ಭ್ರಷ್ಟಾಚಾರಿಯ ಅನುಭವ ಕೇಳುವುದೇ ಚೆಂದ: ಬಿಜೆಪಿ
Team Udayavani, Dec 2, 2022, 9:46 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ಧಾಳಿ ಮುಂದುವರಿಸಿರುವ ಬಿಜೆಪಿ, ತಾವು (ಡಿ.ಕೆ.ಶಿವಕುಮಾರ್) ಜೈಲಿಗೆ ಹೋಗಿದ್ದು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಅಲ್ಲ; ಅದೇ ಭ್ರಷ್ಟಾಚಾರದಿಂದ. ಭ್ರಷ್ಟಾಚಾರದ ಬಗ್ಗೆ ಖುದ್ದು ಭ್ರಷ್ಟಾಚಾರಿಯ ಅನುಭವ ಕೇಳುವುದೇ ಚೆಂದ ಎಂದು ವ್ಯಂಗ್ಯವಾಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ತಾನೇ ಚಾಣಕ್ಯ ಎಂಬ ಭ್ರಮೆಯಲ್ಲಿದ್ದ ಡಿ.ಕೆ.ಶಿವಕುಮಾರ್ ಅವರು 20 ಬ್ಯಾಂಕಿನಲ್ಲಿ 200 ಕೋಟಿ ರೂ. ಹೂತಿಟ್ಟಿದ್ದು, ನಿಮ್ಮ ಆದಾಯ 800 ಪಟ್ಟು ಹೆಚ್ಚಾಗಿರುವುದು ಭ್ರಷ್ಟಾಚಾರದಿಂದ ಎಂದು ಹೇಳಿದೆ.
ನಿಮ್ಮ ವಿರೋಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ, ಬೆಂಗಳೂರಿಗರ ಸೂರಿನ ಕನಸಿಗೆ ಕನ್ನ ಕೊರೆದು, 943 ಎಕರೆಯ ಅರ್ಕಾವತಿ ಡಿ-ನೋಟಿಫಿಕೇಷನ್ ಮಾಡಿ, ಪ್ರಕರಣ ತಮ್ಮ ಕಡೆ ತಿರುಗಿದಾಗ ಕಡತಗಳನ್ನೇ ಎಗರಿಸಿದ್ದು ಇದೇ ಸಿದ್ದರಾಮಯ್ಯನವರ ಭ್ರಷ್ಟ ಕೈಗಳೇ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ