Infosys ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ, ಟೆಕ್ ಮಹೀಂದ್ರಾಕ್ಕೆ ಸೇರ್ಪಡೆ

ವರ್ಲ್ಡ್ ಎಕಾನಾಮಿಕ್ ಫೋರಂನ ಗ್ಲೋಬಲ್ ಯಂಗ್ ಲೀಡರ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೋಶಿ ಅವರನ್ನು ಆಹ್ವಾನಿಸಿತ್ತು.

Team Udayavani, Mar 11, 2023, 12:54 PM IST

Infosys ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ, ಟೆಕ್ ಮಹೀಂದ್ರಾಕ್ಕೆ ಸೇರ್ಪಡೆ

ಬೆಂಗಳೂರು: ಪ್ರತಿಸ್ಪರ್ಧಿಯಾದ ಟೆಕ್ ಮಹೀಂದ್ರಾ ಕಂಪನಿ ಸೇರುವ ನಿಟ್ಟಿನಲ್ಲಿ ಮೋಹಿತ್ ಜೋಶಿ ಅವರು ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸ್ಟಾಕ್ ಎಕ್ಸ್ ಚೇಂಜ್ ಗೆ ಇನ್ಫೋಸಿಸ್ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ಮದುವೆಗೂ ಮುನ್ನ ಮಕ್ಕಳು: ಇಬ್ಬರು ಪ್ರೇಯಸಿರನ್ನೂ ಒಂದೇ ಮಂಟಪದಲ್ಲಿ ಮದುವೆಯಾದ ಯುವಕ.!

2000ನೇ ಇಸವಿಯಿಂದ ಮೋಹಿತ್ ಜೋಶಿ ಅವರು ಇನ್ಫೋಸಿಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಇನ್ಫೋಸಿಸ್ ಗೆ ರಾಜೀನಾಮೆ ನೀಡಿರುವ ಮೋಹಿತ್ ಜೋಶಿ ಅವರನ್ನು ಟೆಕ್ ಮಹೀಂದ್ರಾದ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ (ಸಿಇಒ) ನೇಮಕ ಮಾಡುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.

ಇನ್ಫೋಸಿಸ್ ಬಾಂಬೆ ಷೇರು ವಿನಿಮಯ ಕೇಂದ್ರಕ್ಕೆ ನೀಡಿರುವ ಪ್ರಕಟನೆಯಲ್ಲಿ, ಮೋಹಿತ್ ಜೋಶಿ ಅವರು ಮಾರ್ಚ್ 11ರಿಂದ ರಜೆಯಲ್ಲಿದ್ದು, 2023ರ ಜೂನ್ 9 ಕಂಪನಿಯಲ್ಲಿನ ಅವರ ಕೊನೆಯ ದಿನವಾಗಿದೆ ಎಂದು ತಿಳಿಸಿದೆ.

ಹೊಸ ಪೀಳಿಗೆಯ ಡಿಜಿಟಲ್ ಸೇವೆ ಮತ್ತು ಕನ್ಸಲ್ಟಿಂಗ್ ನಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಇನ್ಫೋಸಿಸ್ ಇಂದು ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ ನೀಡಿರುವುದಾಗಿ ಪ್ರಕಟಿಸಿದೆ. ಕಂಪನಿಗಾಗಿ ಮೋಹಿತ್ ಜೋಶಿ ಅವರು ಸಲ್ಲಿಸಿರುವ ಸೇವೆ ಮತ್ತು ಕೊಡುಗೆಯನ್ನು ನಿರ್ದೇಶಕ ಮಂಡಳಿ ಮೆಚ್ಚಿರುವುದಾಗಿ ತಿಳಿಸಿದ್ದು, ಅವರ ರಾಜೀನಾಮೆ ಮಾಹಿತಿ ದಾಖಲೆಗಾಗಿ ನೀಡುತ್ತಿರುವುದಾಗಿ ಇನ್ಫೋಸಿಸ್ ಪ್ರಕಟನೆಯಲ್ಲಿ ತಿಳಿಸಿದೆ.

ಮೋಹಿತ್ ಜೋಶಿ ಅವರು ಅಧ್ಯಕ್ಷರಾಗಿ ಇನ್ಫೋಸಿಸ್ ನಲ್ಲಿ ಫೈನಾಶ್ಶಿಯಲ್ ಸರ್ವೀಸ್ ಮತ್ತು ಹೆಲ್ತ್ ಕೇರ್/ಲೈಫ್ ಸೈನ್ಸ್ ಬ್ಯುಸಿನೆಸ್ ಅನ್ನು ನಿಭಾಯಿಸುತ್ತಿದ್ದರು. 2014ರಲ್ಲಿ ನಡೆದ ವರ್ಲ್ಡ್ ಎಕಾನಾಮಿಕ್ ಫೋರಂನ ಗ್ಲೋಬಲ್ ಯಂಗ್ ಲೀಡರ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೋಶಿ ಅವರನ್ನು ಆಹ್ವಾನಿಸಿತ್ತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.