D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಮತ್ತು ಕುಟುಂಬದವರು ಎಲ್ಲಿದ್ದರು?

Team Udayavani, Mar 28, 2024, 5:37 PM IST

1-a-DK-SHI

ರಾಮನಗರ: “ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್. ಅದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಆ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, “ನನಗೆ ಕುಮಾರಸ್ವಾಮಿ ಅವರ ವಿಚಾರ ಮಾತನಾಡಲು ಇಷ್ಟವಿಲ್ಲ. ಆದರೂ ಅವರಿಗೆ ಒಂದು ವಿಚಾರ ಕೇಳಬಯಸುತ್ತೇನೆ. ನೀವು ಈ ಜಿಲ್ಲೆಯ ಕ್ಷೇತ್ರವೊಂದರ ಶಾಸಕರು. ಕೋವಿಡ್ ಬಂದಾಗ ಈ ಭಾಗದ ಬಡವರ ರಕ್ಷಣೆಗೆ ನೀವು ಯಾರಾದರೂ ಒಬ್ಬರು ಮುಂದೆ ಬಂದರಾ? ಇಲ್ಲ.ಆದರೆ, ಡಿ.ಕೆ ಸುರೇಶ್ ಅವರು ಪ್ರತಿ ಕುಟುಂಬಕ್ಕೆ ಆಹಾರ ಪದಾರ್ಥ, ಮೆಡಿಕಲ್ ಕಿಟ್ ವಿತರಿಸಿದರು. ರೈತರಿಗೆ ಮಾರುಕಟ್ಟೆ ಇಲ್ಲದಾಗ, ರೈತರು ಬೆಳೆದ ತರಕಾರಿಗಳನ್ನು ಅವರ ಜಮೀನಿನಿಂದ ಖರೀದಿ ಮಾಡಿದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ತರಕಾರಿ ಖರೀದಿಸಿ ಅದನ್ನು ಜನಸಾಮಾನ್ಯರಿಗೆ ಉಚಿತವಾಗಿ ಹಂಚಿದ್ದಾರೆ. ಆ ಮೂಲಕ ರೈತರು ಹಾಗೂ ಬಡವರನ್ನು ರಕ್ಷಣೆ ಮಾಡಿದ್ದಾರೆ’ ಎಂದರು.

ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಅನಾಥ ಶವಗಳ ಅಂತ್ಯ ಸಂಸ್ಕಾರ ಮಾಡಿದರು. ಇನ್ನು ಕೋವಿಡ್ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ಇದ್ದಾಗ, ಸುರೇಶ್ ಅವರು ತಾವೇ ಖುದ್ದಾಗಿ ಪಿಪಿಇ ಕಿಟ್ ಧರಿಸಿ ಕೋವಿಡ್ ವಾರ್ಡ್ ಒಳಗೆ ಹೋಗಿ, ಸೋಂಕಿತರ ಸಮಸ್ಯೆ ಆಲಿಸಿದರು. ಅವರಿಗೆ ಧೈರ್ಯ ತುಂಬಿದರು. ಇದು ಮಾನವೀಯತೆ ಅಲ್ಲವೇ? ಇದು ಹೃದಯವಂತಿಕೆಯಲ್ಲವೇ? ಕುಮಾರಣ್ಣ ಆಗ ಎಲ್ಲಿ ಹೋಗಿದ್ದರು? ಅವರ ಅಭ್ಯರ್ಥಿ ಎಲ್ಲಿ ಹೋಗಿದ್ದರು? ಅವರ ಕುಟುಂಬ ಎಲ್ಲಿ ಹೋಗಿತ್ತು? ಎಂದು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿ ಡಾ. ಸಿ. ಎನ್. ಮಂಜುನಾಥ್ ಅವರ ಅಭ್ಯರ್ಥಿತನಕ್ಕೆ ಸವಾಲೆಸೆದರು.

ಟಾಟಾ ಬೈ ಬೈ ಹೇಳಿ

ದಳದ ಅಭ್ಯರ್ಥಿಯನ್ನು ಬಿಜೆಪಿ ಚಿಹ್ನೆಯಲ್ಲಿ ನಿಲ್ಲಿಸಿದ್ದು, ಅದರ ಬಗ್ಗೆ ನಾನು ಈಗ ಚರ್ಚೆ ಮಾಡುವುದಿಲ್ಲ. ದಳ ಈಗ ಎಲ್ಲಿದೆ? ಕುಮಾರಣ್ಣ ಇದೇ ಜಿಲ್ಲೆಯಿಂದ 2 ಬಾರಿ ಮುಖ್ಯಮಂತ್ರಿಯಾಗಿ ಈಗ ಈ ಜಿಲ್ಲೆ ಬಿಟ್ಟು ಮಂಡ್ಯಕ್ಕೆ ಹೋಗುತ್ತಿದ್ದಾರೆ. ನೀವು ಅವರಿಗೆ ಟಾಟಾ ಗುಡ್ ಬೈ ಹೇಳಬೇಕು. ನೀವು ಯಾರಿಗೆ ಅಧಿಕಾರ ಕೊಟ್ಟಿದ್ದೀರಿ ಅವರು ನಿಮ್ಮನ್ನು ನಂಬದೇ ಪಕ್ಕದ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದರು.

ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ಆ ಪಕ್ಷದ ನಾಯಕರಿಗೆ ನಂಬಿಕೆ ಇಲ್ಲ. ನಿಮ್ಮ ಪರವಾಗಿ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಅಧಿಕಾರ ನಮ್ಮ ಕೈಯಲ್ಲಿದೆ, ನಿಮ್ಮ ರಕ್ಷಣೆ ನಾವು ಮಾಡುತ್ತೇವೆ. ನೀವು ನಮ್ಮ ಜತೆ ಕೈಜೋಡಿಸಿ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿಹೋಯಿತು, ತೆನೆಯೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿಕೊಂಡಳು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು ಎಂದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.