ದೇಶದ ಈ ನಗರಗಳಲ್ಲಿ ಹೈಟೆಕ್ ವಿಮಾನ ನಿಲ್ದಾಣಗಳ ವಿನ್ಯಾಸದಂತೆ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ…
ಪ್ರಮುಖ ರೈಲ್ವೆ ನಿಲ್ದಾಣಗಳ ಪ್ರಸ್ತಾವಿತ ವಿನ್ಯಾಸದ ಕಿರುನೋಟ ಇಲ್ಲಿದೆ…
Team Udayavani, Mar 1, 2023, 1:36 PM IST
New Delhi Railway Station
ನವದೆಹಲಿ: ಭಾರತೀಯ ರೈಲ್ವೆ ಇದೀಗ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ರೈಲ್ವೆ ನಿಲ್ದಾಣಗಳನ್ನು ವಿಮಾನ ನಿಲ್ದಾಣಗಳಂತೆ ಪುನರಾಭಿವೃದ್ಧಿಪಡಿಸಲು ಮುಂದಾಗಿದೆ. ಆ ನಿಟ್ಟಿನಲ್ಲಿ ಅಮೃತ್ ಭಾರತ್ ಯೋಜನೆಯಡಿ ದೇಶದಲ್ಲಿ ಆಯ್ದ ರೈಲ್ವೆ ನಿಲ್ದಾಣಗಳಿಗೆ ಆಧುನಿಕ ಸ್ಪರ್ಶ ನೀಡಲಿದ್ದು, ಪ್ರಮುಖ ರೈಲ್ವೆ ನಿಲ್ದಾಣಗಳ ಪ್ರಸ್ತಾವಿತ ವಿನ್ಯಾಸದ ಕಿರುನೋಟ ಇಲ್ಲಿದೆ…
ಇದನ್ನೂ ಓದಿ:ಸಿದ್ದರಾಮಯ್ಯ ಅವರೇ ನಾನು ನಿಮ್ಮಿಂದ ಆಡಳಿತ ಕಲಿಯಬೇಕಾಗಿಲ್ಲ: ಹೆಚ್ ಡಿಕೆ
ನವದೆಹಲಿ ರೈಲ್ವೆ ನಿಲ್ದಾಣ: 2022ರಲ್ಲಿ ಕೇಂದ್ರ ಸರ್ಕಾರ ನವದೆಹಲಿಯ ರೈಲ್ವೆ ನಿಲ್ದಾಣವನ್ನು ಅಂದಾಜು 4,700 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ರಾಷ್ಟ್ರರಾಜಧಾನಿ ನವದೆಹಲಿಯ ರೈಲ್ವೆ ನಿಲ್ದಾಣವು ಪ್ರತಿ ದಿನ ಸರಾಸರಿ 3.6 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುತ್ತಿದೆ.
ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ:
ಬೆಂಗಳೂರು ರಾಜಧಾನಿಯಲ್ಲಿ ಹಲವು ಪುನರಾಭಿವೃದ್ಧಿ ಯೋಜನೆಗಳಲ್ಲಿ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣವೂ ಸೇರಿದ್ದು, ಈ ನಿಟ್ಟಿನಲ್ಲಿ ಹಂತ, ಹಂತವಾಗಿ 480 ಕೋಟಿ ರೂ. ವೆಚ್ಚದಲ್ಲಿ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಪುನರ್ ಅಭಿವೃದ್ಧಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಮುಂಬೈಯ ಛತ್ರಪತಿ ಶಿವಾಜಿ ಟರ್ಮಿನಲ್: ಜನನಿಬಿಢ ಪ್ರದೇಶವಾಗಿರುವ ವಾಣಿಜ್ಯ ನಗರಿ ಮುಂಬೈಯ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣಕ್ಕೆ ಆಧುನಿಕ ಸ್ಪರ್ಶ ನೀಡಲು ಮುಂದಾಗಿದ್ದು, ಬರೋಬ್ಬರಿ 18,000 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣ ಅಭಿವೃದ್ಧಿ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.
ಅಹಮದಾಬಾದ್ ಜಂಕ್ಷನ್ ರೈಲ್ವೆ ನಿಲ್ದಾಣ:
ಗುಜರಾತ್ ನ ಪ್ರಮುಖ ಅಹಮದಾಬಾದ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಕಾರ್ಯ ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಆರಂಭಗೊಳ್ಳಲಿದ್ದು, ಇದೇ ರೀತಿ ಸಾಬರ್ ಮತಿ, ಗಾಂಧಿಗ್ರಾಮ್, ಮಣಿನಗರ್, ಚಂದ್ಲೋಡಿಯಾ ಮತ್ತು ಅಸರ್ವಾ ನಿಲ್ದಾಣಗಳನ್ನೂ ಪುನರಾಭಿವೃದ್ಧಿ ಮಾಡಲಾಗುವುದು ಎಂದು ವರದಿ ತಿಳಿಸಿದೆ.
ಚೆನ್ನೈ ಎಗ್ಮೋರ್ ರೈಲ್ವೆ ನಿಲ್ದಾಣ:
ದಕ್ಷಿಣ ಭಾರತದ ರೈಲ್ವೆ ವಲಯದಲ್ಲಿ ಎರಡನೇ ಅತೀ ದೊಡ್ಡ ರೈಲ್ವೆ ನಿಲ್ದಾಣವಾದ ಚೆನ್ನೈನ ಎಗ್ಮೋರ್ ರೈಲ್ವೆ ನಿಲ್ದಾಣವನ್ನು ಆಧುನಿಕ ಸೌಲಭ್ಯದೊಂದಿಗೆ ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಭಾರತೀಯ ರೈಲ್ವೆ ಮುಂದಾಗಿದೆ.
ಉದಯ್ ಪುರ್ ರೈಲ್ವೆ ನಿಲ್ದಾಣ:
ರಾಜಸ್ಥಾನದ ಉದಯ್ ಪುರ್ ರೈಲ್ವೆ ನಿಲ್ದಾಣವನ್ನು 354 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದ್ದು, ಐದು ಹಂತಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೆಲಸವನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
MUST WATCH
ಹೊಸ ಸೇರ್ಪಡೆ
Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ