ಜಹಾಂಗೀರ್ಪುರಿ ಹಿಂಸಾಚಾರ: ಗುಂಡಿನ ದಾಳಿ ನಡೆಸಿದ ಸೋನು ಚಿಕ್ನಾ ಅರೆಸ್ಟ್
ಬಾಟಲಿಗಳ ಸರಬರಾಜು ಮಾಡಿದವನೂ ಅರೆಸ್ಟ್
Team Udayavani, Apr 18, 2022, 9:19 PM IST
Image : ANI
ನವದೆಹಲಿ: ಜಹಾಂಗೀರ್ಪುರಿ ಹಿಂಸಾಚಾರ ಮತ್ತು ಕೋಮು ಘರ್ಷಣೆಯ ತನಿಖೆಯಲ್ಲಿ ಮತ್ತೊಂದು ಪ್ರಮುಖ ಪ್ರಗತಿಯಲ್ಲಿ ದೆಹಲಿ ಪೊಲೀಸರು ಸೋನು ಚಿಕ್ನಾ ಅಲಿಯಾಸ್ ಇಮಾಮ್ ಅಲಿಯಾಸ್ ಯೂನಸ್ನನ್ನು ಸೋಮವಾರ ಬಂಧಿಸಿದ್ದಾರೆ
ಪೊಲೀಸರ ಉಲ್ಲೇಖಿಸಿ ಎಎನ್ಐ ವರದಿಯಂತೆ 28 ವರ್ಷದ ಸೋನು ಚಿಕ್ನಾ ಉತ್ತರ ದೆಹಲಿಯ ಜಹಾಂಗೀರ್ಪುರಿಯಲ್ಲಿ ಹನುಮ ಜಯಂತಿಯ ಸಂದರ್ಭದಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಯಾಗಿದ್ದಾನೆ.
ದೆಹಲಿ ಪೊಲೀಸರ ಪ್ರಕಾರ, ಸೋನು ಅಲಿಯಾಸ್ ಇಮಾಮ್ ಅಲಿಯಾಸ್ ಯೂನಸ್ ಎಂದು ಗುರುತಿಸಲಾದ 28 ವರ್ಷದ ವ್ಯಕ್ತಿ ನೀಲಿ ಕುರ್ತಾದಲ್ಲಿ ಏಪ್ರಿಲ್ 16 ರಂದು ಜಹಾಂಗೀರ್ಪುರಿ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ ಗುಂಡು ಹಾರಿಸುತ್ತಿರುವುದನ್ನು ಸಾಮಾಜಿಕ ಮಾಧ್ಯಮಗಳ ವಿಡಿಯೋ ತುಣುಕಿನಲ್ಲಿ ತೋರಿಸಲಾಗಿದೆ.
ಪೊಲೀಸರ ಪ್ರಕಾರ, ಈತನ ಹುಡುಕಾಟಕ್ಕಾಗಿ ಮತ್ತು ಕುಟುಂಬ ಸದಸ್ಯರ ಪರೀಕ್ಷೆಗಾಗಿ ತಂಡವೊಂದು ಸಿಡಿ ಪಾರ್ಕ್ ರಸ್ತೆಯಲ್ಲಿರುವ ಅವರ ಮನೆಗೆ ಹೋಗಿತ್ತು.
ಬಾಟಲಿಗಳ ಸರಬರಾಜು ಮಾಡಿದವನೂ ಅರೆಸ್ಟ್
ಈ ನಡುವೆ ಸೋಮವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, 36 ವರ್ಷದ ಆರೋಪಿ ಶೇಖ್ ಹಮೀದ್ ಸ್ಕ್ರ್ಯಾಪ್ ಡೀಲರ್ ಆಗಿದ್ದು, ಜಹಾಂಗೀರ್ಪುರಿ ಹಿಂಸಾಚಾರದ ಸಂದರ್ಭದಲ್ಲಿ ಎಸೆಯಲು ಬಳಸಿದ ಬಾಟಲಿಗಳನ್ನು ತಾನು ಸರಬರಾಜು ಮಾಡಿದ್ದನ್ನು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾನೆ.
ಇದನ್ನೂ ಓದಿ: ಹಿಂದೂ ದಂಪತಿಗಳು ತಲಾ 4 ಮಕ್ಕಳನ್ನು ಹುಟ್ಟಿಸಿ : ಸಾಧ್ವಿ ರಿತಂಬರಾ
ಇಲ್ಲಿಯವರೆಗೆ, ದೆಹಲಿ ಪೊಲೀಸರು ಘರ್ಷಣೆಯ ಹಿಂದಿನ “ಮುಖ್ಯ ಸಂಚುಕೋರರು” ಮತ್ತು ಸಬ್ ಇನ್ಸ್ಪೆಕ್ಟರ್ಗೆ ಗುಂಡು ಹಾರಿಸಿದ ವ್ಯಕ್ತಿ ಸೇರಿದಂತೆ 22 ಜನರನ್ನು ಬಂಧಿಸಿದ್ದಾರೆ.
ಹಿಂಸಾಚಾರ ಕುರಿತು ಕ್ರೈಂ ಬ್ರ್ಯಾಂಚ್ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗಾಗಿ 14 ತಂಡಗಳನ್ನು ರಚಿಸಲಾಗಿದೆ. ಇಂದು ಘಟನೆ ನಡೆದ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ನಾಲ್ಕು ತಂಡ ಭೇಟಿ ನೀಡಿದ್ದು, ಸ್ಯಾಂಪಲ್ಸ್ ಸಂಗ್ರಹಿಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಮಾದರಿಯಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ