ಯಶ್, ರಿಷಬ್ ಭೇಟಿ : ಕಾಂತಾರ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ನಿಮ್ಮ ಪ್ರೋತ್ಸಾಹ ಜಗತ್ತೇ ನಮ್ಮೊಂದಿಗೆ ಇದ್ದ ಹಾಗೆ ..;ವಿಜಯ್ ಕಿರಗಂದೂರು
Team Udayavani, Feb 13, 2023, 3:07 PM IST
ಬೆಂಗಳೂರು : ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ (ಫೆ 12) ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದ ವೇಳೆ ದಿಗ್ಗಜ ನಟರು, ನಿರ್ಮಾಪಕರು ಕ್ರಿಕೆಟ್ ರಂಗದ ತಾರೆಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿಶೇಷವಾಗಿ ಕಾಂತಾರ ಚಿತ್ರದ ನಟ , ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ರಾಕಿಂಗ್ ಸ್ಟಾರ್ ಯಶ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಔತಣ ಕೂಟಕ್ಕೆ ಆಹ್ವಾನಿಸಿದ್ದರು.
”ಸ್ಫೂರ್ತಿದಾಯಕ ಭೇಟಿ ಪ್ರಧಾನಿ ನರೇಂದ್ರ ಮೋದಿ ಅವರು ನವ ಭಾರತ ಮತ್ತು ಪ್ರಗತಿಪರ ಕರ್ನಾಟಕವನ್ನು ರೂಪಿಸುವಲ್ಲಿ ಮನರಂಜನಾ ಉದ್ಯಮದ ಪಾತ್ರವನ್ನು ನಾವು ಚರ್ಚಿಸಿದ್ದೇವೆ. (#BuildingABetterIndia)ಉತ್ತಮ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಲು ಹೆಮ್ಮೆ ಪಡುತ್ತೇನೆ. ನಿಮ್ಮ ದೂರದೃಷ್ಟಿಯ ನಾಯಕತ್ವವು ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ನಿಮ್ಮ ಪ್ರೋತ್ಸಾಹ ಜಗತ್ತೇ ನಮ್ಮೊಂದಿಗೆ ಇದ್ದ ಹಾಗೆ” ಎಂದು ಹೊಂಬಾಳೆ ಫಿಲ್ಮ್ಸ್ ಪರ ನಿರ್ಮಾಪಕ ವಿಜಯ್ ಕಿರಗಂದೂರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ಕುಂಬ್ಳೆ,ಶ್ರೀನಾಥ್ ಸೇರಿ ಕ್ರಿಕೆಟಿಗರ ಭೇಟಿಯಾದ ಪ್ರಧಾನಿ; ವಿವಿಧ ವಿಷಯಗಳ ಕುರಿತು ಚರ್ಚೆ
ಪ್ರಧಾನಿ ಮೋದಿ ಅವರು ಕನ್ನಡ ಚಲನಚಿತ್ರ ರಂಗದದ ನಾಯಕರನ್ನು ಭೇಟಿ ಮಾಡಿ ಸಾಂಸ್ಕೃತಿಕ ಸನ್ನಿವೇಶ ಮತ್ತು ನವ ಭಾರತ ಮತ್ತು ಪ್ರಗತಿಪರ ಕರ್ನಾಟಕ ನಿರ್ಮಾಣಕ್ಕೆ ಅವರು ನೀಡಬಹುದಾದ ಕೊಡುಗೆಯ ಕುರಿತು ಚರ್ಚಿಸಿದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿದ್ದಾರೆ.
Inspiring meeting PM @narendramodi ಅವರು as we discussed role of Entertainment industry in shaping New India and Progressive Karnataka. Proud to contribute towards #BuildingABetterIndia 🇮🇳 Your visionary leadership inspires us & your encouragement means the world to us @PMOIndia pic.twitter.com/M95vv2cJk2
— Rishab Shetty (@shetty_rishab) February 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು