ನ್ಯಾಯಾಧೀಶರ ಘನತೆ, ಗೌರವಕ್ಕೆ ಧಕ್ಕೆ ಸರಿಯಲ್ಲ


Team Udayavani, Jun 1, 2023, 5:25 AM IST

lok adalat

ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯ, ನ್ಯಾಯಾಧೀಶರಿಗೆ ವಿಶೇಷ ಘನತೆ, ಗೌರವವಿದೆ. ಭಾರತದಲ್ಲಂತೂ ನ್ಯಾಯಾಂಗಕ್ಕೆ ವಿಶೇಷವಾದ ಸ್ಥಾನಮಾನ ವನ್ನು ಸಂವಿಧಾನದಲ್ಲಿ ಕಲ್ಪಿಸಿಕೊಡಲಾಗಿದೆ. ನ್ಯಾಯಾಧೀಶರನ್ನು ಸಮಾಜದ ಇತರ ವ್ಯಕ್ತಿಗಳಂತೆ ಪರಿಗಣಿಸುವುದಾಗಲಿ, ಅವರನ್ನು ಬಹಿರಂಗವಾಗಿ ಟೀಕಿಸುವುದಾಗಲಿ ಸರಿಯಲ್ಲ. ಇತ್ತೀಚಿನ ವರ್ಷಗಳಲ್ಲಿ ನ್ಯಾಯಾಲಯಗಳು ನೀಡುವ ತೀರ್ಪುಗಳಿಗೆ ಆಕ್ಷೇಪ ಮತ್ತು ನ್ಯಾಯಾ ಧೀಶರ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕುವ ಹಾಗೂ ಅವರ ವಿರುದ್ಧ ವಾಗ್ಧಾಳಿ ನಡೆಸುವ ಪ್ರವೃತ್ತಿ ಸಮಾಜದಲ್ಲಿ ಹೆಚ್ಚುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ. ಈ ಹಿಂದಿನಿಂದಲೂ ಇಂತಹ ಕೆಲವೊಂದು ಘಟನೆ ನಡೆಯುತ್ತಿತ್ತಾದರೂ ಈಗ ಅದು ಒಂದಿಷ್ಟು ಅತಿರೇಕಕ್ಕೆ ತಲುಪಿದೆ. ಕೆಲವೊಂದು ಸಂದರ್ಭದಲ್ಲಿ ನ್ಯಾಯಾಲಯ ಇಂಥವರ ವಿರುದ್ಧ ಕಠಿನ ನಿಲುವು ತಳೆದು ಶಿಕ್ಷೆ ವಿಧಿಸಿದ ಉದಾಹರಣೆಯೂ ಇದೆ. ಆದರೆ ಇವು ನ್ಯಾಯಾಲಯ ಮತ್ತು ನ್ಯಾಯಾಧೀಶರ ವಿರುದ್ಧ ಬಹಿರಂಗ ವಾಗ್ಧಾಳಿ ನಡೆಸುವವರ ಬಾಯಿ ಮುಚ್ಚಿಸುವಲ್ಲಿ ಯಶ ಕಂಡಿಲ್ಲ.

ಬುಧವಾರದಂದು ಇಂತಹುದೇ ಒಂದು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌, ಮಧ್ಯಪ್ರದೇಶ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದು, ನ್ಯಾಯಾಧೀಶರ ಬಹಿರಂಗ ದೂಷಣೆ ಅಥವಾ ಅವರ ವಿರುದ್ಧ ಆರೋಪ ಹೊರಿಸುವುದು ಸರಿಯಲ್ಲ ಎಂದು ಕಟು ಮಾತುಗಳಲ್ಲಿ ಹೇಳಿದೆ. ಜಿಲ್ಲಾ ನ್ಯಾಯಾಧೀಶರದ ವಿರುದ್ಧ ವ್ಯಕ್ತಿಯೋರ್ವರು ಭ್ರಷ್ಟಾಚಾರ ಆರೋಪ ಹೊರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್‌ ಆ ವ್ಯಕ್ತಿಗೆ 10 ದಿನಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ರಜಾಕಾಲದ ನ್ಯಾಯಪೀಠ, ನ್ಯಾಯಾಧೀಶರ ವಿರುದ್ಧ ಆರೋಪ ಹೊರಿ ಸಲು ಅಥವಾ ದೂಷಣೆ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸ ಲಾಗುತ್ತಿರುವ ಬಗೆಗೆ ತೀವ್ರ ಅಸಮಾಧಾನ ಹೊರಹಾಕಿತು. ನ್ಯಾಯಾಂಗ ಕೇವಲ ಕಾರ್ಯಾಂಗದಿಂದ ಮಾತ್ರ ಸ್ವತಂತ್ರವಲ್ಲ. ಇದು ಎಲ್ಲರಿಗೂ ಅನ್ವ ಯಿಸುತ್ತದೆ. ಮಧ್ಯಪ್ರದೇಶ ಹೈಕೋರ್ಟ್‌ ನೀಡಿರುವ ತೀರ್ಪು ಎಲ್ಲರಿಗೂ ಪಾಠವಾಗಬೇಕು ಎಂದು ಹೇಳುವ ಮೂಲಕ ನ್ಯಾಯಾಂಗದ ಮೇಲೆ ಸವಾರಿ ಮಾಡಲೆತ್ನಿಸುತ್ತಿರುವವರಿಗೆ ಪರೋಕ್ಷವಾಗಿ ಚಾಟಿ ಬೀಸಿದೆ.

ಸುಪ್ರೀಂ ಕೋರ್ಟ್‌ನ ಈ ತೀರ್ಪು ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಯ ಸ್ವಾತಂತ್ರ್ಯದ ಕಾರ್ಯವ್ಯಾಪ್ತಿಯೇನು ಎಂಬುದನ್ನು ಮತ್ತೂಮ್ಮೆ ದೇಶದ ಜನತೆಗೆ ಜ್ಞಾಪಿಸಿದೆ. ಅಷ್ಟು ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರಿಗೂ ಪರೋಕ್ಷ ಎಚ್ಚರಿಕೆ ನೀಡಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ನೆಪದಲ್ಲಿ ಬೇಕಾಬಿಟ್ಟಿಯಾಗಿ ತಮ್ಮ ನಾಲಗೆಯನ್ನು ಹರಿಯಬಿಡುವವರಿಗೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮನಸ್ಸಿಗೆ ತೋಚಿದ್ದನ್ನು ಗೀಚುವ ಅಥವಾ ಹೇಳಿಕೆ ನೀಡುವವರಿಗೂ ಸುಪ್ರೀಂ ಕೋರ್ಟ್‌ನ ಈ ತೀರ್ಪು ಒಂದು ಕರೆಗಂಟೆಯಾಗಿದೆ. ನ್ಯಾಯಾಲಯ ಮತ್ತು ನ್ಯಾಯಾಧೀಶರನ್ನು ಸೀಮಿತಗೊಳಿಸಿ ನೀಡಿದ ತೀರ್ಪು ಇದಾಗಿ ದ್ದರೂ ಒಂದಿಷ್ಟು ಸೂಕ್ಷ್ಮವಾಗಿ ಅವಲೋಕಿಸಿದಲ್ಲಿ ಪ್ರತಿಯೋರ್ವರಿಗೂ ಇದು ಅನ್ವಯವಾಗುತ್ತದೆ. ನ್ಯಾಯಾಂಗ ಮತ್ತು ನ್ಯಾಯಾಧೀಶರಿಗೆ ಸಂವಿಧಾನ ನೀಡಿರುವ ಗೌರವವನ್ನು ಪ್ರತಿಯೋರ್ವರೂ ಎತ್ತಿ ಹಿಡಿಯುವ ಕಾರ್ಯ ಮಾಡಬೇಕೇ ವಿನಾ ಅದಕ್ಕೆ ಧಕ್ಕೆ ತರಬಾರದು. ದೇಶದ ಪ್ರತೀ ಪ್ರಜೆಯೂ ತನ್ನ ಕರ್ತವ್ಯವನ್ನು ಕಾನೂನು ವ್ಯಾಪ್ತಿಯಲ್ಲಿ ನಿರ್ವಹಿಸಿದ್ದೇ ಆದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಸದೃಢವಾಗಲು ಸಾಧ್ಯ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

Fraud: ಡ್ರಗ್ಸ್‌ ಕೇಸ್‌ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!

Fraud: ಡ್ರಗ್ಸ್‌ ಕೇಸ್‌ ಎಂದು ಬೆದರಿಸಿದ್ದಕ್ಕೆ 13 ಲಕ್ಷ ರೂ.ನಾಮ ಹಾಕಿಸಿಕೊಂಡ ಶ್ರೀನಿವಾಸ!

TDY-5

M.N. Anuchet: ವ್ಹೀಲಿಂಗ್‌ ಪುಂಡರಿಗೆ ರೌಡಿಗಳ ಮಾದರಿ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

asiad india

Asiad: ಏಷ್ಯಾಡ್‌ನಿಂದ ಭಾರತದ ಕ್ರೀಡಾಚಹರೆ ಬದಲಾಗುವ ಭರವಸೆ

krs

Cauvery ಅನ್ಯಾಯ: ಪರಿಹಾರ ಸೂತ್ರ ಬೇಕೇ ಬೇಕು

CANADA PM

Justin Trudeau: ಕೆನಡಾ ಪ್ರಧಾನಿಯ ಬಾಲಿಶ ವರ್ತನೆ

tdy-6

Women’s Reservation Bill: ತಡೆ ಇಲ್ಲದೇ ಮಹಿಳಾ ಮೀಸಲಾತಿ ಮಸೂದೆ ಪಾಸಾಗಲಿ

ಚರಿತ್ರೆ-ವರ್ತಮಾನ-ಭವಿಷ್ಯದ ಕೊಂಡಿ ಹಳೆ ಸಂಸತ್‌ ಭವನ

ಚರಿತ್ರೆ-ವರ್ತಮಾನ-ಭವಿಷ್ಯದ ಕೊಂಡಿ ಹಳೆ ಸಂಸತ್‌ ಭವನ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

Stray dog, cats: ಪಾಪದ ಹೂಗಳು: ಬೀದಿ ನಾಯಿ,ಬೆಕ್ಕುಗಳ ಕರುಣಕಥೆ 

Stray dog, cats: ಪಾಪದ ಹೂಗಳು: ಬೀದಿ ನಾಯಿ,ಬೆಕ್ಕುಗಳ ಕರುಣಕಥೆ 

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

tdy-7

Bangalore: ಆಂಟಿ ಎಂದ ಸೆಕ್ಯೂರಿಟಿಗೆ ಚಪ್ಪಲಿ ಏಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.