ಇಂದಿರಾ ನೆಚ್ಚಿನ ಮುಖರ್ಜಿ,ರಾಜೀವ್ ಗಾಂಧಿ ಮೂಲೆಗುಂಪಾಗಿಸಿದ್ರು! ಹೊಸ ಪಕ್ಷ ಕಟ್ಟಿದ್ದ ಪ್ರಣಬ್

2000ನೇ ಇಸವಿಯಲ್ಲಿ ಪಶ್ಚಿಮಬಂಗಾಳದ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Team Udayavani, Aug 31, 2020, 7:00 PM IST

ಇಂದಿರಾ ನೆಚ್ಚಿನ ಮುಖರ್ಜಿ,ರಾಜೀವ್ ಗಾಂಧಿ ಮೂಲೆಗುಂಪಾಗಿಸಿದ್ರು! ಹೊಸ ಪಕ್ಷ ಕಟ್ಟಿದ್ದ ಪ್ರಣಬ್

ಮಣಿಪಾಲ: ಹಿರಿಯ ರಾಜಕಾರಣಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ ಅವರ ಪ್ರತಿಭೆಯನ್ನು ಮೊದಲು ಗುರುತಿಸಿದವರು ಇಂದಿರಾ ಗಾಂಧಿ. ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಮೂಲಕ ಮುಖರ್ಜಿಗೆ ತಕ್ಕ ಸ್ಥಾನ ಕಲ್ಪಿಸಿಕೊಟ್ಟಿದ್ದರು. ಆದರೆ 1984ರಲ್ಲಿ ಇಂದಿರಾ ಗಾಂಧಿ ಹತ್ಯೆಯ ನಂತರ ಅವರನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ಅದಾಗಲೇ ರಾಜೀವ್ ಗಾಂಧಿ ಪಕ್ಷವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡು ಬಿಟ್ಟಿದ್ದರು. ಮುಖರ್ಜಿ ಸಚಿವ ಹುದ್ದೆಯನ್ನು ಕಳೆದುಕೊಳ್ಳವಂತಾಗಿತ್ತು. ಅಷ್ಟೇ ಅಲ್ಲ ಪ್ರಣಬ್ ಮುಖರ್ಜಿ ಅವರನ್ನು ಪಶ್ಚಿಮಬಂಗಾಳದ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ನೋಡಿಕೊಳ್ಳುವ ಹೊಣೆಗಾರಿಕೆ ನೀಡಿ ಕಳುಹಿಸಲಾಗಿತ್ತು.

1984ರಲ್ಲಿಯೂ ಪ್ರಧಾನಿ ಹುದ್ದೆ ವ್ಯವಸ್ಥಿತವಾಗಿ ತಪ್ಪಿಸಲಾಗಿತ್ತು:

1984ರಲ್ಲಿಯೂ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಹುದ್ದೆಗೆ ಏರಿಸಲು ಅವಕಾಶ ಇತ್ತು. ಅಲ್ಲದೇ ಇಂದಿರಾಗಾಂಧಿ ಆಪ್ತರಾಗಿದ್ದ ಮುಖರ್ಜಿ ಅವರನ್ನು ಅವರ ಬಳಿಕ ಪ್ರಧಾನಿಯಾಗಲಿದ್ದಾರೆಂಬುದು ಸುದ್ದಿ ಹರಿದಾಡುತ್ತಿತ್ತು. ಆದರೆ ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಅವರನ್ನು ಎತ್ತಿಕಟ್ಟುವ ಮೂಲಕ ಮುಖರ್ಜಿ ಅವರನ್ನು ರಾಜಕೀಯ ಪಡಸಾಲೆಯಿಂದ ಅವರನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡಿಬಿಟ್ಟಿದ್ದರು.

ಇದರಿಂದ ಅಸಮಧಾನಗೊಂಡ ಪ್ರಣಬ್ ಮುಖರ್ಜಿ ಅವರು 1986ರಲ್ಲಿ ರಾಷ್ಟ್ರೀಯ ಸಮಾಜವಾದಿ ಕಾಂಗ್ರೆಸ್ ಪಕ್ಷ (ಆರ್ ಎಸ್ ಸಿ)ವನ್ನು ಸ್ಥಾಪಿಸಿದ್ದರು.

1998ರಿಂದ 99ರವರೆಗೆ ಎಐಸಿಸಿಯ ಜನರಲ್ ಸೆಕ್ರೆಟರಿಯಾಗಿದ್ದರು. ನಂತರ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. 2000ನೇ ಇಸವಿಯಲ್ಲಿ ಪಶ್ಚಿಮಬಂಗಾಳದ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಯ ನಾಯಕರಾಗಿದ್ದರು. 2009ರಲ್ಲಿ ನಡೆದ ಲೋಕಸಭಾ (ಪಶ್ಚಿಮಬಂಗಾಳದ ಜಾಂಗಿಪುರ್) ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ನಂತರ ಮೂರು ವರ್ಷಗಳ ಬಳಿಕ ಆರ್ ಎಸ್ ಸಿ ಮತ್ತು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಜತೆ ವಿಲೀನವಾಗಿತ್ತು.

ರಾಜೀವ್ ಗಾಂಧಿ ಅವರು ಪ್ರಣಬ್ ಮುಖರ್ಜಿ ಅವರ ಜತೆ ರಾಜಿ ಸಂಧಾನ ಮಾಡಿಕೊಂಡಿದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದರು. ಯಾಕೆಂದರೆ 1987ರಲ್ಲಿ ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಆರ್ ಎಸ್ ಸಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಪೈಪೋಟಿ ನೀಡಲಿದೆ ಎಂಬ ಸುದ್ದಿ ರಾಜೀವ್ ಗಾಂಧಿ ಕಿವಿಗೆ ತಲುಪಿತ್ತು. ಹೀಗೆ ಕಾಂಗ್ರೆಸ್ ಜತೆ ಕೈಜೋಡಿಸಿದ್ದ ಮುಖರ್ಜಿ ಅವರೊಬ್ಬ ನತದೃಷ್ಟ ನಾಯಕ ಎಂದೇ ವಿಶ್ಲೇಷಿಸಲಾಗುತ್ತಿದೆ. 1991ರಲ್ಲಿ ರಾಜೀವ್ ಗಾಂಧಿ ಹತ್ಯೆಯ ನಂತರ ಮುಖರ್ಜಿ ಅವರ ರಾಜಕೀಯ ಬದುಕು ಮತ್ತೊಂದು ಮಜಲು ಕಂಡಿತ್ತು. ಅದು ಸಾಧ್ಯವಾಗಿದ್ದು, ಪ್ರಧಾನಿ ಪಿವಿ ನರಸಿಂಹ ರಾವ್ ಅವರಿಂದಾಗಿ!

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.