ಚೆನ್ನೈ – ಆರ್ ಸಿಬಿ ಮುಖಾಮುಖಿ: ಕೊಹ್ಲಿ ಪಡೆಗೆ 37 ರನ್ ಗೆಲುವು


Team Udayavani, Oct 10, 2020, 11:14 PM IST

IPL-RCB

ದುಬಾೖ: ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಿನ ಶನಿವಾರದ ದ್ವಿತೀಯ ಐಪಿಎಲ್‌ ಮುಖಾಮುಖಿಯಲ್ಲಿ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ರಾಯಲ್‌ ಚಾಲೆಂಜರ್ ಬೆಂಗಳೂರು 37 ರನ್‌ ಗೆಲುವು ದಾಖಲಿಸಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ನೆಗೆದಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ 4 ವಿಕೆಟಿಗೆ 169 ರನ್‌ ಗಳಿಸಿ ಸವಾಲೊಡ್ಡಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಚೆನ್ನೈ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 132 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.

ಮೊಯಿನ್‌ ಅಲಿ ಬದಲಿಗೆ ಆಡಲಿಳಿದ ದಕ್ಷಿಣ ಆಫ್ರಿಕಾದ ವೇಗಿ ಕ್ರಿಸ್‌ ಮಾರಿಸ್‌ ಮಾರಕ ದಾಳಿ ನಡೆಸಿದರು. ಕೇವಲ 19 ರನ್‌ ಬಿಟ್ಟುಕೊಟ್ಟು ಮೂರು ವಿಕೆಟ್‌ ಕಬಳಿಸಿದರು. ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌ ಪಡೆದರು.

ಚೆನ್ನೈ ಪರ ಅಗ್ರ ಕ್ರಮಾಂಕದ ಆಟಗಾರರಾದ ಫಾ ಡು ಪ್ಲೆಸಿಸ್‌, ವಾಟ್ಸನ್‌ ಉತ್ತಮ ಬ್ಯಾಟಿಂಗ್‌ ನಡೆಸುವಲ್ಲಿ ವಿಫ‌ಲರಾದರು. ರಾಯುಡು (42), ಜಗದೀಶನ್‌ (33) ರನ್‌ ಗಳಿಸಿದರು.

ಈ ಪಂದ್ಯದಲ್ಲಿ ಆರ್‌ಸಿಬಿ ಆರಂಭ ಉತ್ತಮವಾಗಿರಲಿಲ್ಲ. ಆಸೀಸ್‌ ಬಿಗ್‌ ಹಿಟ್ಟರ್‌ ಆರನ್‌ ಫಿಂಚ್‌ ಎರಡೇ ರನ್ನಿಗೆ ನಿರ್ಗಮಿಸಿದ್ದು ತಂಡಕ್ಕೆ ದೊಡ್ಡ ಆಘಾತವಿಕ್ಕಿತು. ಅವರನ್ನು ಬೌಲ್ಡ್‌ ಮಾಡುವ ಮೂಲಕ ದೀಪಕ್‌ ಚಹರ್‌ ಕಳೆದ ಪಂದ್ಯದ ವೈಫ‌ಲ್ಯವನ್ನು ಬದಿಗೊತ್ತಿದರು. ಅವರು 3 ಓವರ್‌ಗಳಲ್ಲಿ ಬರೀ 10 ರನ್‌ ನೀಡಿ ಒಂದು ವಿಕೆಟ್‌ ಪಡೆದರು.

2ನೇ ವಿಕೆಟ್‌ಗೆ ಜತೆಯಾದ ಕೊಹ್ಲಿ ಮತ್ತು ಪಡಿಕ್ಕಲ್‌ ಎಚ್ಚರಿಕೆಯ ಆಟವಾಡತೊಡಗಿದರು ಈ ಜೋಡಿಯಿಂದ 53 ರನ್‌ಗಳು ಒಟ್ಟುಗೂಡಿತು. ಪಡಿಕ್ಕಲ್‌ 33 ರನ್‌ ಗಳಿಸಿದ ವೇಳೆ ಸಿಕ್ಸರ್‌ ಬಾರಿಸುವ ಪ್ರಯತ್ನದಲ್ಲಿ ಫಾ ಡು ಪ್ಲೆಸಿಸ್‌ಗೆ ಕ್ಯಾಚ್‌ ನೀಡುವ ಮೂಲಕ ಔಟಾದರು. ಇದರ ಬೆನ್ನಲ್ಲೆ ಎಬಿಡಿ ಖಾತೆ ತೆರೆಯದೆ ಪೆವಿಲಿಯನ್‌ ಸೇರಿದರು. ಈ ಇಬ್ಬರ ವಿಕೆಟ್‌ ಬೇಟೆಯಾಡುವಲ್ಲಿ ಶಾರ್ದುಲ್‌ ಠಾಕೂರ್‌ ಯಶಸ್ವಿಯಾದರು.

ಇನ್ನೊಂದು ಬದಿಯಲ್ಲಿ ನಾಯಕ ವಿರಾಟ್‌ ಮಾತ್ರ ಏಕಾಂಗಿಯಾಗಿ ನಿಂತು ಚೆನ್ನೈ ಬೌಲರ್‌ಗಳ ಮೇಲೆ ಸವಾರಿ ಮಾಡುತ್ತಲೇ ಇದ್ದರು. 54 ಎಸೆತಗಳನ್ನು ಎದುರಿಸಿ ಅಜೇಯ 90 ರನ್‌ (4 ಸಿಕ್ಸರ್‌ 4 ಬೌಂಡರಿ) ಸಿಡಿಸಿದರು. ಕೆಳ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಆಲ್‌ರೌಂಡರ್‌ ದುಬೆ 14 ಎಸೆಗಳಿಂದ ಅಜೇಯ 22 ರನ್‌ ಸೂರೆಗೈದರು.

ಸಂಕ್ಷಿಪ್ತ ಸ್ಕೋರ್‌: ಆರ್‌ಸಿಬಿ 20 ಓವರ್‌ಗಳಲ್ಲಿ 169ಕ್ಕೆ 4 (ಕೊಹ್ಲಿ ಅಜೇಯ 90, ಪಡಿಕ್ಕಲ್‌ 33, ಶಾರ್ದುಲ್‌ 40ಕ್ಕೆ 2).

ಚೆನ್ನೈ: 20 ಓವರ್‌ಗಳಲ್ಲಿ 132ಕ್ಕೆ 8 (ರಾಯುಡು 42, ಮಾರಿಸ್‌ 19ಕ್ಕೆ 3).

ಟಾಪ್ ನ್ಯೂಸ್

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.