ಐಪಿಎಲ್‌-2023: ಚಾಂಪಿಯನ್‌ ಗುಜರಾತ್‌ಗೆ ಚೆನ್ನೈ ಸವಾಲು

ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದಾರೆ ಹಾರ್ದಿಕ್‌-ಧೋನಿ

Team Udayavani, Mar 31, 2023, 7:51 AM IST

guj che match

ಅಹ್ಮದಾಬಾದ್‌: ಕೋವಿಡ್‌ ನಂತರ ಮೊದಲ ಬಾರಿಗೆ ಐಪಿಎಲ್‌ ಉದ್ಘಾಟನಾ ಸಮಾರಂಭ ನಡೆಯಲಿದೆ. ಶುಕ್ರವಾರ ಈ ಸಮಾರಂಭ ಮುಗಿದ ಕೂಡಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ. ಇನ್ನೊಂದು ರೀತಿಯಲ್ಲಿ ನೋಡುವುದಾದರೆ ಯುವ ನಾಯಕ ಹಾರ್ದಿಕ್‌ ಪಾಂಡ್ಯ ಮತ್ತು ಅನುಭವಿ ಮಹೇಂದ್ರ ಸಿಂಗ್‌ ಧೋನಿ ನಡುವಣ ಹೋರಾಟವೂ ಆಗಿದೆ.
ಐಪಿಎಲ್‌ ನಾಯಕರಾಗಿ ಮೊದಲ ವರ್ಷವೇ ಹಾರ್ದಿಕ್‌ ಪಾಂಡ್ಯ ಮೈದಾನದ ಒಳಗೆ ಮತ್ತು ಹೊರಗೆ ಅಮೋಘ ನಿರ್ವಹಣೆ ದಾಖಲಿಸಿ ತಂಡಕ್ಕೆ ಪ್ರಶಸ್ತಿ ದೊರಕಿಸಿಕೊಟ್ಟಿದ್ದರು. ಅವರು ತಂಡವನ್ನು ಮುನ್ನಡೆಸಿದ ರೀತಿ ಎಲ್ಲರಿಂದಲೂ ಪ್ರಶಂಸೆಗೆ ಪಾತ್ರವಾಗಿತ್ತು. ಅವರ ಸಮರ್ಥ ನಾಯಕತ್ವದಿಂದಾಗಿ ಟೈಟಾನ್ಸ್‌ ಉಳಿದ ಯಾವುದೇ ತಂಡಗಳಿಗೆ ಸಾಟಿಯಾಗಲೇ ಇಲ್ಲ.

ಶುಭಮನ್‌ ಗಿಲ್‌ ಪ್ರಚಂಡ ಫಾರ್ಮ್ನಲ್ಲಿರುವುದು, ರಶೀದ್‌ ಖಾನ್‌ ಅವರ ಸ್ಥಿರ ನಿರ್ವಹಣೆ ಹಾಗೂ ಪಾಂಡ್ಯ ಅವರ ಚಿನ್ನದಂತ ಬ್ಯಾಟಿಂಗ್‌ ವೈಭವದಿಂದ ಗುಜರಾತ್‌ ಈ ಬಾರಿಯೂ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ, ಮಾತ್ರವಲ್ಲದೇ ಪ್ರಶಸ್ತಿ ಉಳಿಸಿಕೊಳ್ಳುವ ತಂಡವೆನಿಸಿದೆ. ಡೇವಿಡ್‌ ಮಿಲ್ಲರ್‌ ಅವರ ಅನುಪಸ್ಥಿತಿಯಿಂದ ತಂಡದ ಬ್ಯಾಟಿಂಗ್‌ ಬಲಕ್ಕೆ ಸ್ವಲ್ಪಮಟ್ಟಿನ ಹೊಡೆತ ಬೀಳಬಹುದು. ಆದರೆ ಸ್ಫೋಟಕ ಖ್ಯಾತಿಯ ರಾಹುಲ್‌ ತೆವಾತಿಯಾ ಅವರು ಮಿಲ್ಲರ್‌ ಅವರ ಅನುಪಸ್ಥಿತಿಯನ್ನು ಸರಿದೂಗಿಸಬಹುದು. ಕೇನ್‌ ವಿಲಿಯಮ್ಸನ್‌ ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ಬಹಳಷ್ಟು ಮಿಂಚದಿದ್ದರೂ ಅವರೊಬ್ಬ ಪ್ರಚಂಡ ಬ್ಯಾಟರ್‌ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

ತನ್ನ ಮೆಂಟರ್‌ ಆಗಿರುವ ಧೋನಿ ಅವರಿಂದ ನಾಯಕತ್ವದ ಗುಣಗಳನ್ನು ಕಲಿತಿರುವ ಹಾರ್ದಿಕ್‌ ಇದೀಗ ಗುಜರಾತ್‌ ತಂಡವನ್ನು ಆರಂಭಿಕ ವರ್ಷದಲ್ಲಿಯೇ ಯಶಸ್ವಿಯಾಗಿ ಮುನ್ನಡೆಸಿದ ಕೀರ್ತಿ ಹೊಂದಿದ್ದಾರೆ. ಅದನ್ನು ಈ ವರ್ಷವೂ ಮುಂದುವರಿಸುವ ತವಕದಲ್ಲಿ ಅವರಿದ್ದಾರೆ. ಆದರೆ 42ರ ಹರೆಯದ ಧೋನಿ ಅವರಿಗೆ ಐಪಿಎಲ್‌ನಲ್ಲಿ ಹೇಗೆ ಆಡಬೇಕು, ತಂಡವನ್ನು ಹೇಗೆ ಸಂಯೋಜಿಸಬೇಕೆಂಬುದು ಖಂಡಿತ ತಿಳಿದಿದೆ. ಇದರ ಹೊರತಾಗಿಯೂ ಚೆನ್ನೈ ಕಳೆದ ವರ್ಷ ಪ್ಲೇಆಫ್ಗೆ ತೇರ್ಗಡೆಯಾಗದಿರುವುದು ಅವರಿಗೆ ಬಹಳ ನೋವುಂಟು ಮಾಡಿದೆ.

ಇಂಪ್ಯಾಕ್ಟ್ ಪ್ಲೇಯರ್‌ ಆಗಿ ಸ್ಟೋಕ್ಸ್‌?: ಇದೇ ಮೊದಲ ಬಾರಿ ಐಪಿಎಲ್‌ನಲ್ಲಿ ಬಳಸುವ ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಚೆನ್ನೈ ಕಿಂಗ್ಸ್‌ ತಂಡ ಸೂಕ್ತವಾಗಿ ಬಳಸಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಸದ್ಯ ಇಂಗ್ಲೆಂಡ್‌ ಆಟಗಾರ, ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಬೌಲಿಂಗ್‌ ಮಾಡುವ ಸ್ಥಿತಿಯಲ್ಲಿಲ್ಲ. ಇಂಪ್ಯಾಕ್ಟ್ ಪ್ಲೇಯರ್‌ ನಿಯಮದಂತೆ ತಂಡವೊಂದು ಒಟ್ಟಾರೆ 12 ಆಟಗಾರರನ್ನು ಕಣಕ್ಕಿಳಿಸಬಹುದು. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸ್ಟೋಕ್ಸ್‌ ಚೆನ್ನೈ ಪರ ಇಂಪ್ಯಾಕ್ಟ್ ಪ್ಲೇಯರ್‌ ಆಗಲ್ದಿದಾರಾ?

ಚೆನ್ನೈ ಪರ ಬೆನ್‌ ಸ್ಟೋಕ್ಸ್‌ ಅವರು ಆಡುವುದರಿಂದ ಎದುರಾಳಿ ತಂಡಗಳು ಹೆಚ್ಚುವರಿ ಎಚ್ಚರಿಕೆ ವಹಿಸುವುದು ಖಚಿತ. ಅವರು ಆರಂಭದ ಕೆಲವು ಪಂದ್ಯಗಳಲ್ಲಿ ಹೇಗೂ ಬೌಲಿಂಗ್‌ ಮಾಡುವುದಿಲ್ಲ. ಅಲ್ಲದೇ ಫೀಲ್ಡಿಂಗ್‌ಗೆ ಅವರನ್ನು ಕಣಕ್ಕಿಳಿಸಿ ರಿಸ್ಕ್ ತೆಗೆದುಕೊಳ್ಳುವುದಕ್ಕಿಂತ; ಒಟ್ಟಾರೆ 11ರ ತಂಡದಿಂದ ಹೊರಕ್ಕುಳಿಸಿ, ಬ್ಯಾಟಿಂಗ್‌ ವೇಳೆ ಇಂಪ್ಯಾಕ್ಟ್ ಪ್ಲೇಯರ್‌ ರೂಪದಲ್ಲೇ ಇಳಿಸುವುದು ಚೆನ್ನೈಗೆ ಗರಿಷ್ಠ ಲಾಭ ನೀಡಲಿದೆ. ಈ ಕಾರಣಕ್ಕಾಗಿ ಧೋನಿ ನಾಲ್ವರ ಬದಲಿಗೆ ಮೂವರು ವಿದೇಶಿ ಆಟಗಾರರನ್ನು ಆಡಿಸುವ ಬಗ್ಗೆ ಯೋಚಿಸುವ ಸಾಧ್ಯತೆಯಿದೆ.

ತಂಡಗಳ ಬಲಾಬಲವನ್ನು ಗಮನಿಸಿದರೆ ಎರಡೂ ತಂಡಗಳು ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಬಲಿಷ್ಠವಾಗಿದೆ. ಹೀಗಾಗಿ ಈ ಪಂದ್ಯ ತೀವ್ರ ಪೈಪೋಟಿಯಿಂದ ಸಾಗುವ ಸಾಧ್ಯತೆಯಿದೆ. ಗುಜರಾತ್‌ ತಂಡದಲ್ಲಿ ನಾಯಕ ಪಾಂಡ್ಯ ಅವರಲ್ಲದೇ ಗಿಲ್‌, ತೆವಾತಿಯಾ, ವಿಲಿಯಮ್ಸನ್‌, ಮ್ಯಾಥ್ಯೂ ವೇಡ್‌ ಹಾಗೂ ಬೌಲಿಂಗ್‌ನಲ್ಲಿ ರಶೀದ್‌ ಖಾನ್‌, ಶಿವಂ ಮಾವಿ, ಮೊಹಮ್ಮದ್‌ ಶಮಿ ಮುಂತಾದವರು ಇದ್ದಾರೆ. ಚೆನ್ನೈ ತಂಡದಲ್ಲಿ ನಾಯಕ ಧೋನಿ ಸೇರಿದಂತೆ ರವೀಂದ್ರ ಜಡೇಜ, ಡೆವೋನ್‌ ಕಾನ್ವೆ, ಋತುರಾಜ್‌ ಗಾಯಕ್ವಾಡ್‌, ಅಂಬಾಟಿ ರಾಯುಡು, ರಹಾನೆ ಮುಂತಾದವರಿದ್ದಾರೆ.

ಆರಂಭ: ರಾತ್ರಿ 7.30
ನೇರ ಪ್ರಸಾರ: ಸ್ಟಾರ್‌ ನ್ಪೋರ್ಟ್ಸ್, ಜಿಯೊ ಸಿನಿಮಾ

 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.