ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ತಪಾಸಣೆ ಕಡ್ಡಾಯ: ವೆಂಕಟೇಶ್‌ ನಾಯ್ಕ


Team Udayavani, Mar 19, 2021, 5:55 AM IST

ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ತಪಾಸಣೆ ಕಡ್ಡಾಯ: ವೆಂಕಟೇಶ್‌ ನಾಯ್ಕ

ಮೂಲ್ಕಿ: ಮೂಲ್ಕಿ ತಾಲೂಕು ವ್ಯಾಪ್ತಿಗೆ ಕೇರಳ ಮತ್ತು ಮಹಾರಾಷ್ಟ್ರಗಳಿಂದ ಬರುವವರಿಗೆ ಕೊರೊನಾ ಆರ್‌ಟಿ-ಪಿಸಿಆರ್‌ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಮೂಲ್ಕಿ ತಹಶೀಲ್ದಾರ ಡಾ| ವೆಂಕಟೇಶ್‌ ನಾಯ್ಕ ಹೇಳಿದ್ದಾರೆ.

ಮೂಲ್ಕಿ ನಗರ ಪಂಚಾಯತ್‌ ಕಚೇರಿಯ ಸಭಾಂಗಣದಲ್ಲಿ ಅಧ್ಯಕ್ಷ ಸುಭಾಷ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್‌ ಮುನ್ನಚ್ಚರಿಕೆಯ ಕ್ರಮವಾಗಿ ವಿವಿಧ ಇಲಾಖೆಗಳ ಮತ್ತು ಸಂಘ-ಸಂಸ್ಥೆ ಹಾಗೂ ಉದ್ಯಮಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಹೆಚ್ಚಿನ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುವವರ ಮೇಲೆ ನಿಗಾ ವಹಿಸಬೇಕಿದೆ. ದೇವಸ್ಥಾನ, ಶಿಕ್ಷಣ ಸಂಸ್ಥೆ, ಹಾಸ್ಟೆಲ್‌, ಕಲ್ಯಾಣ ಮಂಟಪ, ಲಾಡ್ಜ್ಗಳು, ಹೊಟೇಲ್‌ ಸಹಿತ ಮತ್ತಿತರ ಕೇಂದ್ರಗಳಲ್ಲಿ ಕಡ್ಡಾಯವಾಗಿ ಈ ಪರೀಕ್ಷೆ ಮಾಡಿಸಬೇಕು. ದಿನಕ್ಕೆ 3,000 ಜನರನ್ನು ಪರೀಕ್ಷೆಗೆ ಒಳಪಡಿಸುವುದಕ್ಕೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಸಾರ್ವಜನಿಕರು ಸೇರುವ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳು, ಸರಕಾರದ ವಿವಿಧ ಇಲಾಖೆಯ ಕಚೇರಿಗಳು, ಅಂಚೆ ಕಚೇರಿ ಮತ್ತು ಬ್ಯಾಂಕ್‌, ವಿಮಾ ಕಚೇರಿ ಮೊದಲಾದ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋಲ, ಜಾತ್ರೆ ಮತ್ತು ಇತರ ಜನ ಸೇರುವ ಸಭೆ ಸಮಾರಂಭಗಳಲ್ಲಿ ಕೋವಿಡ್‌ ನಿಯಮಗಳನ್ನು ನಿರ್ಲಕ್ಷಿಸಿದರೆ ಕಠಿನ ಕ್ರಮ ಜರಗಿಸಲಾಗುವುದು ಎಂದರು.

ಶೀಘ್ರವೇ ಮಾರ್ಗಸೂಚಿ
ದೇವಸ್ಥಾನ ಮತ್ತು ಇತರ ಧಾರ್ಮಿಕ ಕೇಂದ್ರಗಳ ಉತ್ಸವ ಮತ್ತು ಇತರ ಸಮಾರಂಭಗಳ ಬಗ್ಗೆ ಸೂಕ್ತ ಮಾರ್ಗಸೂಚಿ ಒಂದೆರಡು ದಿನಗಳೊಳಗೆ ಸಂಬಂಧಿಸಿದ ಇಲಾಖೆಯಿಂದ ಬರಲಿದ್ದು ಜನರು ಎಚ್ಚರದಿಂದ ಇರಬೇಕು ಎಂದು ತಹಶೀಲ್ದಾರ್‌ ಹೇಳಿದರು.

ಕೋವಿಡ್‌ ಲಸಿಕೆಗೆ ವ್ಯವಸ್ಥೆ
ಕೆಮ್ರಾಲ್‌ ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯಾಧಿಕಾರಿ ಡಾ| ಚಿತ್ರಾ ಮಾತನಾಡಿ, ಮೂಲ್ಕಿ ಮತ್ತು ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆಮ್ರಾಲ್‌ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರತಿ ವಾರದ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಯಾವುದೇ ಸರಕಾರಿ ರಜೆಗಳು ಇದ್ದರೂ ಕೋವಿಡ್‌ ಲಸಿಕೆ ಕಾರ್ಯಕ್ರಮ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆೆಯ ವರೆಗೆ ನಡೆಯಲಿದೆ. ನಿತ್ಯ 100 ಜನರಿಗೆ ಒಂದು ಕೇಂದ್ರದಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಲಸಿಕೆ ಹಾಕಿಸಲು ಬರುವಾಗ ಅನಾರೋಗ್ಯದ ಸಂಬಂಧ ಮಾತ್ರೆ ಅಥವಾ ಚಿಕಿತ್ಸೆಯ ವಿವರಗಳನ್ನು ತಂದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ವ್ಯಾಪ್ತಿಯಲ್ಲಿ ಮೂರು ಕೇಂದ್ರಗಳ ಪೈಕಿ ಒಂದು ಸಾವಿರ ಸಮೀಪ ಲಸಿಕೆ ನೀಡಲಾಗಿದೆ ಎಂದು ಚಿತ್ರಾ ಹೇಳಿದರು.

ಮೂಲ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ| ಕೃಷ್ಣ ಮಾತನಾಡಿದರು.
ಉಪಾಧ್ಯಕ್ಷ ಸತೀಶ್‌ ಅಂಚನ್‌, ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಹೊಟೇಲ್‌ ಉದ್ಯಮಿ, ಇಲಾಖೆಗಳ ಅಧಿಕಾರಿಗಳು, ಮೊದಲಾದವರು ಉಪಸ್ಥಿತರಿದ್ದರು. ನಗರ ಪಂಚಾಯತ್‌ ಸಮುದಾಯ ಅಧಿಕಾರಿ ಮುತ್ತಾಡಿ ನಿರೂಪಿಸಿದರು.

ಮುನ್ನೆಚ್ಚರಿಕೆ ವಹಿಸಿ
ಮೂಲ್ಕಿ ನಗರ ಪಂಚಾಯತ್‌ ಮುಖ್ಯಾಧಿಕಾರಿ ಪಿ. ಚಂದ್ರ ಪೂಜಾರಿ ಮಾತನಾಡಿ, ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಯೊಳಗೆ ಕಳೆದ ಬಾರಿ ಯಾವುದೇ ಸಾವು-ನೋವುಗಳು ಉಂಟಾಗದಂತೆ ಒಂದು ಕುಟುಂಬದ ರೀತಿಯಲ್ಲಿ ವಿವಿಧ ಇಲಾಖೆಗಳು ಮತ್ತು ಸಂಘ-ಸಂಸ್ಥೆಗಳು ಸಹಕರಿಸಿದ್ದಾರೆ. ಈ ಬಾರಿಯು ಕೂಡ ಅದೇ ಸಹಕಾರದ ಜತೆಗೆ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.