
Nepalದ ಜಲವಿದ್ಯುತ್ ಕ್ಷೇತ್ರಕ್ಕೆ ಭಾರತದ ಬಂಡವಾಳ
Team Udayavani, Jun 1, 2023, 7:40 AM IST

ಕಠ್ಮಂಡು: ಇಂಧನ ಕ್ಷೇತ್ರದಲ್ಲಿ ಭಾರತೀಯ ಉದ್ದಿಮೆಗಳು ಹೆಚ್ಚಿನ ಪ್ರಮಾಣದ ಬಂಡವಾಳದ ಹೂಡಿಕೆ ಮಾಡಬೇಕು ಎಂದು ನೇಪಾಳ ಸರ್ಕಾರ ಪ್ರತಿಪಾದಿಸಿದೆ. ವಿಶೇಷವಾಗಿ ಜಲವಿದ್ಯುತ್ ಯೋಜನೆಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಬೇಕು ಎಂದು ನೇಪಾಳದ ವಿದೇಶಾಂಗ ಸಚಿವ ಎನ್.ಪಿ.ಸೌದ್ ಹೇಳಿದ್ದಾರೆ. ಭಾರತದ ವಿದ್ಯುತ್ ಉತ್ಪಾದನಾ ಕಂಪನಿಗಳ ಜತೆಗೆ ಬಂಡವಾಳ ಹೂಡಿಕೆ ಮಾಡಿ, ಹೆಚ್ಚಿನ ವಿದ್ಯುತ್ ಮಾಡಿದರೆ ನೇಪಾಳಕ್ಕೂ ಅನುಕೂಲವಾಗುವುದು ಮಾತ್ರವಲ್ಲದೆ, ಉಳಿಕೆ ವಿದ್ಯುತ್ ಅನ್ನು ಬಾಂಗ್ಲಾದೇಶಕ್ಕೂ ಮಾರಾಟ ಮಾಡಬಹುದು ಎನ್ನುವ ಲೆಕ್ಕಾಚಾರದಲ್ಲಿ ನೇಪಾಳ ಇದೆ.
ನೇಪಾಳ ಪ್ರಧಾನಿ ಪ್ರಚಂಡ ಅವರು ಬುಧವಾರದಿಂದ ನಾಲ್ಕು ದಿನಗಳ ಕಾಲ ಭಾರತ ಪ್ರವಾಸ ಆರಂಭಿಸಲಿರುವಂತೆಯೇ “ಪಿಟಿಐ” ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನ ನೀಡಿದ ಸೌದ್, ನೇಪಾಳದಿಂದ ದೇಶದ ಪ್ರಮುಖ ನಗರಗಳಿಗೆ ವಿಮಾನಯಾನ, ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ಮಾತುಕತೆ ಮತ್ತು ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದರು. ಭೇಟಿಯ ಅವಧಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವಾಲ್, ವಿದೇಶಾಂಗ ಕಾರ್ಯದರ್ಶಿ ವಿನಯ ಮೋಹನ್ ಕ್ವಾಟ್ರಾ ಸೇರಿದಂತೆ ಪ್ರಮುಖರನ್ನು ಭೇಟಿಯಾಗಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್

Cauvery Water; ಕಾಂಗ್ರೆಸ್ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

September 29 ರಂದು ಕರ್ನಾಟಕ ಬಂದ್ ; ನೂರಾರು ಸಂಘಟನೆಗಳ ಬೆಂಬಲ