ್ಮು& ಕಾಶ್ಮೀರದ ಕುರಿತು ಪಾಕ್ ನಿಲುವಳಿಗೆ ಭಾರತ ತಿರಸ್ಕಾರ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿಗೆ ರೈಲಿನಲ್ಲಿ ಬಸ್ ಸಾಗಣೆ; ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಹೊರಟ 32 ಬಸ್ಗಳು
ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ನಾರಾಯಣ ಗುರುಗಳ ಪಠ್ಯ ಕೈಬಿಟ್ಟರೆ ಚಳವಳಿ: ಲೋಬೋ
ಮಗಳನ್ನೇ ಹತ್ಯೆಗೈದ ಪ್ರಕರಣ : ಕೊನೆಗೂ ಇಂದ್ರಾಣಿ ಮುಖರ್ಜಿಗೆ ಜಾಮೀನು