IPL 2023: ಮುಂಬೈಗೆ ಜಯ: ಲಕ್ನೋ ಹೊರಕ್ಕೆ


Team Udayavani, May 25, 2023, 7:56 AM IST

M I

ಚೆನ್ನೈ: ಆಕಾಶ್‌ ಮಧ್ವಾಲ್‌ ಸಹಿತ ಬೌಲರ್‌ಗಳ ನಿಖರ ದಾಳಿಯ ಮೂಲಕ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಕೇವಲ 101 ರನ್ನಿಗೆ ನಿಯಂತ್ರಿಸಿದ ಮುಂಬೈ ಇಂಡಿಯನ್ಸ್‌ ತಂಡವು ಬುಧವಾರ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ 81 ರನ್ನುಗಳ ಜಯ ಸಾಧಿಸಿದೆ. ಈ ಗೆಲುವಿನಿಂದ ಮುಂಬೈ ಇಂಡಿಯನ್ಸ್‌ ಮೇ 26ರಂದು ನಡೆಯುವ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಮೇ 28ರಂದು ನಡೆಯುವ ಫೈನಲ್‌ ಹೋರಾಟದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ.

ಬ್ಯಾಟಿಂಗ್‌ ಕುಸಿತಕ್ಕೆ ಒಳಗಾಗಿ 16.3 ಓವರ್‌ಗಳಲ್ಲಿ 101 ರನ್ನಿಗೆ ಆಲೌಟ್‌ ಆದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಕೂಟದಿಂದ ಹೊರಬಿತ್ತು. ಈ ಮೊದಲು ಮುಂಬೈ ಇಂಡಿಯನ್ಸ್‌ ತಂಡವು 8 ವಿಕೆಟಿಗೆ 182 ರನ್‌ ಗಳಿಸಿತ್ತು.

ಮುಂಬೈಯ ಆಕಾಶ್‌ ಮಧ್ವಾಲ್‌ ಅವರ ಅದ್ಭುತ ದಾಳಿಗೆ ಲಕ್ನೋ ನೆಲಕಚ್ಚಿತು. ಮಧ್ವಾಲ್‌ ತನ್ನ 3.3. ಓವರ್‌ಗಳ ದಾಳಿಯಲ್ಲಿ ಕೇವಲ 5 ರನ್‌ ನೀಡಿ ಐದು ಅಮೂಲ್ಯ ವಿಕೆಟ್‌ ಹಾರಿಸಿ ಭರ್ಜರಿ ಗೆಲುವಿಗೆ ಕಾರಣರಾದರು.

ಉತ್ತಮ ಆರಂಭ

ಬೃಹತ್‌ ಮೊತ್ತ ಪೇರಿಸುವ ಉದ್ದೇಶದಿಂದಲೇ ಟಾಸ್‌ ಗೆದ್ದ ಮುಂಬೈ ತಂಡ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತು. ಆರಂಭಿಕರಾದ ಇಶಾನ್‌ ಕಿಶನ್‌ ಮತ್ತು ನಾಯಕ ರೋಹಿತ್‌ ಶರ್ಮ ಭರ್ಜರಿಯಾಗಿ ಆಡಿ ಉತ್ತಮ ಆರಂಭ ನೀಡಿದರು.

ಮೊದಲ ಮೂರು ಓವರ್‌ ಮುಗಿದಾಗ ತಂಡ 28 ರನ್‌ ಗಳಿಸಿತ್ತು. ಮುಂದಿನೆರಡು ಓವರ್‌ಗಳಲ್ಲಿ ಆರಂಭಿಕರು ಪೆವಿಲಿಯನ್‌ ಸೇರಿಕೊಂಡಾಗ ಮುಂಬೈ ಆಘಾತ ಅನುಭವಿಸಿತು. ನಾಯಕ ರೋಹಿತ್‌ ತಲಾ ಒಂದು ಬೌಂಡರಿ ಮತ್ತು ಸಿಕ್ಸರ್‌ಗೆ ಆಟ ಮುಗಿಸಿದರೆ ಇಶಾನ್‌ ಕಿಶನ್‌ ಮೂರು ಬೌಂಡರಿ ಬಾರಿಸಿದ್ದರು.

ಈ ಆಘಾತದಿಂದ ತಂಡವನ್ನು ಪಾರು ಮಾಡಲು ಸೂರ್ಯಕುಮಾರ್‌ ಯಾದವ್‌ ಮತ್ತು ಕ್ಯಾಮರಾನ್‌ ಗ್ರೀನ್‌ ಪ್ರಯತ್ನಪಟ್ಟರು. ಮೂರನೇ ವಿಕೆಟಿಗೆ ಅವರಿಬ್ಬರು 66 ರನ್‌ ಪೇರಿಸಿದರು. ಈ ಜೋಡಿ ಮುರಿದ ಬಳಿಕ ಲಕ್ನೋ ಮೇಲುಗೈ ಸಾಧಿಸಿತು. ನವೀನ್‌ ಉಲ್‌ ಹಕ್‌ ಮತ್ತು ಯಶ್‌ ಥಾಕೂರ್‌ ಅವರ ಅಮೋಘ ದಾಳಿಯಿಂದ ಮುಂಬೈಯ ರನ್‌ವೇಗಕ್ಕೆ ಕಡಿವಾಣ ಬಿತ್ತು ಮಾತ್ರವಲ್ಲದೇ ಕೆಲವು ವಿಕೆಟ್‌ ಉರುಳಿದವು. ನವೀನ್‌ ಉಲ್‌ ಹಕ್‌ 38 ರನ್‌ ನೀಡಿ 4 ವಿಕೆಟ್‌ ಉರುಳಿಸಿದರೆ ಯಶ್‌ ಥಾಕೂರ್‌ 34 ರನ್ನಿಗೆ 3 ವಿಕೆಟ್‌ ಪಡೆದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.