India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…


Team Udayavani, Jun 3, 2023, 6:19 PM IST

train tragedy

ಒಡಿಶಾದ ಬಾಲಾಸೋರ್‌ನಲ್ಲಿ ಶುಕ್ರವಾರ 3 ರೈಲುಗಳ ನಡುವೆ ನಡೆದ ಭೀಕರ ರೈಲು ದುರಂತದಲ್ಲಿ ಕನಿಷ್ಠ 300 ಜನ ಮೃತಪಟ್ಟಿದ್ದು 1000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದನ್ನು ದಶಕದ ಭೀಕರ ರೈಲು ದುರಂತ ಎಂಬುದಾಗಿಯೂ ಕರೆಯಲಾಗಿದೆ. ಆದರೆ ಈ ದುರಂತದ ಮೊದಲೂ ಭಾರತ ಹಲವು ಭೀಕರ ರೈಲು ದುರಂತಗಳನ್ನು ಕಂಡಿದೆ. 1981 ರಿಂದ 2023 ರ ವರೆಗೆ ಭಾರತದಲ್ಲಿ ನಡೆದ ಅತ್ಯಂತ ಭೀಕರ ರೈಲು ದುರಂತಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ.

ಬಿಹಾರ ರೈಲು ದುರಂತ (ಜೂನ್‌ 1981)

1981ರಲ್ಲಿ ಬಿಹಾರದಲ್ಲಿ ನಡೆದ ರೈಲು ದುರಂತ ಭಾರತದ ಅತ್ಯಂತ ಕರಾಳ ರೈಲು ದುರಂತ ಎಂಬುದಾಗಿ ಕರೆಸಿಕೊಂಡಿದೆ. ಅಲ್ಲದೆ ಇದು ವಿಶ್ವದ ಎರಡನೇ ಅತ್ಯಂತ ದೊಡ್ಡ ರೈಲು ದುರಂತವೂ ಹೌದು. 1981 ರ ಜೂನ್‌ 6 ರಂದು ತನ್ನ ಸಾಮರ್ಥ್ಯಕ್ಕೂ ಮೀರಿ ಪ್ರಯಾಣಿಕರನ್ನು ಹೊತ್ತು ಮಾನ್ಸಿಯಿಂದ ಸಹಾರ್ಸಾಗೆ ಹೊರಟಿದ್ದ ರೈಲು ಭಾಗಮತಿ ಸೇತುವೆ ಯಲ್ಲಿ ಸುನಾಮಿಯ ಹೊಡೆತಕ್ಕೆ ಸಿಲುಕಿದ ಪರಿಣಾಮ ರೈಲಿನ 9 ಬೋಗಿಗಳ ಪೈಕಿ 7 ಬೋಗಿಗಳು ಸೇತುವೆಯಿಂದ ಕೆಳಕ್ಕೆ ಬಿದ್ದು ಕನಿಷ್ಠ 800-2,000 ಮಂದಿ ಮೃತಪಟ್ಟಿದ್ದರು. ಹಲವು ದಿನಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿದರೂ ವರುಣದ ಆರ್ಭಟದಿಂದಾಗಿ ಸಂಪೂರ್ಣ ರಕ್ಷಣಾ ಕಾರ್ಯ ನಡೆಸಲು ಸಾಧ್ಯವಾಗಿರಲಿಲ್ಲ. ಇದನ್ನು ಹೊರತುಪಡಸಿ 1981 ರಲ್ಲಿ ಭಾರತ ಹಲವು ರೈಲು ದುರಂತವನ್ನು ಕಂಡಿತ್ತು ಎಂಬುದು ಇನ್ನೊಂದು ಆಘಾತಕಾರಿ ಸಂಗತಿ.

ಪೆರುಮಾಣ್‌ ರೈಲು ದುರಂತ, ಕೇರಳ (ಜುಲೈ 1988)

ಜುಲೈ 8, 1988 ರ ಮಳೆಗಾಲದ ಸಂದರ್ಭ ಬೆಂಗಳೂರಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಐಲ್ಯಾಂಡ್‌ ಎಕ್ಸ್‌ಪ್ರೆಸ್‌ ರೈಲಿನ 10 ಬೋಗಿಗಳು ಅಷ್ಟಮುಡಿ ಸರೋವರಕ್ಕೆ ಅಡ್ಡಲಾಗಿ ಕಟ್ಟಿಸಿರುವ ಪೆರುಮಾಣ್‌ ಸೇತುವೆ ಮೇಲಿಂದ ಮಳೆಯಿಂದ ತುಂಬಿ ತುಳುಕುತ್ತಿದ್ದ ಸರೋವರಕ್ಕೆ ಬಿದ್ದ ಪರಿಣಾಮ ಕನಿಷ್ಠ 100 ಮಂದಿ ಮೃತಪಟ್ಟಿದ್ದರು.

ಫಿರೋಝಾಬಾದ್‌ ರೈಲು ದುರಂತ (ಆಗಸ್ಟ್‌ 1995)

1995, ಆಗಸ್ಟ್‌ 20 ರ ಮಧ್ಯರಾತ್ರಿ  ಉತ್ತರ ಪ್ರದೇಶದ ಫಿರೋಝಾಬಾದ್‌ನಲ್ಲಿ ಎರಡು ರೈಲುಗಳ ನಡುವೆ ನಡೆದ ಅಪಘಾತದಲ್ಲಿ ಕನಿಷ್ಠ 350 ಮಂದಿ ಮೃತಪಟ್ಟಿದ್ದರು. ಕಾನ್‌ಪುರದಿಂದ ಹೊರಟಿದ್ದ ʻಕಾಲಿಂದಿ ಎಕ್ಸ್‌ಪ್ರೆಸ್‌ʼ ರೈಲು  ಮಾರ್ಗ ಮಧ್ಯೆ ನೀಲ್‌ಗಾಯ್‌ಗೆ ಡಿಕ್ಕಿ ಹೊಡೆದಿದ್ದರಿಂದ ಮುಂದೆ ಹೋಗಲು ಸಾಧ್ಯವಾಗದೇ ಹಳಿಯ ಮೇಲೆಯೇ ನಿಲ್ಲಬೇಕಾಯಿತು. ಪುರಿಯಿಂದ ಹೊರಟಿದ್ದ ʻಪುರುಷೋತ್ತಮ್‌ ಎಕ್ಸ್‌ಪ್ರೆಸ್‌ʼ ನಿಂತಿದ್ದ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದು ದುರಂತ ಸಂಭವಿಸಿತ್ತು.

ಗಾಯ್ಸಾಲ್‌ ದುರಂತ, ಪಶ್ಚಿಮ ಬಂಗಾಲ (ಆಗಸ್ಟ್‌ 1999)

1999 ರ ಆಗಸ್ಟ್‌ 2 ರಂದು ಪಶ್ಚಿಮ ಬಂಗಾಲದ ಗಾಯ್ಸಾಲ್‌ ಎಂಬ ದುರ್ಗಮ ಪ್ರದೇಶದಲ್ಲಿ ಸಿಗ್ನಲಿಂಗ್‌ ವೈಫಲ್ಯದಿಂದ ನಡೆದ ರೈಲು ಅಪಘಾತದಲ್ಲಿ ಕನಿಷ್ಠ 300 ಮಂದಿ ಸಾವನ್ನಪ್ಪಿದ್ದರು. ಗಾಯ್ಸಾಲ್‌ ಸ್ಟೇಷನ್‌ನಲ್ಲಿ ʻಬ್ರಹ್ಮಪುತ್ರ ಮೈಲ್‌ʼ ರೈಲಿಗೆ ಡೆಲ್ಲಿಯಿಂದ ಹೊರಟಿದ್ದ ಅವಧ್‌ ಅಸ್ಸಾಂ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ದುರಂತ ಸಂಭವಿಸಿತ್ತು. ಹಳಿ ದುರಸ್ತಿಯಿಂದಾಗಿ 4 ಹಳಿಗಳ ಪೈಕಿ 3 ನ್ನು ಮುಚ್ಚಿದ್ದೇ ದುರಂತಕ್ಕೆ ಕಾರಣ.

ವೇಲುಗೊಂದ ರೈಲು ದುರಂತ, ಆಂಧ್ರ ಪ್ರದೇಶ (ಅಕ್ಟೋಬರ್‌ 2005)

2005 ರ ಅಕ್ಟೋಬರ್‌ನಲ್ಲಿ ಆಂಧ್ರ ಪ್ರದೇಶದ ವೇಲುಗೊಂದದಲ್ಲಿ ಮಳೆಯ ನೀರಿನಿಂದ ಮುಳುಗಿದ್ದ ಹಳಿಗಳ ಮೇಲೆ ರೈಲು ಸಂಚರಿಸಿದ ಪರಿಣಾಮ ದುರಂತ ಸಂಭವಿಸಿ ಕನಿಷ್ಠ 100 ಮಂದಿ ಮೃತಪಟ್ಟಿದ್ದರು.

ಫತೇಪುರ್‌, ಉತ್ತರ ಪ್ರದೇಶ (ಜುಲೈ 2011)

ಜುಲೈ 10, 2011 ರಂದು ಮಾಲ್ವಾನ್‌ ಬಳಿಯಲ್ಲಿ ಕೌರಾ-ಕಲ್ಕಾ ಮೈಲ್‌ನ ಸುಮಾರು 15 ಬೋಗಿಗಳು ಹಳಿತಪ್ಪಿ ಕನಿಷ್ಠ 70 ಮಂದಿ ಮೃತಪಟ್ಟಿದ್ದರು. ಅಪಘಾತದ ವೇಳೆ ಈ ರೈಲು ಹೌರಾದಿಂದ ಕಲ್ಕಾಗೆ ಸಂಚರಿಸುತ್ತಿತ್ತು.

ಅಮೃತ್‌ಸರ್‌ ದುರಂತ (ಅಕ್ಟೋಬರ್‌ 2018)

ದಸರಾ ಹಬ್ಬದ ವೇಳೆ ರಾವಣ ದಹನವನ್ನು ಕಾಣಲು ರೈಲು ಹಳಿಗಳ ಮೇಲೆ ನಿಂತಿದ್ದ ಜನರ ಮೇಲೆಯೇ ಪ್ಯಾಸೆಂಜರ್‌ ರೈಲು ಹರಿದಿದ್ದರಿಂದ ಕನಿಷ್ಠ 59 ಮಂದಿ ಮೃತರಾಗಿ 100 ಕ್ಕೂ ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿOdisha ಭೀಕರ ರೈಲು ಅವಘಡ; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.