ನ್ಯೂಜಿಲೆಂಡ್ ಸಂಸತ್ನಲ್ಲಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಗೌರವ್ ಶರ್ಮಾ
Team Udayavani, Nov 25, 2020, 3:54 PM IST
ನವದೆಹಲಿ: ನ್ಯೂಜಿಲೆಂಡ್ ಸಂಸತ್ಗೆ ಆಯ್ಕೆಯಾಗಿರುವ ಭಾರತೀಯ ಮೂಲದ ವೈದ್ಯ ಗೌರವ್ ಶರ್ಮಾ ಬುಧವಾರ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ. ಹಿಮಾಚಲ ಪ್ರದೇಶದ ಹಮೀರ್ಪುರ್ ಮೂಲದವರಾಗಿರುವ ಗೌರವ್ ಶರ್ಮಾ, ಲೇಬರ್ ಪಾರ್ಟಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ.
ಗೌರವ್ ಅವರು ನ್ಯೂಜಿಲೆಂಡ್ನ ಅಧಿಕೃತ ಭಾಷೆ ಮೌರಿಯಲ್ಲಿ ಮತ್ತು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಅವರು ಭಾರತದ ಭಾಷಾ ವೈವಿಧ್ಯತೆಗೆ ಗೌರವ ತೋರಿಸಿದ್ದಾರೆ ಎಂದು ಕ್ರೈಸ್ಟ್ಚರ್ಚ್ನಲ್ಲಿರುವ ಭಾರತೀಯ ಹೈಕಮಿಷನರ್ ಮುಕ್ತೇಶ್ ಪ್ರದೇಶಿ ಟ್ವೀಟ್ ಮಾಡಿದ್ದಾರೆ.
ಹಿಂದಿಯನ್ನು ಬಿಟ್ಟು ಸಂಸ್ಕೃತದಲ್ಲಿಯೇ ಪ್ರಮಾಣ ಸ್ವೀಕರಿಸಿದ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ ಡಾ.ಗೌರವ್, ಮಾತೃಭಾಷೆ ಪಂಜಾಬಿಯಲ್ಲಿ ಅಥವಾ ಹಿಂದಿಯಲ್ಲಿ ಪ್ರಮಾಣ ಸ್ವೀಕರಿಸಬೇಕೋ ಎಂಬ ಬಗ್ಗೆ ಗೊಂದಲಗಳಿದ್ದವು. ಎಲ್ಲರನ್ನೂ ಸಂತೋಷಗೊಳಿಸಿವುದು ಕಷ್ಟ. ಸಂಸ್ಕೃತದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರೆ ನನಗೆ ಮಾತನಾಡಲು ಸಾಧ್ಯವಿಲ್ಲದ ಭಾಷೆಗಳೂ ಸೇರಿದಂತೆ ಎಲ್ಲವಕ್ಕೂ ಗೌರವ ನೀಡಿದಂತಾಗುತ್ತದೆ’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಬೀಗರ ಊಟಕ್ಕೆ ಆಗಮಿಸಿ ಈಜಲು ತೆರಳಿದ ಯುವಕರು; ನಾಲ್ವರು ನಾಪತ್ತೆ, ಓರ್ವನ ಮೃತದೇಹ ಪತ್ತೆ
ಇತ್ತೀಚೆಗಷ್ಟೇ ಕೇರಳ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರು ಸಂಸತ್ ಸದಸ್ಯೆಯಾಗಿ ಮಲಯಾಳಂನಲ್ಲಿ ಪ್ರಮಾಣ ಸ್ವೀಕರಿಸಿದ್ದರು.
To be honest I did think of that, but then there was the question of doing it in Pahari (my first language) or Punjabi. Hard to keep everyone happy. Sanskrit made sense as it pays homage to all the Indian languages (including the many I can’t speak) https://t.co/q1A3eb27z3
— Dr Gaurav Sharma MP (@gmsharmanz) November 25, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ