ಸುಲಭವೇ ಗೆಲುವು? ಸಿದ್ದು ಮೆಟ್ಟಿ ನಿಲ್ಲಬೇಕಾಗಿದೆ ಸವಾಲುಗಳ ಸರಣಿ


Team Udayavani, Jan 10, 2023, 7:00 AM IST

ಸುಲಭವೇ ಗೆಲುವು? ಸಿದ್ದು ಮೆಟ್ಟಿ ನಿಲ್ಲಬೇಕಾಗಿದೆ ಸವಾಲುಗಳ ಸರಣಿ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಚುನಾವಣೆ ಸ್ಪರ್ಧೆ ಕೋಲಾರದಿಂದಲೇ ಎಂಬುದು ಕೊನೆಗೂ ಘೋಷಣೆಯಾಗಿದೆ. ಆದರೆ ಅವರ ಗೆಲುವಿನ ಹಾದಿ ಅಂದು
ಕೊಂಡಷ್ಟು ಸುಲಭವಲ್ಲ.

ಸಿದ್ದರಾಮಯ್ಯ ಸ್ಪರ್ಧೆಯ ತೀರ್ಮಾನದೊಂದಿಗೆ ಅಲ್ಲಿನ ರಾಜಕೀಯ ಚಿತ್ರಣ ಬದಲಾಗಲಿದ್ದು, ಮುಂದೆ ಎದುರಾಗುವ ಸವಾಲುಗಳು ಕಡಿಮೆಯೇನಲ್ಲ. ಮೇಲ್ನೋಟಕ್ಕೆ ಸದ್ಯ ಕಾಂಗ್ರೆಸ್‌- ಜೆಡಿಎಸ್‌-ಬಿಜೆಪಿ ತ್ರಿಕೋನ ಸ್ಪರ್ಧೆಯ ಲಕ್ಷಣ ಕಂಡುಬಂದರೂ ಮತದಾನ ಹತ್ತಿರ ಬಂದಾಗ ಬದಲಾಗ ಬಹುದಾದ ಸ್ವರೂಪ ಅಂತಿಮವಾಗಿ ಸೋಲು- ಗೆಲುವನ್ನು ನಿರ್ಧರಿಸಲಿದೆ. ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್‌ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡರೆ ಸವಾಲು ಕಠಿನವಾಗಬಹುದು.

ಸಿದ್ದರಾಮಯ್ಯ ಸ್ಪರ್ಧೆಯಿಂದ ಕೋಲಾರ-ಚಿಕ್ಕಬಳ್ಳಾಪುರ-ಬೆಂಗ ಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ಲಾಭವಾಗಬಹುದು. ಆದರೆ ಅವರ ಪಾಲಿಗೆ ಕೋಲಾರ ಮತ್ತೂಂದು “ಚಾಮುಂಡೇಶ್ವರಿ ಚುನಾವಣೆ’ ಚಕ್ರವ್ಯೂಹದಂತಾಗುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ.

ತಲೆನೋವು-ಸವಾಲು
ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದ ಬಣ ರಾಜಕೀಯ ಹಾಗೂ ಭಿನ್ನಮತ ಶಮನ ಸಿದ್ದರಾಮಯ್ಯ ಅವರಿಗೆ ಪ್ರಾರಂಭಿಕ ಅತೀ ದೊಡ್ಡ ತಲೆನೋವು. ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ಅವರ ನಿವಾಸಕ್ಕೆ ಖುದ್ದಾಗಿ ಭೇಟಿ ನೀಡಿದ್ದು, ಕೋಲಾರದ ಕಾರ್ಯ ಕ್ರಮದಲ್ಲಿ ಜತೆಯಾಗಿ ವೇದಿಕೆಯಲ್ಲಿ ಕಾಣಿಸಿಕೊಂಡಷ್ಟು ಸರಳವಾಗಿ ಈ ಬಣ ರಾಜಕೀಯ ಸಮಸ್ಯೆ ಬಗೆಹರಿಯುವುದಿಲ್ಲ. ಅಲ್ಲಿ ಸ್ಥಳೀಯ ಸಮಸ್ಯೆ ಬೇರೆಯೇ ಇದೆ.

ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌, ಶಾಸಕ ಶ್ರೀನಿವಾಸ ಗೌಡ, ಪರಿಷತ್‌ ಸದಸ್ಯರಾದ ನಸೀರ್‌ ಅಹಮದ್‌, ಅನಿಲ್‌ಕುಮಾರ್‌ ಒಂದು ಕಡೆಯಾದರೆ ಕೆ.ಎಚ್‌. ಮುನಿಯಪ್ಪ ಹಾಗೂ ಅವರ ಬೆಂಬಲಿಗರು ಮತ್ತೂಂದು ಕಡೆ. ಎರಡೂ ಬಣದ ಜತೆ ಸಮನ್ವಯ ಸಾಧಿಸಿ ಗೆಲುವಿನ ಹಾದಿ ಸುಗಮ ಗೊಳಿಸಿಕೊಳ್ಳಬೇಕಾದ ಸವಾಲು ಸಿದ್ದರಾಮಯ್ಯ ಮುಂದಿದೆ.

ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಮಾತುಗಳು ಇವೆ. ಅವರು ಅಲ್ಲಿ ಸ್ಪರ್ಧಿಸಿ ಅವರ ಬೆಂಬಲಿಗರು ಅಲ್ಲಿಗೆ ಸ್ಥಳಾಂತರವಾದರೆ ಮುನಿಯಪ್ಪ ಅನುಪಸ್ಥಿತಿ ಬೇರೆಯದೇ ಸಂದೇಶ ರವಾನಿಸಲಿದೆ.
ಕೋಲಾರದಲ್ಲಿ ಟಿಕೆಟ್‌ ಆಕಾಂಕ್ಷಿ ಗಳಾಗಿದ್ದ ವಿ.ಆರ್‌. ಸುದರ್ಶನ್‌, ಬ್ಯಾಲಹಳ್ಳಿ ಗೋವಿಂದ ಗೌಡ, ಊರುಬಾಗಿಲು ಶ್ರೀನಿವಾಸ್‌, ಮನೋಹರ್‌, ಎಲ್‌.ಎ. ಮಂಜುನಾಥ್‌ ಅವರು ಸಿದ್ದು ಗೆಲುವಿಗಾಗಿ ಎಷ್ಟರ ಮಟ್ಟಿಗೆ ಶ್ರಮಿಸು ತ್ತಾರೆ ಎಂಬುದೂ ನಿರ್ಣಾಯಕ.

ಕೈಹಿಡಿಯುವವರು ಯಾರು?
ಸಿದ್ದರಾಮಯ್ಯ ಮುಸ್ಲಿಂ, ಕುರುಬ, ಪರಿಶಿಷ್ಟ ಜಾತಿಯ ಮತಗಳ ಮೇಲೆ ಕಣ್ಣಿಟ್ಟು ಅಖಾಡ ಪ್ರವೇಶಿಸಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಸಿ.ಎಂ.ಆರ್‌. ಶ್ರೀನಾಥ್‌ ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು, ಸ್ಥಳೀಯವಾಗಿ ವರ್ಚಸ್ಸು ಹೊಂದಿದ್ದಾರೆ. ಸಿದ್ದರಾಮಯ್ಯ ಅವರ ಪೂರ್ವಾಶ್ರಮದ ಶಿಷ್ಯ ವರ್ತೂರು ಪ್ರಕಾಶ್‌ ಬಿಜೆಪಿ ಅಭ್ಯರ್ಥಿ. ಕುರುಬ ಸಮುದಾಯದ ಇವರು ನೆಚ್ಚಿಕೊಂಡಿರುವುದು ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ ಮತಗಳನ್ನು.

ಸಿದ್ದು ಕೋಲಾರ ಸ್ಪರ್ಧೆ ಊಹಿಸಿದ್ದ ಉದಯವಾಣಿ
ಕೋಲಾರ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು “ಉದಯವಾಣಿ’ ಅ. 28ರಂದು ಮೊದಲು ವಿಶೇಷ ವರದಿ ಮಾಡಿತ್ತು.

- ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.