ಜಗದ್ಗುರು ಪೀಠಗಳ ಹಂಗಿಲ್ಲದೇ ಪಂಚಮಸಾಲಿ ಮಠಾಧೀಶರ ಒಕ್ಕೂಟ ರಚನೆಗೆ ನಿರ್ಧಾರ


Team Udayavani, Jul 5, 2021, 7:36 PM IST

ಜಗದ್ಗುರು ಪೀಠಗಳ ಹಂಗಿಲ್ಲದೇ ಪಂಚಮಸಾಲಿ ಮಠಾಧೀಶರ ಒಕ್ಕೂಟ ರಚನೆಗೆ ನಿರ್ಧಾರ

ವಿಜಯಪುರ: ಪಂಚಮಸಾಲಿ ಜಗದ್ಗುರು ಪೀಠಗಳ ಹಂಗಿಲ್ಲದೇ ಸಮುದಾಯದ ನೂರು ಮಠಗಳ ಮಠಾಧೀಶರ ಒಕ್ಕೂಟ ರಚಿಸಲು ಮನಗೂಳಿ ಹಿರೇಮಠದಲ್ಲಿ ಸಭೆ ಸೇರಿದ್ದ ಪಂಚಮಸಾಲಿ ಸ್ವಾಮಿಗಳು ನಿರ್ಧರಿಸಿದ್ದಾರೆ.

ಸೋಮವಾರ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಠದ ಅಭಿನವ ಸಂಗನಬಸವ ಶ್ರೀಗಳ ಅತಿಥ್ಯದಲ್ಲಿ ಸಭೆ ಸೇರಿದ್ದ ವಿವಿಧ ಪರಂಪರೆ ಹೊಂದಿರುವ ಪಂಚಮಸಾಲಿ ಮಠಾಧೀಶರ ಸಭೆಯಲ್ಲಿ ಸಮಾಜದ ಎಲ್ಲ ಸ್ವಾಮಿಗಳನ್ನು ಒಳಗೊಂಡ ಒಕ್ಕೂಟ ರಚನೆಗೆ ನಿರ್ಧರಿಸಲಾಗಿದೆ.

ಮಠಾಧೀಶರ ಒಕ್ಕೂಟ ರಚನೆಗಾಗಿ ಈಗಾಗಲೇ ಎರಡು ಸಭೆಗಳನ್ನು ನಡೆಸಿದ್ದು, ಮನಗೂಳಿ‌ಯಲ್ಲಿ ಮೂರನೇ ಸಭೆ ನಡೆಸಲಾಗಿದೆ. ಸದರಿ ಸಭೆಯಲ್ಲಿ ಜಗದ್ಗುರು ಪೀಠಗಳ ಹಂಗಿಲ್ಲದೇ ಹಾಗೂ ಅಧ್ಯಕ್ಷ ಸಂಚಾಲಕ ಎಂಬ ಪದಾಧಿಕಾರಿಗಳು ಇಲ್ಲದೇ ಸಾಮೂಹಿಕ ನಾಯಕತ್ವದಲ್ಲಿ ಮಠಾಧೀಶರ ಒಕ್ಕೂಟ ರಚಿಸಲು ನಿರ್ಧರಿಲಾಗಿದೆ.

ಪಂಚಮಸಾಲಿ ಹರಿಹರ, ಕೂಡಲಸಂಗಮ ಪೀಠಗಳು ದೊಡ್ಡ ಕುರ್ಚಿ ವ್ಯಾಮೋಹದಲ್ಲಿ ಸಮಾಜದ ಇತರೆ ಮಠಾಧೀಶರನ್ನು ಅವಮಾನಿಸುವ ಕೆಲಸ ಮಾಡುತ್ತಿವೆ. ರಾಜಕೀಯ ಪ್ರೇರಿತ ಕಾರ್ಯವೈಖರಿ ಜಗದ್ಗುರುಗಳು ಪೀಠಗಳ ಸ್ಥಾಪನೆಯ ಆಶ್ರಯ ಈಡೇರುವಲ್ಲಿ ವಿಫಲವಾಗಿವೆ. ಹೀಗಾಗಿ ರಾಜಕೀಯ ರಹಿತವಾದ ಹಾಗೂ ಸನಾಜಮುಖಿ ಕಾರ್ಯಗಳನ್ನು ಮಾಡಲು ಮಠಾಧೀಶರ ಒಕ್ಕೂಟ ರಚಿಸಿದ್ದೇವೆ. ಶೀಘ್ರವೇ ಒಕ್ಕೂಟದ ಕಾರ್ಯ- ವಿಧಾನಗಳ ಕುರಿತು ಅಂತಿಮ ರೂಪುರೇಷೆ ನಿರ್ಧಾರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ :ಯಡಿಯೂರಪ್ಪ ಜೈಲಿಗೆ ಹೋಗಿದ್ದು ಅವರ ಪುತ್ರ ವಿಜಯೇಂದ್ರನಿಂದ : ಎಚ್. ವಿಶ್ವನಾಥ್

ಪಂಚಮಸಾಲಿ ಮಠಾಧೀಶರ ಒಕ್ಕೂಟ ರಚನೆ ಹಾಲಿ ಇರುವ ಎರಡೂ ಪೀಠಗಳಿಗೆ ವಿರೋಧವೂ ಇಲ್ಲ, ಪರ್ಯಾವೂ ಅಲ್ಲ. ಮೂರನೇ ಪೀಠ‌ ಕಟ್ಡುವ ಉದ್ದೇಶ ಇಲ್ಲವೇ ಇಲ್ಲ. ಬದಲಾಗಿ ಸಮಾಜದ ಜನರಲ್ಲಿ ಧಾರ್ಮಿಕ ಸಂಸ್ಕಾರ ನೀಡುವ, ತಾಲೂಕ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಪ್ರಸಾದ ನಿಲಯ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಈ ಕುರಿತೇ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅಭಿನವ ಸಂಗನಬಸವ ಶ್ರೀಗಳು ತಿಳಿಸಿದ್ದಾರೆ.

ಮಠಾಧೀಶರ ಸದರಿ ಒಕ್ಕೂಟಕ್ಕೆ ಜಗದ್ಗುರು ಪೀಠಗಳ ಸ್ವಾಮಿಗಳನ್ನು ನಾವು ಆಹ್ವಾನಿಸಿಲ್ಲ. ಅವರ ಕಾರ್ಯಕ್ರಮಗಳಿಗೆ ಆಹ್ವಾನ ಇಲ್ಲದಿದ್ದರೂ ಸಮಾಜದ ಕೆಲಸವೆಂದು ನಾವೇ ಹೋಗುತ್ತೇವೆ. ಮೀಸಲು ಹೋರಾಟದ ಸಂದರ್ಭದಲ್ಲೂ ನಾವಾಗೇ ಹೋಗಿ ಪಾಲ್ಗೊಂಡಿದ್ದೇವೆ. ಮಠಾಧೀಶರ ಒಕ್ಕೂಟಕ್ಕೂ ಪೀಠಗಳ ಸ್ವಾಮಿಗಳು ಬಂದರೆ ಮುಕ್ತವಾಗಿ ಸ್ವಾಗತಿಸುತ್ತೇವೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ನಿಲೋಗಿ ಮಠದ ಸಿದ್ಧಲಿಂಗ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.

ಸದರಿ ಒಕ್ಕೂಟಕ್ಕೆ ಸೇರಲು 65 ಮಠಾಧೀಶರು ಸಮ್ಮತಿಸಿದ್ದು, ಮನಗೂಳಿ ಸಭೆಯಲ್ಲಿ 42 ಮಠಗಳ ಸ್ವಾಮಿಗಳು ಪಾಲ್ಗೊಂಡಿದ್ದರು ಎಂದು ಉಭಯ ಶ್ರೀಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.