100 ರೂ. ಲಂಚಕ್ಕಾಗಿ ತಳ್ಳು ಗಾಡಿ ಬುಡಮೇಲು ಮಾಡಿ ಮೊಟ್ಟೆ ಒಡೆದುಹಾಕಿದ ಅಧಿಕಾರಿ!
ಬುಡಮೇಲು ಮಾಡಿ ಮೊಟ್ಟೆಯನ್ನು ಒಡೆದು ಹಾಕಿರುವ ಈ ವಿಡಿಯೋ ಎಲ್ಲೆಡೆ ಹರಿದಾಡುವ ಮೂಲಕ ವೈರಲ್ ಆಗಿದೆ
Team Udayavani, Jul 24, 2020, 2:55 PM IST
ಇಂದೋರ್: ನೂರು ರೂಪಾಯಿ ಲಂಚ ಕೊಡಲಿಲ್ಲ ಎಂಬ ಕಾರಣಕ್ಕಾಗಿಯೇ ಇಬ್ಬರು ಕೂಲಿಯಾಳುಗಳನ್ನು ಪೊಲೀಸರೇ ಹೊಡೆದುಕೊಂದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿತ್ತು. ಇದೀಗ ನೂರು ರೂ. ಲಂಚ ಕೊಡಲಿಲ್ಲ ಎಂದು ಮೊಟ್ಟೆ ಮಾರುತ್ತಿದ್ದ ಹುಡುಗನೊಬ್ಬನ ತಳ್ಳು ಗಾಡಿಯನ್ನು ದೂಡಿ ಅದರಲ್ಲಿದ್ದ ಮೊಟ್ಟೆಯಲ್ಲಾ ಒಡೆದು ಹೋಗಿರುವ ಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಈಗಾಗಲೇ ವೈರಲ್ ಆಗಿರುವ ವಿಡಿಯೋದಲ್ಲಿ ಸೆರೆಯಾಗಿರುವಂತೆ, ತಳ್ಳು ಗಾಡಿಯಲ್ಲಿ ಮೊಟ್ಟೆ ಮಾರುತ್ತಿದ್ದ 14 ವರ್ಷದ ಹುಡುಗನಿಗೆ ಬೆಳಗ್ಗೆ ಪುರಸಭೆ ಅಧಿಕಾರಿಗಳು ಬಂದು ಗಾಡಿಯನ್ನು ತೆಗೆಯುವಂತೆ ಎಚ್ಚರಿಕೆ ನೀಡಿದ್ದರು. ಇಲ್ಲದಿದ್ದರೆ ನೂರು ರೂಪಾಯಿ ಲಂಚ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಹುಡುಗ ಅದಕ್ಕೆ ಒಪ್ಪದಿದ್ದಾಗ ಅಧಿಕಾರಿಗಳು ಗಾಡಿಯನ್ನು ಬುಡಮೇಲು ಮಾಡಿದ್ದರು. ಇದರಿಂದಾಗಿ ಎಲ್ಲಾ ಮೊಟ್ಟೆಗಳು ಒಡೆದು ಹೋಗಿದ್ದವು ಎಂದು ಹುಡುಗ ಆರೋಪಿಸಿದ್ದಾನೆ.
ಕೋವಿಡ್ 19 ವೈರಸ್ ನಿಂದಾಗಿ ದಿನಂಪ್ರತಿ ಮೊಟ್ಟೆ ವ್ಯಾಪಾರವೂ ಕಡಿಮೆಯಾಗಿದೆ. ಇದೀಗ ಪುರಸಭೆ ಅಧಿಕಾರಿಗಳು ಮೊಟ್ಟೆ ಒಡೆದು ಹಾಕಿದ್ದರಿಂದ ಮತ್ತಷ್ಟು ಆರ್ಥಿಕ ಹೊರೆ ಬಿದ್ದಂತಾಗಿದೆ ಎಂದು ಹುಡುಗ ಅಳಲು ತೋಡಿಕೊಂಡಿರುವುದಾಗಿ ವರದಿ ಹೇಳಿದೆ.
Civic officials in Indore allegedly overturned egg cart of a small boy. The officials had warned that the egg cart would be seized if he did not leave the spot @ChouhanShivraj @OfficeOfKNath @INCIndia @INCMP @GargiRawat @RajputAditi @ndtvindia @ndtv pic.twitter.com/PnuqeLrbJh
— Anurag Dwary (@Anurag_Dwary) July 23, 2020
ಮೊಟ್ಟೆ ಗಾಡಿಯನ್ನು ಬುಡಮೇಲು ಮಾಡಿ ಮೊಟ್ಟೆಯನ್ನು ಒಡೆದು ಹಾಕಿರುವ ಈ ವಿಡಿಯೋ ಎಲ್ಲೆಡೆ ಹರಿದಾಡುವ ಮೂಲಕ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ