ಅಂತಿಮ ಕ್ಷಣದಲ್ಲಿ ʼಸಿದ್ದು ನಿಜಕನಸುʼ ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆ
Team Udayavani, Jan 9, 2023, 3:53 PM IST
ಬೆಂಗಳೂರು : ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದರು.
ಸಿದ್ದರಾಮಯ್ಯ ಆಡಳಿತದಲ್ಲಿ ನಡೆದ ಅಲ್ಪಸಂಖ್ಯಾತರ ಓಲೈಕೆ, ಪಿಎಫ್ ಐ ವಿರುದ್ಧ ಪ್ರಕರಣ ವಾಪಾಸ್ ಸೇರಿದಂತೆ ಹಲವಾರು ವಿಚಾರಗಳನ್ನು ಈ ಪುಸ್ತಕದಲ್ಲಿ ನಮೂದಿಸಲಾಗಿದ್ದು, ಅಂದಿನ ಟಿಪ್ಪುವೇ ಇಂದಿನ ಸಿದ್ದು ಎಂದು ಆರೋಪಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪುತ್ರ ಡಾ.ಯತೀಂಧ್ರ ಸಿದ್ದರಾಮಯ್ಯ ನ್ಯಾಯಾಲಯಕ್ಕೆ ಮೊರೆ ಹೋಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಮಧ್ಯಂತರ ತಡೆ ಕೋರಿದ್ದರು. ಅರ್ಜಿದಾರರ ವಾದ ಮನ್ನಿಸಿರುವ ನ್ಯಾಯಾಲಯ ಈಗ ಕಾರ್ಯಕ್ರಮಕ್ಕೆ ತಡೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು