ಟಾಯ್ಲೆಟ್ ನೊಳಗೇ ಹೆರಿಗೆ, ಕಮೋಡ್ ನೊಳಗೆ ಸಿಲುಕಿ ನವಜಾತ ಶಿಶು ಸಾವು
ನವಜಾತ ಶಿಶು ಜಾರಿ ಬಿದ್ದು, ಕಮೋಡ್ ನೊಳಗೆ ಸಿಲುಕಿ ಸಾವನ್ನಪ್ಪಿರುವುದಾಗಿ ಮೂಲಗಳು ವಿವರಿಸಿದೆ.
Team Udayavani, Oct 15, 2021, 3:26 PM IST
ಕಾನ್ಪುರ್: ಉತ್ತರಪ್ರದೇಶದ ಲಾಲಾ ಲಜಪತ್ ರಾಯ್ ಆಸ್ಪತ್ರೆಯ ಶೌಚಾಲಯದಲ್ಲೇ ಹೆರಿಗೆಯಾದ ಪರಿಣಾಮ ನವಜಾತ ಶಿಶು ಜಾರಿ ಬಿದ್ದು ಕಮೋಡ್ ನೊಳಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ಕೌಂಟ್ ಡೌನ್ ಶುರು…
ಹಸೀನಾ ಬಾನು(30) ಎಂಬ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸಿದ್ದಾರೆಂದು ವರದಿ ಹೇಳಿದೆ. ಆಕೆಯ ಪತಿ ಮೊಯಿನ್ ವೈದ್ಯರ ಬಳಿ ಬೇಡಿಕೊಂಡರು ಎಮರ್ಜೆನ್ಸಿ ವಾರ್ಡ್ ಗೆ ದಾಖಲಿಸಲು ನಿರಾಕರಿಸಿರುವುದಾಗಿ ವರದಿ ತಿಳಿಸಿದೆ.
ಈ ಸಂದರ್ಭದಲ್ಲಿ ಹೆರಿಗೆ ನೋವು ತಾಳಲಾರದೆ ಹಸೀನಾ ಟಾಯ್ಲೆಟ್ ಗೆ ತೆರಳಿದ್ದು, ಅಲ್ಲಿಯೇ ಹೆರಿಗೆಯಾಗಿತ್ತು. ಈ ವೇಳೆ ನವಜಾತ ಶಿಶು ಜಾರಿ ಬಿದ್ದು, ಕಮೋಡ್ ನೊಳಗೆ ಸಿಲುಕಿ ಸಾವನ್ನಪ್ಪಿರುವುದಾಗಿ ಮೂಲಗಳು ವಿವರಿಸಿದೆ.
ವಿಷಯ ತಿಳಿದ ಆಸ್ಪತ್ರೆಯ ಸಿಬಂದಿಗಳು ಟಾಯ್ಲೆಟ್ ಮೇಲ್ಭಾಗವನ್ನು ಒಡೆದು ಮಗುವನ್ನು ಹೊರತೆಗೆದರೂ ಕೂಡಾ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು. ಘಟನೆ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ವೈದ್ಯಾಧಿಕಾರಿ ಡಾ.ಸಂಜಯ್ ಕಾಲಾ ತಿಳಿಸಿದ್ದಾರೆ.
ಇದೊಂದು ಗಂಭೀರ ಪ್ರಕರಣವಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಡಾ.ಸಂಜಯ್ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ