ಕ್ರೀಡಾಂಗಣಗಳಿಗೆ ಮುಕ್ತಿ; ಆಟ ಒಳಗೆ, ವೀಕ್ಷಕರು ಹೊರಗೆ!

ಕ್ರೀಡಾಪಟುಗಳ ಅಭ್ಯಾಸಕ್ಕೆ ಅನುಕೂಲ ಐಪಿಎಲ್‌ಗೆ ಹೊಸ ಜೀವ!

Team Udayavani, May 19, 2020, 5:50 AM IST

ಕ್ರೀಡಾಂಗಣಗಳಿಗೆ ಮುಕ್ತಿ; ಆಟ ಒಳಗೆ, ವೀಕ್ಷಕರು ಹೊರಗೆ!

ಹೊಸದಿಲ್ಲಿ: ಲಾಕ್‌ಡೌನ್‌ 4.0 ಮೇ ಅಂತ್ಯದ ತನಕ ವಿಸ್ತರಿಸಲ್ಪಟ್ಟರೂ ಭಾರತದ ಕ್ರೀಡೆಯಲ್ಲಿ ಹೊಸ ಬೆಳಕೊಂದು ಮೂಡುವ ಸೂಚನೆ ಲಭಿಸಿದೆ. ಕೋವಿಡ್-19 ದಿಂದಾಗಿ ಕಳೆದ ಸುಮಾರು 2 ತಿಂಗಳಿಂದ ಮುಚ್ಚಿದ್ದ ಕ್ರೀಡಾಂಗಣಗಳು, ಕ್ರೀಡಾ ಸಂಕೀರ್ಣಗಳೆಲ್ಲ ನೂತನ ಮಾರ್ಗ ಸೂಚಿಯೊಂದಿಗೆ ತೆರೆಯಲ್ಪಡಲಿವೆ. ಹೀಗಾಗಿ ದೇಶಾದ್ಯಂತ ಸ್ತಬ್ಧವಾಗಿದ್ದ ಕ್ರೀಡಾ ಚಟುವಟಿಕೆ ನಿಧಾನವಾಗಿ ಗರಿಗೆದರಲಿದೆ. ಇದರಿಂದ ಐಪಿಎಲ್‌ ನಡೆಯುವ ಸಾಧ್ಯತೆಯೂ ಹೆಚ್ಚಿದೆ.

ನೂತನ ನಿಯಮಾವಳಿ ನಿರೀಕ್ಷೆಯಂತೆಯೇ ಇದೆ. ಸ್ಟೇಡಿಯಂ, ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ಗಳೆಲ್ಲ ತೆರೆದರೂ ಇವು ಸಾರ್ವ ಜನಿಕರಿಗೆ ಮುಕ್ತವಾಗದು. ವೀಕ್ಷಕರಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿ ಸಲಾಗಿದೆ. ಮುಂದೆ ಪಂದ್ಯಗಳಿಗೆ ಅವಕಾಶ ಲಭಿಸಿದರೂ ಖಾಲಿ ಸ್ಟೇಡಿಯಂನಲ್ಲೇ ನಡೆಸಲಾಗುವುದು. ಹಾಗೆಯೇ ಕ್ರೀಡಾ ಪಟುಗಳು ಆರೋಗ್ಯ ಮಾರ್ಗಸೂಚಿಯನ್ನು ಪಾಲಿಸಿ ಸಣ್ಣ ಸಣ್ಣ ಗುಂಪುಗಳಾಗಿ ಅಭ್ಯಾಸ ನಡೆಸಬಹುದಾಗಿದೆ.

ಈ ಲಾಕ್‌ಡೌನ್‌ ಸಡಿಲಿಕೆಯಿಂದಾಗಿ ದೇಶದಲ್ಲಿ ಹಾಕಿ, ಕ್ರಿಕೆಟ್‌, ಫುಟ್‌ಬಾಲ್‌ ಪಂದ್ಯಗಳನ್ನು ನಡೆಸಲು ಸಾಧ್ಯವಾಗಲಿದೆ ಎಂಬುದೊಂದು ಲೆಕ್ಕಾಚಾರ. ಆದರೆ ಪ್ರೇಕ್ಷಕರಿಗೆ ನಿರ್ಬಂಧ ಇರುವುದರಿಂದ ಇದು ಎಷ್ಟರ ಮಟ್ಟಿಗೆ ಯಶಸ್ಸು ಕಾಣಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದು ಐಪಿಎಲ್‌ಗ‌ೂ ಅನ್ವಯಿಸಲಿದೆ.

ಐಪಿಎಲ್‌ ಆಯೋಜನೆ ಸಾಧ್ಯವೇ?
ಇದರಿಂದ 2020ರ ಐಪಿಎಲ್‌ ಪಂದ್ಯಾ ವಳಿಯನ್ನು ಖಾಲಿ ಸ್ಟೇಡಿಯಂನಲ್ಲಿ ನಡೆಸುವ ಬಗ್ಗೆ ಸಂಘಟಕರು ಯೋಚಿಸ ಬಹುದು. ಆದರೆ ಪ್ರಯಾಣ ನಿರ್ಬಂಧ ಇರುವುದರಿಂದ ಹಾಗೂ ವಿದೇಶಿ ಆಟಗಾರರು ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ವಾದ್ದರಿಂದ ಈಗಲೇ ಐಪಿಎಲ್‌ ಬಗ್ಗೆ ಕನಸು ಕಟ್ಟುವುದು ದುಬಾರಿಗುವುದು ಖಂಡಿತ.

ಕಳೆದ ವಾರವಷ್ಟೇ ಕ್ರೀಡಾ ಸಚಿವ ರಿಜಿಜು ಅವರು ಕ್ರೀಡಾ ಪ್ರಮುಖರೊಂದಿಗೆ ಸಾಲು ಸಾಲು ವೀಡಿಯೋ ಸಮಾವೇಶ ನಡೆಸಿ ಎಲ್ಲರ ಅಹವಾಲುಗಳನ್ನು ಆಲಿಸಿದ್ದರು. ಕನಿಷ್ಠ, ಒಲಿಂಪಿಕ್ಸ್‌ ನಲ್ಲಿ ಪಾಲ್ಗೊಳ್ಳಲಿರುವ ಕ್ರೀಡಾ ಪಟುಗಳ ಅಭ್ಯಾ ಸಕ್ಕೆ ಅವಕಾಶ ಕಲ್ಪಿಸಿ ಎಂದು ಸಾಯ್‌ ಕೂಡ ಮನವಿ ಮಾಡಿತ್ತು.

ಗುತ್ತಿಗೆ ಆಟಗಾರರಿಗೆ ಅಭ್ಯಾಸಕ್ಕೆ ಅವಕಾಶ
ಹೊಸದಿಲ್ಲಿ: ಕೇಂದ್ರ ಸರಕಾರ ಘೋಷಿಸಿದ ನಾಲ್ಕನೇ ಹಂತದ ಲಾಕ್‌ಡೌನ್‌ ಮಾರ್ಗ ಸೂಚಿಯಲ್ಲಿ ಕೆಲ ಸಡಿಲಿಕೆ ಇರುವ ಕಾರಣದಿಂದಾಗಿ ಗುತ್ತಿಗೆ ಆಟಗಾರರಿಗೆ ಸ್ಥಳೀಯ ಮಟ್ಟದಲ್ಲಿ ಕೌಶಲ ಆಧಾರಿತ ತರಬೇತಿ ಶಿಬಿರ ಆರಂಭಿಸಲು ಯೋಚಿಸಲಾಗಿದೆ ಎಂದು ಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌ ಹೇಳಿದ್ದಾರೆ.

ಗೃಹ ಸಚಿವಾಲಯದ ಮಾರ್ಗಸೂಚಿಯಂತೆ ಮೈದಾನಗಳನ್ನು ತೆರೆಯಲು ಅವಕಾಶ ದೊರೆತಿದೆ. ಆದರೆ ವೀಕ್ಷಕರಿಗೆ ಅನುಮತಿ ನೀಡಲಾಗಿಲ್ಲ. ಇನ್ನೂ ಪ್ರಯಾಣ ನಿರ್ಬಂಧ ಸಲುವಾಗಿ ತರಬೇತಿಯಲ್ಲಿ ಪಾಲ್ಗೊಳ್ಳಲು ಸಾದ್ಯವಾಗದ ಆಟಗಾರರು ವೈಯಕ್ತಿಕವಾಗಿ ತರಬೇತಿ ಆರಂಭಿಸಬಹುದು ತಿಳಿಸಿದೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.