IPL 2023: ರಾಜಸ್ಥಾನ್‌ ರಾಯಲ್ಸ್‌-ಪಂಜಾಬ್‌ ಕಿಂಗ್ಸ್‌ ಗೆಲುವಿಗಾಗಿ ಹೋರಾಟ


Team Udayavani, May 19, 2023, 7:57 AM IST

RR

ಧರ್ಮಶಾಲಾ: ಈ ಐಪಿಎಲ್‌ನ ಕೊನೆಯ ಸುತ್ತಿನ ಹೋರಾಟವು ಶುಕ್ರವಾರದಿಂದ ಆರಂಭವಾಗಲಿದ್ದು ಪ್ಲೇ ಆಫ್ಗೇರಲು ಎಲ್ಲ ತಂಡಗಳು ಗೆಲುವಿಗಾಗಿ ಶಕ್ತಿಮೀರಿ ಪ್ರಯತ್ನ ನಡೆಸುವ ಸಾಧ್ಯತೆಯಿದೆ. ಶುಕ್ರವಾರದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವು ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಎದುರಿಸಲಿದ್ದು ಗೆದ್ದ ತಂಡಕ್ಕೆ ಪ್ಲೇ ಆಫ್ಗೇರುವ ಸ್ವಲ್ಪ ಅವಕಾಶವಿದೆ.

ಪಂಜಾಬ್‌ ಮತ್ತು ರಾಜಸ್ಥಾನ್‌ ತಲಾ 12 ಅಂಕ ಹೊಂದಿದ್ದರೂ ಉತ್ತಮ ರನ್‌ಧಾರಣೆಯ ಆಧಾರದಲ್ಲಿ ರಾಜಸ್ಥಾನ್‌ ಆರನೇ ಸ್ಥಾನದಲ್ಲಿದ್ದರೆ ಪಂಜಾಬ್‌ ಎಂಟನೇ ಸ್ಥಾನದಲ್ಲಿದೆ. ಪಂಜಾಬ್‌ ಬುಧವಾರ ನಡೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ 15 ರನ್ನುಗಳಿಂದ ಸೋಲನ್ನು ಕಂಡಿತ್ತು. ಪಂಜಾಬ್‌ ಬ್ಯಾಟಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡಿದ್ದರೂ ಬೌಲಿಂಗ್‌ ಅಷ್ಟೊಂದು ನಿಖರವಾಗಿರಲಿಲ್ಲ. ದುರ್ಬಲ ಬೌಲಿಂಗ್‌ನಿಂದಾಗಿ ಡೆಲ್ಲಿ ತಂಡ 200 ಪ್ಲಸ್‌ ರನ್‌ ಗಳಿಸಲು ಸಾಧ್ಯವಾಗಿತ್ತು.

ಪಂಜಾಬ್‌ ಇಷ್ಟರವರೆಗಿನ ಪಂದ್ಯಗಳಲ್ಲಿ ನಿರೀಕ್ಷಿತ ನಿರ್ವಹಣೆ ನೀಡಿಲ್ಲ. ನಿರ್ಣಾಯಕ ಹಂತದಲ್ಲಿ ತಂಡ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ವೈಫ‌ಲ್ಯ ಅನುಭವಿಸಿದ್ದರಿಂದ ಸೋಲನ್ನು ಕಾಣುವಂತಾಯಿತು. ವೇಗದ ಪಡೆ ಪವರ್‌ಪ್ಲೇ ಮತ್ತು ಡೆತ್‌ ಓವರ್‌ಗಳಲ್ಲಿ ಹರಿತವಾಗಿರಲಿಲ್ಲ. ಬಹಳಷ್ಟು ರನ್‌ ಬಿಟ್ಟುಕೊಟ್ಟಿದೆ. ಕಾಗಿಸೊ ರಬಾಡ, ಸ್ಯಾಮ್‌ ಕರನ್‌ ಮತ್ತು ಅರ್ಷದೀಪ್‌ ಓವರೊಂದಕ್ಕೆ 10 ರನ್ನಿನಂತೆ ನೀಡಿದ್ದರಿಂದ ತಂಡ ಒತ್ತಡಕ್ಕೆ ಸಿಲುಕುವಂತಾಯಿತು.

ಈ ಐಪಿಎಲ್‌ನಲ್ಲಿ ರಬಾಡ ಅವರ ನಿರ್ವಹಣೆ ಶ್ರೇಷ್ಠ ಮಟ್ಟದಲ್ಲಿರಲಿಲ್ಲ. ಬುಧವಾರದ ಪಂದ್ಯದ ವೇಳೆ ಅರ್ಷದೀಪ್‌ ಅವರನ್ನು ಪವರ್‌ಪ್ಲೇ ಮತ್ತು ಡೆತ್‌ ಓವರ್‌ ವೇಳೆ ಬಳಸಿಕೊಳ್ಳದಿರುವುದು ಪ್ರಶ್ನಿಸುವಂತಾಗಿದೆ. ಅರ್ಷದೀಪ್‌ ಡೆತ್‌ ಓವರ್‌ಗಳಲ್ಲಿ ಪರಿಣಾಮಕಾರಿಯಾಗಿ ದಾಳಿ ಮಾಡುವಲ್ಲಿ ಸಮರ್ಥರಿದ್ದರು. ಅವರು ಗೆಲ್ಲಲೇಬೇಕಾದ ಶುಕ್ರವಾರದ ಪಂದ್ಯದಲ್ಲಿ ಉತ್ತಮ ನಿರ್ವಹಣೆ ನೀಡುವ ನಿರೀಕ್ಷೆಯಿದೆ.

ಪಂಜಾಬ್‌ನ ಬ್ಯಾಟಿಂಗ್‌ ಬಲಿಷ್ಠವಾಗಿದೆ. ಶಿಖರ್‌ ಧವನ್‌ ಕಳೆದ ಎರಡು ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ನೀಡಿಲ್ಲ. ಅವರಿಂದ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ. ಪ್ರಭ್‌ಸಿಮ್ರಾನ್‌ ಸಿಂಗ್‌, ಮ್ಯಾಥ್ಯೂ ಶಾರ್ಟ್‌, ಲಿವಿಂಗ್‌ಸ್ಟೋನ್‌ ಮುಂತಾದವರು ಉತ್ತಮ ಫಾರ್ಮ್ನಲ್ಲಿದ್ದಾರೆ.

ರಾಜಸ್ಥಾನ್‌ ಬಲಿಷ್ಠ
ಪಂಜಾಬ್‌ಗ ಹೋಲಿಸಿದರೆ ರಾಜಸ್ಥಾನ್‌ ಬಲಿಷ್ಠವಾಗಿದೆ. ಆದರೆ ಆರಂಭದ ಅಬ್ಬರ ಅನಂತರ ಕಂಡಿಲ್ಲ. ರಾಜಸ್ಥಾನ್‌ ಆರಂಭದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿತ್ತು. ಆಬಳಿಕ ತಂಡ ಸಮಸ್ಯೆಯಲ್ಲಿ ಸಿಲುಕಿತ್ತು. ಯಶಸ್ವಿ ಜೈಸ್ವಾಲ್‌, ಯುಜುವೇಂದ್ರ ಚಹಲ್‌ ಅಸಾಧಾರಣ ನಿರ್ವಹಣೆ ನೀಡಿದ್ದರೂ ತಂಡ ನಿರ್ಣಾಯಕ ಹಂತದಲ್ಲಿ ಕುಸಿದಿದೆ. ಜಾಸ್‌ ಬಟ್ಲರ್‌ ಕೆಲವೊಂದು ಪಂದ್ಯದಲ್ಲಿ ಭರ್ಜರಿಯಾಗಿ ಆಡಿ ದ್ದರೂ ಸ್ಥಿ ನಿರ್ವಹಣೆ ನೀಡುವಲ್ಲಿ ವಿಫ‌ಲರಾಗಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.