IPL 2023: ರಾಜಸ್ಥಾನ್‌ ಮೇಲೆರಗಿದ ಗುಜರಾತ್‌


Team Udayavani, May 6, 2023, 6:51 AM IST

GT

ಜೈಪುರ: ತನ್ನ ಘಾತಕ ಬೌಲಿಂಗ್‌ ಮೂಲಕ ರಾಜಸ್ಥಾನ್‌ ರಾಯಲ್ಸ್‌ ಮೇಲೆರಗಿದ ಗುಜರಾತ್‌ ಜೈಂಟ್ಸ್‌ 9 ವಿಕೆಟ್‌ಗಳ ಜಯಭೇರಿ ಮೊಳಗಿಸಿದೆ.
ಶುಕ್ರವಾರದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಪಡೆ 17.5 ಓವರ್‌ಗಳಲ್ಲಿ 118ಕ್ಕೆ ಆಲೌಟ್‌ ಆಯಿತು. ಇದು ತವರಿನ ಜೈಪುರ ಅಂಗಳದಲ್ಲಿ ರಾಜಸ್ಥಾನ್‌ ದಾಖಲಿಸಿದ ಕನಿಷ್ಠ ಗಳಿಕೆ. ಚೆನ್ನೈ ಎದುರಿನ 2012ರ ಪಂದ್ಯದಲ್ಲಿ 6ಕ್ಕೆ 126 ರನ್‌ ಗಳಿಸಿದ್ದು ಈವರೆಗಿನ ಕಡಿಮೆ ಸ್ಕೋರ್‌ ಆಗಿತ್ತು. ಜವಾಬಿತ್ತ ಗುಜರಾತ್‌ 13.5 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 119 ರನ್‌ ಬಾರಿಸಿತು. ಇದು 10 ಪಂದ್ಯಗಳಲ್ಲಿ ಗುಜರಾತ್‌ ಸಾಧಿಸಿದ 7ನೇ ಗೆಲುವು. 14 ಅಂಕಗಳೊಂದಿಗೆ ಅದು ಅಗ್ರಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿತು.
ಚೇಸಿಂಗ್‌ ವೇಳೆ ಗುಜರಾತ್‌ ಯಾವುದೇ ಒತ್ತಡಕ್ಕೆ ಸಿಲುಕಲಿಲ್ಲ. ಸಾಹಾ-ಗಿಲ್‌ ಸೇರಿಕೊಂಡು 71 ರನ್‌ ಪೇರಿಸಿದರು. ಬಳಿಕ ಹಾರ್ದಿಕ್‌ ಪಾಂಡ್ಯ ಸಿಡಿದು ನಿಂತರು. ಬ್ಯಾಟಿಂಗ್‌ನಂತೆ ರಾಜಸ್ಥಾನ್‌ ಬೌಲಿಂಗ್‌ ಕೂಡ ದಿಕ್ಕು ತಪ್ಪಿತು.

ರಶೀದ್‌ ಖಾನ್‌ (14ಕ್ಕೆ 3), ನೂರ್‌ ಅಹ್ಮದ್‌ (25ಕ್ಕೆ 2) ಸೇರಿಕೊಂಡು ಆತಿಥೇಯರ ಮೇಲೆ ಘಾತಕವಾಗಿ ಎರಗಿದರು. ಪವರ್‌ ಪ್ಲೇ ತನಕ ರಾಜಸ್ಥಾನ್‌ ಬ್ಯಾಟಿಂಗ್‌ ಉತ್ತಮ ಮಟ್ಟದಲ್ಲೇ ಇತ್ತು. 2 ವಿಕೆಟಿಗೆ ಭರ್ತಿ 50 ರನ್‌ ಒಟ್ಟುಗೂಡಿತ್ತು. ಆದರೆ ಅರ್ಧ ಹಾದಿ ಕ್ರಮಿಸುವಷ್ಟರಲ್ಲಿ ರಾಜಸ್ಥಾನ್‌ ಸ್ಥಿತಿ ಬಿಗಡಾಯಿಸತೊಡಗಿತು. 69 ರನ್ನಿಗೆ 5 ಪ್ರಮುಖ ವಿಕೆಟ್‌ ಉರುಳಿ ಹೋಯಿತು.

ಜಾಸ್‌ ಬಟ್ಲರ್‌ ಆಟ ಎಂಟೇ ರನ್ನಿಗೆ ಮುಗಿಯಿತು. ಮುಂಬೈ ವಿರುದ್ಧ ಸಿಡಿಲಬ್ಬರದ ಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್‌ 14ಕ್ಕೆ ರನೌಟ್‌ ಆದರು. ನಾಯಕ ಸಂಜು ಸ್ಯಾಮ್ಸನ್‌ ಹೋರಾಟದ ಸೂಚನೆ ನೀಡಿದರಾದರೂ 30 ರನ್‌ ಮಾಡಿ ಜೋಶುವ ಲಿಟ್ಲ ಬಲೆಗೆ ಬಿದ್ದರು. 20 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸೇರಿತ್ತು.
ರವಿಚಂದ್ರನ್‌ ಅಶ್ವಿ‌ನ್‌ (2), ರಿಯಾನ್‌ ಪರಾಗ್‌ (4) ಕೂಡ ತಂಡದ ನೆರವಿಗೆ ನಿಲ್ಲಲಿಲ್ಲ. ದೇವದತ್ತ ಪಡಿಕ್ಕಲ್‌ ಎಸೆತಕ್ಕೊಂದರಂತೆ 12 ರನ್‌ ಮಾಡಿ ವಾಪಸಾದರು (ಒಂದು ಬೌಂಡರಿ). ಚೈನಾಮನ್‌ ಬೌಲರ್‌ ನೂರ್‌ ಅಹ್ಮದ್‌ ಮೊದಲ ಓವರ್‌ನಲ್ಲೇ ಪಡಿಕ್ಕಲ್‌ ವಿಕೆಟ್‌ ಉಡಾಯಿಸಿ ರಾಜಸ್ಥಾನ್‌ ಮೇಲಿನ ಒತ್ತಡವನ್ನು ಇನ್ನಷ್ಟು ಹೆಚ್ಚಿಸಿದರು. ಧ್ರುವ ಜುರೆಲ್‌, ಶಿಮ್ರನ್‌ ಹೆಟ್‌ಮೈರ್‌ ಕೂಡ ಸಿಡಿಯಲು ವಿಫ‌ಲರಾದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.