ರಾಜಕಾರಣಿಗಳ ಪರಿಚಯವಿದೆ ಎಂದು ನಂಬಿಸಿ 36 ಲಕ್ಷ ರೂ. ಪಂಗನಾಮ ಹಾಕಿದ ಮಹಿಳೆ
ಹೂಡಿಕೆ ಲಾಭದ ಆಮಿಷ, ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ
Team Udayavani, May 6, 2022, 9:36 AM IST
ಬೆಂಗಳೂರು: ಶುಗರ್ ಡೀಲರ್ ವ್ಯವಹಾರದಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಂಶ ನೀಡುವುದಾಗಿ ಹಾಗೂ ಉದ್ಯೋಗ ಕೊಡಿಸುವುದಾಗಿ ಮೂವರು ಯುವಕರಿಂದ 36 ಲಕ್ಷ ರೂ. ಪಡೆದು ವಾಪಸ್ ನೀಡದೆ ವಂಚಿಸಿದ್ದ ಮಹಿಳೆ ವಿರುದ್ಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾಲಕ್ಷ್ಮೀ ಎಂಟರ್ ಪ್ರೈಸಸ್ ಕಂಪನಿ ಮಾಲೀಕರಾದ ಮಹಾಲಕ್ಷ್ಮೀ (42) ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿರುವ ಈ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಯಶವಂತಪುರ ಇಂಡಸ್ಟ್ರಿಯಲ್ ಸಬ್ ಹರ್ಬ್ ನಂ-3ಸಿ 3ನೇ ಮಹಡಿಯಲ್ಲಿ ಮಹಾಲಕ್ಷ್ಮೀ ಎಂಟರ್ಪ್ರೈಸಸ್ ಕಂಪನಿ ತೆರೆದಿದ್ದು, ಅವರು ಶುಗರ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದರು. ಈ ವ್ಯವಹಾರಕ್ಕೆ ಹೂಡಿಕೆ ಮಾಡುವಂತೆ ಹೊಳೆನರಸೀಪುರದ ಲತಾ ಎಂಬುವವರಿಗೆ ಒತ್ತಾಯಿಸಿದ್ದರು. ಅಲ್ಲದೇ, ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಂಶ ನೀಡುವುದಾಗಿ ನಂಬಿಸಿ 2019ರಲ್ಲಿ ಲತಾ ಅವರಿಂದ 24 ಲಕ್ಷ ರೂ. ಹೂಡಿಕೆ ಮಾಡಿಸಿಕೊಂಡಿದ್ದರು. ಆದರೆ, ಇದುವರೆಗೂ ಹಣ ವಾಪಸ್ ನೀಡಿಲ್ಲ. ಇತ್ತ ಸುಧಾಕರ್ ಎಂಬುವವರಿಂದಲೂ ಇದೇ ರೀತಿ 14 ಲಕ್ಷ ರೂ. ಹೂಡಿಕೆ ಮಾಡಿಸಿಕೊಂಡು, 5 ಲಕ್ಷ ರೂ. ಮಾತ್ರ ವಾಪಸ್ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ಪಿಎಸ್ಐ ಹಗರಣದಲ್ಲಿ ಕೈ ಹಾಕಿರುವರು ಇನ್ನೊಮ್ಮೆ ಮುಟ್ಟಿ ನೋಡಬೇಕು: ಆರಗ ಜ್ಞಾನೇಂದ್ರ
ರಾಜ್ಯದ ಎಲ್ಲ ಪಕ್ಷದ ರಾಜಕೀಯ ನಾಯಕರು ತನಗೆ ಪರಿಚಯವಿದ್ದಾರೆ ಎಂದು ಹೇಳಿಕೊಂಡಿರುವ ಮಹಾಲಕ್ಷ್ಮೀ ಯಾವುದೇ ಕೆಲಸವಿದ್ದರೂ ಮಾಡಿಸಿಕೊಡುವುದಾಗಿ ನಂಬಿಸುತ್ತಿದ್ದರು. ಈ ಮಾತನ್ನು ನಂಬಿದ ಕಾಂತರಾಜು ಎಂಬಾತ ಕೂಡ ತಮ್ಮ ಸಂಬಂಧಿಕರ ಮಗನೊಬ್ಬನಿಗೆ ಸರ್ಕಾರಿ ಕೆಲಸ ಕೊಡಿಸುವಂತೆ ಕೇಳಿದ್ದರು. ಅದಕ್ಕಾಗಿಯೇ 3 ಲಕ್ಷ ರೂ. ಪಡೆದುಕೊಂಡಿದ್ದರು. ಆದರೆ, ಇದುವರೆಗೂ ಯಾವುದೇ ಕೆಲಸವನ್ನು ಕೊಡಿಸಿಲ್ಲ. ಹಣ ಕೇಳಿದರೆ ಸರಿಯಾಗಿ ಪ್ರತಿಕ್ರಿಯೆ ಇಲ್ಲ ಎಂದು ಮಹಾಲಕ್ಷ್ಮೀ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ