IPL 2023: ಸಿಡಿದು ನಿಂತ ಡೆಲ್ಲಿ ಕ್ಯಾಪಿಟಲ್ಸ್‌


Team Udayavani, May 18, 2023, 7:23 AM IST

DC

ಧರ್ಮಶಾಲಾ: ಈಗಾಗಲೇ ಐಪಿಎಲ್‌ನಿಂದ ಹೊರಬಿದ್ದಿರುವ ಡೆಲ್ಲಿ ಕ್ಯಾಪಿಟಲ್ಸ್‌ ಬುಧವಾರದ ಪಂಜಾಬ್‌ ಕಿಂಗ್ಸ್‌ ಎದುರಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದು, ಕೇವಲ 2 ವಿಕೆಟಿಗೆ 213 ರನ್‌ ರಾಶಿ ಹಾಕಿದೆ. ಪಂಜಾಬ್‌ ಪಾಲಿಗೆ ಇದು “ಮಸ್ಟ್‌ ವಿನ್‌ ಗೇಮ್‌” ಆಗಿದೆ. ಇದು 10 ವರ್ಷಗಳ ಬಳಿಕ ಧರ್ಮಶಾಲಾದಲ್ಲಿ ನಡೆದ ಐಪಿಎಲ್‌ ಪಂದ್ಯ ಎಂಬುದು ವಿಶೇಷ.

ಬಹಳ ಸಮಯದ ಬಳಿಕ ಆಡುವ ಬಳಗದಲ್ಲಿ ಕಾಣಿಸಿಕೊಂಡ ಪೃಥ್ವಿ ಶಾ, ನಾಯಕ ಡೇವಿಡ್‌ ವಾರ್ನರ್‌, ರಿಲೀ ರೋಸ್ಯೂ ಎಲ್ಲರೂ ಮುನ್ನುಗ್ಗಿ ಬಾರಿಸತೊಡಗಿದರು. ಮೊದಲೆರಡು ಓವರ್‌ಗಳಲ್ಲಷ್ಟೇ ಡೆಲ್ಲಿ ಸ್ಕೋರ್‌ ಕಡಿಮೆ ಇತ್ತು. ಬಳಿಕ ಹತ್ತರ ಸರಾಸರಿಯಲ್ಲಿ ರನ್‌ ಬರತೊಡಗಿತು.

10.2 ಓವರ್‌ಗಳ ತನಕ ಕ್ರೀಸ್‌ ಆಕ್ರಮಿಸಿಕೊಂಡ ವಾರ್ನರ್‌-ಶಾ ಮೊದಲ ವಿಕೆಟಿಗೆ 94 ರನ್‌ ಪೇರಿಸಿದರು. ವಾರ್ನರ್‌ 46 ರನ್‌ ಹೊಡೆದರೆ, ಶಾ 54 ರನ್‌ ಬಾರಿಸಿದರು. ಇದು ಪ್ರಸಕ್ತ ಐಪಿಎಲ್‌ನಲ್ಲಿ ಶಾ ಹೊಡೆದ ಮೊದಲ ಅರ್ಧ ಶತಕ. ಮೊದಲ 6 ಇನ್ನಿಂಗ್ಸ್‌ಗಳಲ್ಲಿ ಕೇವಲ 47 ರನ್‌ ಮಾಡಿದ ಶಾ ಅವರನ್ನು ಅನಂತರ ಕೈಬಿಡಲಾಗಿತ್ತು. ಅವರ 54 ರನ್‌ 38 ಎಸೆತಗಳಿಂದ ಬಂತು. ಸಿಡಿಸಿದ್ದು 7 ಬೌಂಡರಿ ಹಾಗೂ ಒಂದು ಸಿಕ್ಸರ್‌.

ವಾರ್ನರ್‌ 46 ರನ್‌ಗಾಗಿ 31 ಎಸೆತ ಎದುರಿಸಿದರು. ಇದು 5 ಬೌಂಡರಿ ಹಾಗೂ 2 ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಆರಂಭಿಕರಿಬ್ಬರ ವಿಕೆಟ್‌ಗಳೂ ಸ್ಯಾಮ್‌ ಕರನ್‌ ಪಾಲಾದವು. ಉಳಿದ ಬೌಲರ್‌ಗಳಾರೂ ಯಶಸ್ಸು ಕಾಣಲಿಲ್ಲ.

ಶಾ-ರೋಸ್ಯೂ ಜೋಡಿ ಕೂಡ ಉಪಯುಕ್ತ ಜತೆಯಾಟ ನಿಭಾಯಿಸಿತು. ದ್ವಿತೀಯ ವಿಕೆಟಿಗೆ 54 ರನ್‌ ಒಟ್ಟುಗೂಡಿತು. ರೋಸ್ಯೂ ಸಿಡಿಲಬ್ಬರದ ಆಟವಾಡಿ ಪಂಜಾಬ್‌ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಅವರದು ಅಜೇಯ 82 ರನ್‌ ಕೊಡುಗೆ. ಇದಕ್ಕೆ ಎದುರಿಸಿದ್ದು 37 ಎಸೆತ ಮಾತ್ರ. ಸಿಡಿಸಿದ್ದು 6 ಬೌಂಡರಿ ಹಾಗೂ 6 ಸಿಕ್ಸರ್‌. ಫಿಲಿಪ್‌ ಸಾಲ್ಟ್ 14 ಎಸೆತಗಳಿಂದ 26 ರನ್‌ ಮಾಡಿ ಅಜೇಯರಾಗಿ ಉಳಿದರು (2 ಬೌಂಡರಿ, 2 ಸಿಕ್ಸರ್‌).

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.