IPL 2023: ಮುಂಬೈಗೆ ಜಯ: ಲಕ್ನೋ ಹೊರಕ್ಕೆ


Team Udayavani, May 25, 2023, 7:56 AM IST

M I

ಚೆನ್ನೈ: ಆಕಾಶ್‌ ಮಧ್ವಾಲ್‌ ಸಹಿತ ಬೌಲರ್‌ಗಳ ನಿಖರ ದಾಳಿಯ ಮೂಲಕ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಕೇವಲ 101 ರನ್ನಿಗೆ ನಿಯಂತ್ರಿಸಿದ ಮುಂಬೈ ಇಂಡಿಯನ್ಸ್‌ ತಂಡವು ಬುಧವಾರ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ 81 ರನ್ನುಗಳ ಜಯ ಸಾಧಿಸಿದೆ. ಈ ಗೆಲುವಿನಿಂದ ಮುಂಬೈ ಇಂಡಿಯನ್ಸ್‌ ಮೇ 26ರಂದು ನಡೆಯುವ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಮೇ 28ರಂದು ನಡೆಯುವ ಫೈನಲ್‌ ಹೋರಾಟದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ.

ಬ್ಯಾಟಿಂಗ್‌ ಕುಸಿತಕ್ಕೆ ಒಳಗಾಗಿ 16.3 ಓವರ್‌ಗಳಲ್ಲಿ 101 ರನ್ನಿಗೆ ಆಲೌಟ್‌ ಆದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಕೂಟದಿಂದ ಹೊರಬಿತ್ತು. ಈ ಮೊದಲು ಮುಂಬೈ ಇಂಡಿಯನ್ಸ್‌ ತಂಡವು 8 ವಿಕೆಟಿಗೆ 182 ರನ್‌ ಗಳಿಸಿತ್ತು.

ಮುಂಬೈಯ ಆಕಾಶ್‌ ಮಧ್ವಾಲ್‌ ಅವರ ಅದ್ಭುತ ದಾಳಿಗೆ ಲಕ್ನೋ ನೆಲಕಚ್ಚಿತು. ಮಧ್ವಾಲ್‌ ತನ್ನ 3.3. ಓವರ್‌ಗಳ ದಾಳಿಯಲ್ಲಿ ಕೇವಲ 5 ರನ್‌ ನೀಡಿ ಐದು ಅಮೂಲ್ಯ ವಿಕೆಟ್‌ ಹಾರಿಸಿ ಭರ್ಜರಿ ಗೆಲುವಿಗೆ ಕಾರಣರಾದರು.

ಉತ್ತಮ ಆರಂಭ

ಬೃಹತ್‌ ಮೊತ್ತ ಪೇರಿಸುವ ಉದ್ದೇಶದಿಂದಲೇ ಟಾಸ್‌ ಗೆದ್ದ ಮುಂಬೈ ತಂಡ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತು. ಆರಂಭಿಕರಾದ ಇಶಾನ್‌ ಕಿಶನ್‌ ಮತ್ತು ನಾಯಕ ರೋಹಿತ್‌ ಶರ್ಮ ಭರ್ಜರಿಯಾಗಿ ಆಡಿ ಉತ್ತಮ ಆರಂಭ ನೀಡಿದರು.

ಮೊದಲ ಮೂರು ಓವರ್‌ ಮುಗಿದಾಗ ತಂಡ 28 ರನ್‌ ಗಳಿಸಿತ್ತು. ಮುಂದಿನೆರಡು ಓವರ್‌ಗಳಲ್ಲಿ ಆರಂಭಿಕರು ಪೆವಿಲಿಯನ್‌ ಸೇರಿಕೊಂಡಾಗ ಮುಂಬೈ ಆಘಾತ ಅನುಭವಿಸಿತು. ನಾಯಕ ರೋಹಿತ್‌ ತಲಾ ಒಂದು ಬೌಂಡರಿ ಮತ್ತು ಸಿಕ್ಸರ್‌ಗೆ ಆಟ ಮುಗಿಸಿದರೆ ಇಶಾನ್‌ ಕಿಶನ್‌ ಮೂರು ಬೌಂಡರಿ ಬಾರಿಸಿದ್ದರು.

ಈ ಆಘಾತದಿಂದ ತಂಡವನ್ನು ಪಾರು ಮಾಡಲು ಸೂರ್ಯಕುಮಾರ್‌ ಯಾದವ್‌ ಮತ್ತು ಕ್ಯಾಮರಾನ್‌ ಗ್ರೀನ್‌ ಪ್ರಯತ್ನಪಟ್ಟರು. ಮೂರನೇ ವಿಕೆಟಿಗೆ ಅವರಿಬ್ಬರು 66 ರನ್‌ ಪೇರಿಸಿದರು. ಈ ಜೋಡಿ ಮುರಿದ ಬಳಿಕ ಲಕ್ನೋ ಮೇಲುಗೈ ಸಾಧಿಸಿತು. ನವೀನ್‌ ಉಲ್‌ ಹಕ್‌ ಮತ್ತು ಯಶ್‌ ಥಾಕೂರ್‌ ಅವರ ಅಮೋಘ ದಾಳಿಯಿಂದ ಮುಂಬೈಯ ರನ್‌ವೇಗಕ್ಕೆ ಕಡಿವಾಣ ಬಿತ್ತು ಮಾತ್ರವಲ್ಲದೇ ಕೆಲವು ವಿಕೆಟ್‌ ಉರುಳಿದವು. ನವೀನ್‌ ಉಲ್‌ ಹಕ್‌ 38 ರನ್‌ ನೀಡಿ 4 ವಿಕೆಟ್‌ ಉರುಳಿಸಿದರೆ ಯಶ್‌ ಥಾಕೂರ್‌ 34 ರನ್ನಿಗೆ 3 ವಿಕೆಟ್‌ ಪಡೆದರು.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-swqqe

WTC Final ; 469ಕ್ಕೆ ಆಸೀಸ್ ಆಲೌಟ್ ಮಾಡಿದ ಟೀಮ್ ಇಂಡಿಯಾ

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

ಐದು ವರ್ಷದ ಬಳಿಕ ಕೇಂದ್ರ ಗುತ್ತಿಗೆ ಪಡೆದ ನ್ಯೂಜಿಲ್ಯಾಂಡ್ ಬೌಲರ್ ಆ್ಯಡಂ ಮಿಲ್ನೆ

ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

ಓವಲ್ ನಲ್ಲಿ ಸ್ಮಿತ್ ಭರ್ಜರಿ ಶತಕ: ದ್ರಾವಿಡ್, ಪಾಂಟಿಂಗ್ ದಾಖಲೆ ಮುರಿದ ಸ್ಟೀವ್

thumb

WTC Final ನಲ್ಲಿ ಆಡಲು ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿತ್ತು, ಆದರೆ..

lionel messi to join  Inter Miami After PSG Exit

ಪಿಎಸ್ ಜಿ ತೊರೆದು ಅಮೆರಿಕದ ಕ್ಲಬ್ ಸೇರಲಿದ್ದಾರೆ ಫುಟ್ಬಾಲ್‌ ದಿಗ್ಗಜ ಲಿಯೋನೆಲ್‌ ಮೆಸ್ಸಿ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ