ಚಾಮರಾಜಪೇಟೆ ಆಟದ ಮೈದಾನ ಜಮೀರ್ ಅಪ್ಪನ ಆಸ್ತಿಯಾ?: ಸಿ.ಟಿ.ರವಿ ಕಿಡಿ

ನಾವು ರಾಷ್ಟ್ರ ಧ್ವಜ ಹೋರಾಟಕ್ಕೆ ಐದು ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ...!

Team Udayavani, Aug 10, 2022, 1:59 PM IST

C-T-ravi

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಕೂರಿಸಬೇಡಿ, ಅನುಮತಿ ಕೊಡುವುದಿಲ್ಲ ಎಂದು ಹೇಳುವುದಕ್ಕೆ ಆಟದ ಮೈದಾನ ಜಮೀರ್ ಅಹಮದ್ ಖಾನ್ ಅವರ ಅಪ್ಪನ ಆಸ್ತೀನಾ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಅನುಮತಿ ಕೊಡುವುದು ಬಿಬಿಎಂಪಿ.ಈಗ ಅದು ಕಂದಾಯ ಇಲಾಖೆಗೆ ಸೇರಿದ ಸರ್ಕಾರದ ಆಸ್ತಿ, ಅಲ್ಲಿ ಗಣೇಶೋತ್ಸವ ಅದ್ದೂರಿಯಾಗಿ ಮಾಡುತ್ತೇವೆ. ಅದೇನೋ ಗಾದೆ ಇದೆಯಲ್ಲ, ಹೊಳೆ ನೀರಿಗೆ ದೊಣ್ಣೆ ನಾಯಕನ ಅಪ್ಪಣೆ ಬೇಕಾ.? ಇವನು ಯಾವ ಸೀಮೆ ದೊಣ್ಣೆ ನಾಯಕ ಎಂದರು.

ನಮ್ಮ ದೇಶದಲ್ಲಿ ಗಣಪತಿ ಇಡೋದಾ, ಬೇಡ್ವಾ ಎಂದು ಜಮೀರ್ ಅನುಮತಿ ಕೇಳಬೇಕಾ? ಜಮೀರ್ ಕೇಳಿ ಗಣೇಶೋತ್ಸವ ಮಾಡಬೇಕಾ, ನಮಗೆ ತಾಕತ್ ಇದೆ. ಗಣೇಶ ಕೂರಿಸುತ್ತೇವೆ. ಅದ್ದೂರಿಯಾಗಿ ಆಚರಣೆ ಮಾಡುತ್ತೇವೆ, ಯಾರು ತಡೆಯುತ್ತಾರೆ ಬರಲಿ ನೋಡೋಣ. ನಾವೇನು ಅರಬ್‌ನಲ್ಲಿ ಹೋಗಿ ಕೂರಿಸುತ್ತಿದ್ದೇವಾ? ಅಲ್ಲಿ ಕೂರಿಸುವುದಾ್ದಾರೆ ಜಮೀರ್ ಮತ್ತು ಅವರ ಪೂರ್ವಜರ ಅನುಮತಿ ಪಡೆಯೋಣ ಎಂದರು.

ಚಾಮರಾಜಪೇಟೆ ಮೈದಾನಕ್ಕೆ ಮೈಸೂರು ಚಾಮರಾಜೇಂದ್ರ ಒಡೆಯರ್ ಹೆಸರು ಇಡಬೇಕು ಎಂದು ಇದೆ ವೇಳೆ ಆಗ್ರಹಿಸಿದರು.

ಎಫ್ ಐ ಆರ್ ಹಾಕಬೇಕಿರುವುದು ಜಮೀರ್ ಮೇಲೆ. ರಾಷ್ಟ್ರ ಧ್ವಜ ಹಾರಿಸುವುದಕ್ಕೆ ಅನುಮತಿ ಬಗ್ಗೆ ಮಾತಾಡ್ತಾರೆ.ನಾವು ರಾಷ್ಟ್ರ ಧ್ವಜ ಹೋರಾಟಕ್ಕೆ ಐದು ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ. ರಾಷ್ಟ್ರ ಧ್ವಜದ ಬಗ್ಗೆ ಸಿದ್ದರಾಮಯ್ಯ ಪಾಠ ಮಾಡುತ್ತಾರೆ. ಅವರದ್ದೇ ಸರ್ಕಾರ ಇದ್ದಾಗ ರಾಷ್ಟ್ರ ಧ್ವಜ ಹಿಡಿದುಕೊಂಡು, ವಂದೇ ಮಾತರಂ ಗೀತೆ ಹಾಡುವಾಗ ಗೋಲಿಬಾರ್ ಮಾಡಿಸಿದರು. ಇದರಿಂದ ಎಂಟು ಜನ ಹತ್ಯೆ ಮಾಡಿದರು. ಯಾವ ಏಳು ಸಮುದ್ರಕ್ಕೆ ಹೋದರೂ ಕಾಂಗ್ರೆಸ್ ಪಾಪ ಹೋಗುವುದಿಲ್ಲ ಎಂದರು.

ಸಿದ್ದರಾಮಯ್ಯ ದತ್ತಪೀಠಕ್ಕೆ ಅನ್ಯಾಯ ಮಾಡಿದವರು
ಚುನಾವಣೆಗೆ ನಿಲ್ಲಲು ಕರ್ನಾಟಕದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರಿರಬೇಕು. ಹತ್ತು ಜನ ಸೂಚಿಸಿದರೆ ನಾಮಪತ್ರ ಸಲ್ಲಿಕೆ ಊರ್ಜಿತ ಆಗುತ್ತದೆ.ಗೆಲ್ಲಿಸೋದು ಜನರ ಕೈಯಲ್ಲಿದೆ.ನಾನು ಚಿಕ್ಕಮಗಳೂರು ಜಿಲ್ಲೆ ಮನೆ ಮಗ. ನನ್ನನ್ನ ನಮ್ಮ ಜನ ಗೆಲ್ಲಿಸ್ತಾರೆ.ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲಸ ಮಾಡಿದ್ದೇನೆ.ರಸ್ತೆ, ಆಸ್ಪತ್ರೆ, ಸ್ಟೇಡಿಯಂ ಎಲ್ಲಾ ಕೆಲಸ ಯಾರು ಅಂದರೆ ಸಿ.ಟಿ ರವಿ ಹೆಸರೇಳುತ್ತಾರೆ. ಸಿದ್ದರಾಮಯ್ಯ ಅಂದರೆ ದತ್ತಪೀಠಕ್ಕೆ ಅನ್ಯಾಯ ಮಾಡಿದವರು ಅಂತಿದೆ. ನಾನು ಹೇಳಿದೆ ಸಿದ್ದರಾಮಯ್ಯ ಅವರೇ ಅನ್ಯಾಯ ಮಾಡಬೇಡಿ. ಅದು ಹಿಂದೂ ಜನರದ್ದು ಅಂತ ಮನವಿ ಮಾಡಿದೆ ಆದರೂ ಕೇರ್ ಮಾಡಲಿಲ್ಲ.ಚಿಕ್ಕಮಗಳೂರು ಜನತೆ ಅವರು ಬಂದರೆ ಪಾಠ ಕಲಿಸುತ್ತಾರೆ. ಈಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ಕು ಸ್ಥಾನ ಗೆದ್ದಿದ್ದೆವು. ಈಗ ಐದಕ್ಕೆ ಐದೂ ಸ್ಥಾನ ಗೆಲ್ಲುತ್ತೇವೆ ಎಂದರು.

ನಾಯಕತ್ವ ಬದಲಾವಣೆ ದಿನಾ ಸುದ್ದಿಯಲ್ಲಿರಬೇಕು ಅಂತ ಅವರ ಕನಸು. ಹಾಗಾಗಿ ಈ ವಿಚಾರ ಕೆದಕುತ್ತಿದ್ದಾರೆ. ಹೀಗಾಗಿ ಇಲ್ಲಸಲ್ಲದ ವಿಚಾರ ಪ್ರಸ್ತಾಪ ಮಾಡ್ತಿದ್ದಾರೆ.ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಅವರೇ ನಿರ್ಧರಿಸಲಿದ್ದಾರೆ. ಯಡಿಯೂರಪ್ಪ ಬದಲಾವಣೆ ಸಂದರ್ಭದಲ್ಲಿ ಮುಂಚೆಯೇ ಚರ್ಚೆ ಆಗಿತ್ತು.ಅದನ್ನ ಅವರು ಸ್ಪಷ್ಟಪಡಿಸಿದ್ದರು.ಅನುಮಾನಂ ಪೆದ್ದ ರೋಗಮ್.ಡಿ.ಕೆ ಶಿವಕುಮಾರ್ ಇತ್ತೀಚೆಗೆ ಸಂದರ್ಶನದಲ್ಲಿ ಹೇಳಿದ್ದರು. ವೀರಪ್ಪ ಯೋಯ್ಲಿ ಹೇಗೆ ಸಿಎಂ ಆದರು ಅಂತ.ಕುತಂತ್ರ ರಾಜಕಾರಣ ಇರುವುದು ಕಾಂಗ್ರೆಸ್‌ನಲ್ಲಿ ಎಂದರು.
ವೀರೇಂದ್ರ ಪಾಟೀಲರು ದಾಖಲೆ ಸೀಟು ಪಡೆದು ಗೆಲುವು ಸಾಧಿಸುತ್ತಾರೆ. ಆದರೆ ಅವರ ಆರೋಗ್ಯ ವಿಚಾರಿಸಲು ಬಂದ ಗಾಂಧಿ ಏರ್ ಪೋರ್ಟ್ ಹೋಗಿ ಬದಲಾವಣೆ ಚೀಟಿ ಕೊಟ್ಟರು. ಎಲ್ಲರ ಸಮ್ಮತದ ಮೇಲೆ  ಬೊಮ್ಮಾಯಿ ಅವರಿಗೆ ಸಿಎಂ ಸ್ಥಾನ ಕೊಡಲಾಗಿದೆ. ನಮ್ಮ ಪಕ್ಷದ ಸಿಎಂ ಬದಲಾವಣೆ ವಿಚಾರ ಚರ್ಚೆ ಮಾಡಲು ಇವರು ಯಾವ ಸೀಮೆ ದಾಸಪ್ಪ.ಈ ವಿಚಾರ ಕಪೋಲ ಕಲ್ಪಿತ. ಮಾಧ್ಯಮಗಳಲ್ಲಿ ಬರುವ ಬದಲಾವಣೆ ವಿಚಾರ ಸತ್ಯ ಆಗಿದ್ದರೆ ಹತ್ತು ಬಾರಿ ಬದಲಾವಣೆ ಆಗಬೇಕಿತ್ತು ಎಂದರು.

ನಿತೀಶ್ ಅಭ್ಯಾಸವೇ ಆ ರೀತಿ

ಬಿಹಾರದ ಪ್ರಸ್ತುತ ವಿಚಾರ ಮಾತನಾಡಿ, ನಿತೀಶ್ ಕುಮಾರ್ ಅಭ್ಯಾಸವೇ ಆ ರೀತಿ.ತೇಜಸ್ವಿ ಯಾದವ್ ಪಲ್ಲಟ್ ಚಾಚಾ ಅಂದರು. ಈ ತರದ ಸ್ವಭಾವ ಇವತ್ತಿನದ್ದು ಅಲ್ಲ.1996 ರಿಂದ ಇದೇ ರೀತಿ ಬೆಳೆಸಿಕೊಂಡು ಬಂದವರು. ಎನ್ ಡಿಎ ಬಿಟ್ಟು ಮಹಾಘಟಬಂಧನ್ ಜತೆ ಹೋಗಿ ಸಿಎಂ‌ ಆದರು, ಆರ್ ಜೆಡಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಹೇಳಿ ಹೊರ ಬಂದರು. ಇದು ಅವರ ರಾಜಕೀಯ ರೋಗ ಅನ್ನಬಹುದು.
ಬಿಜೆಪಿ ಹೆಚ್ಚು ಸ್ಥಾನ ಗಳಿಸಿದರೂ ಅವರನ್ನ ಸಿಎಂ ಮಾಡಿದ್ದೆವು. ಇದು ಬಿಹಾರಕ್ಕೆ ಒಳ್ಳೆಯದಲ್ಲ.ಆರ್ ಜೆಡಿಯೇ ಅವರ ಕಾಲೆಳೆದು ಮನೆಗೆ ಕಳಿಸಬಹುದು ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.