ಬ್ಯಾಟಿಂಗ್‌ ಬಲವನ್ನೇ ನೆಚ್ಚಿರುವ ಡೆಲ್ಲಿ, ರಾಜಸ್ಥಾನ್‌


Team Udayavani, Apr 15, 2021, 7:00 AM IST

ಬ್ಯಾಟಿಂಗ್‌ ಬಲವನ್ನೇ ನೆಚ್ಚಿರುವ ಡೆಲ್ಲಿ, ರಾಜಸ್ಥಾನ್‌

ಮುಂಬಯಿ : ಐಪಿಎಲ್‌ನ ನೂತನ ನಾಯಕರಾದ ರಿಷಭ್‌ ಪಂತ್‌-ಸಂಜು ಸ್ಯಾಮ್ಸನ್‌ ತಂಡಗಳ ನಡುವಿನ ಗುರುವಾರದ ಹೋರಾಟಕ್ಕೆ ವಾಂಖೇಡೆ ಸ್ಟೇಡಿಯಂ ಅಣಿಯಾಗಿದೆ. ಆದರೆ ಎರಡೂ ತಂಡಗಳು ಗಂಭೀರ ಸಮಸ್ಯೆಯಿಂದ ಬಳಲುತ್ತಿರುವುದು ಚಿಂತೆಯ ಸಂಗತಿಯಾಗಿದೆ.

ಬಿಗ್‌ ಹಿಟ್ಟಿಂಗ್‌ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಕೈ ಬೆರಳು ಮುರಿದುಕೊಂಡು ಐಪಿಎಲ್‌ನಿಂದ ಬೇರ್ಪಟ್ಟಿರುವುದು ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ಬಿದ್ದ ದೊಡ್ಡ ಹೊಡೆತ. ಸ್ಯಾಮ್ಸನ್‌ ಅವರ ಅಬ್ಬರದ ಶತಕದ ಹೊರತಾಗಿಯೂ ಪಂಜಾಬ್‌ ಕಿಂಗ್ಸ್‌ ಎದುರಿನ ಪಂದ್ಯವನ್ನು 4 ರನ್ನಿನಿಂದ ಕಳೆದುಕೊಂಡ ರಾಜಸ್ಥಾನ್‌ ತಂಡಕ್ಕೆ ಇದು ಭಾರೀ ಹಿನ್ನಡೆಯಾಗಿ ಪರಿಣಮಿಸಿದೆ.

ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪ್ರಧಾನ ವೇಗಿ ಅನ್ರಿಚ್‌ ನೋರ್ಜೆ ಅವರಿಗೆ ಕೊರೊನಾ ಸೋಂಕು ಆವರಿಸಿದೆ. ಹೀಗಾಗಿ ಅವರು ಇನ್ನೂ ಕೆಲವು ಪಂದ್ಯಗಳಲ್ಲಿ ಆಡುವ ಸಾಧ್ಯತೆ ಇಲ್ಲ. ಇದು ಡೆಲ್ಲಿ ತಂಡಕ್ಕೆ ಹೊಡೆತವೆಂಬುದರಲ್ಲಿ ಅನುಮಾನವಿಲ್ಲ. ಆದರೆ ಕಳೆದ ಬಾರಿಯ ರನ್ನರ್ ಅಪ್‌ ಡೆಲ್ಲಿ ತನ್ನ ಮೊದಲ ಪಂದ್ಯದಲ್ಲಿ ನೋರ್ಜೆ ಗೈರಲ್ಲೇ ಚೆನ್ನೈಗೆ ಸೋಲುಣಿಸಿದ ಉತ್ಸಾಹದಲ್ಲಿದೆ.

ಚೆನ್ನೈ ವಿರುದ್ಧ ಡೆಲ್ಲಿ ಬ್ಯಾಟಿಂಗ್‌ ಬಲದಿಂದ ಗೆದ್ದು ಬಂದಿತ್ತು. 189 ರನ್‌ ಚೇಸ್‌ ಮಾಡುವ ವೇಳೆ ಶಿಖರ್‌ ಧವನ್‌-ಪೃಥ್ವಿ ಶಾ ಸಿಡಿದು ನಿಂತು 138 ರನ್‌ ಜತೆಯಾಟ ನಿಭಾಯಿಸಿದ್ದರು. ಹೀಗಾಗಿ ಇಲ್ಲಿ ಉಳಿದವರಿಗೆ ಹೆಚ್ಚಿನ ಬ್ಯಾಟಿಂಗ್‌ ಅವಕಾಶ ಲಭಿಸಿರಲಿಲ್ಲ. ಪಂತ್‌ ಜತೆಗೆ ರಹಾನೆ, ಸ್ಟೋಯಿನಿಸ್‌ ಅವರ ಬ್ಯಾಟಿಂಗ್‌ ಫಾರ್ಮ್ ಹೇಗಿದೆ ಎಂಬುದು ಅರಿಯಬೇಕಿದೆ.

ನೋರ್ಜೆ-ರಬಾಡ ಗೈರಲ್ಲಿ ಕ್ರಿಸ್‌ ವೋಕ್ಸ್‌, ಆವೇಶ್‌ ಖಾನ್‌ ಪರಿಣಾಮಕಾರಿ ದಾಳಿ ಸಂಘಟಿಸಿದ್ದರು. ಡು ಪ್ಲೆಸಿಸ್‌ ಮತ್ತು ಧೋನಿ ಅವರನ್ನು ಶೂನ್ಯಕ್ಕೆ ವಾಪಸ್‌ ಕಳುಹಿಸಿದ್ದು ಆವೇಶ್‌ ಖಾನ್‌ ಸಾಹಸವಾಗಿತ್ತು. ಆದರೆ ಅಶ್ವಿ‌ನ್‌, ಟಾಮ್‌ ಕರನ್‌ ದುಬಾರಿಯಾಗಿದ್ದರು. ಬಲಿಷ್ಠ ಬ್ಯಾಟಿಂಗ್‌ ಸರದಿಯನ್ನು ಹೊಂದಿರುವ ರಾಜಸ್ಥಾನ್‌ಗೆ ಕಡಿವಾಣ ಹಾಕಬೇಕಾದರೆ ಡೆಲ್ಲಿಯ ಬೌಲರ್ ಮಿಂಚಬೇಕಾದುದು ಅನಿವಾರ್ಯ.

ಬೌಲಿಂಗ್‌ ದುರ್ಬಲ
ರಾಜಸ್ಥಾನ್‌ ಕೂಡ ಬ್ಯಾಟಿಂಗ್‌ ಬಲವನ್ನೇ ನೆಚ್ಚಿಕೊಂಡಿದೆ. ಐಪಿಎಲ್‌ ನಾಯಕತ್ವದ ಮೊದಲ ಪಂದ್ಯದಲ್ಲೇ ಸೆಂಚುರಿ ಬಾರಿಸಿದ ಮೊದಲ ಕ್ರಿಕೆಟಿಗನೆಂಬ ದಾಖಲೆ ಸ್ಥಾಪಿಸಿರುವ ಸಂಜು ಸ್ಯಾಮ್ಸನ್‌ ಮೇಲೆ ತಂಡ ಹೆಚ್ಚಿನ ನಿರೀಕ್ಷೆ ಇರಿಸಿಕೊಂಡಿದೆ. ಬಟ್ಲರ್‌, ದುಬೆ, ವೋಹ್ರಾ, ಪರಾಗ್‌, ತೇವಟಿಯಾ ಮಾರಿಸ್‌ ಕೂಡ ದೊಡ್ಡ ಮೊತ್ತಕ್ಕೆ ನೆರವು ನೀಡಬೇಕಿದೆ.

ಬೌಲಿಂಗ್‌ನಲ್ಲಿ ಚೇತನ್‌ ಸಕಾರಿಯಾ ಹೊರತುಪಡಿಸಿ ಉಳಿದವರೆಲ್ಲ ದುಬಾರಿ ಯಾಗಿದ್ದರು. ಒಟ್ಟು 8 ಮಂದಿಯನ್ನು ದಾಳಿಗಿಳಿ ಸಿದರೂ ಪಂಜಾಬ್‌ಗ ಕಡಿವಾಣ ಹಾಕಲು ಸಾಧ್ಯವಾಗಿರಲಿಲ್ಲ. ಈ ಸಮಸ್ಯೆಯನ್ನು ರಾಜಸ್ಥಾನ್‌ ಹೋಗಲಾಡಿಸಿಕೊಳ್ಳಬೇಕಿದೆ.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.