ಜಹಾಂಗೀರ್ ಪುರಿ ಕಾರ್ಯಾಚರಣೆ; 2 ವಾರ ಯಥಾಸ್ಥಿತಿ- ಸುಪ್ರೀಂನಲ್ಲಿ ವಾದ, ಪ್ರತಿವಾದ ಹೇಗಿತ್ತು?

ಬುಲ್ಡೋಜರ್ ಕಾರ್ಯಾಚರಣೆಯಲ್ಲಿ ಹಲವಾರು ಮನೆಗಳು, ಅಂಗಡಿಗಳು, ವಾಣಿಜ್ಯ ಕಟ್ಟಡಗಳು ನೆಲಸಮಗೊಂಡಿದ್ದವು.

Team Udayavani, Apr 21, 2022, 12:55 PM IST

ಜಹಾಂಗೀರ್ ಪುರಿ ಕಾರ್ಯಾಚರಣೆ; 2 ವಾರ ಯಥಾಸ್ಥಿತಿ- ಸುಪ್ರೀಂನಲ್ಲಿ ವಾದ, ಪ್ರತಿವಾದ ಹೇಗಿತ್ತು?

ನವದೆಹಲಿ: ಉತ್ತರ ದೆಹಲಿ ಮಹಾನಗರ ಪಾಲಿಗೆ(ಎನ್ ಡಿಎಂಸಿ) ಜಹಾಂಗೀರ್ ಪುರಿಯಲ್ಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ವಿರೋಧಿಸಿ ಜಮೀಯತ್ ಉಲೇಮಾ ಎ ಹಿಂದ್ ಸಂಘಟನೆ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಎರಡು ವಾರಗಳ ಕಾಲ ಕಾರ್ಯಾಚರಣೆಗೆ ತಡೆ ನೀಡಿರುವ ಆದೇಶದ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ ನ ಜಸ್ಟೀಸ್ ಎಲ್ ನಾಗೇಶ್ವರ ರಾವ್ ಮತ್ತು ಜಸ್ಸೀಸ್ ಬಿಆರ್ ಗವಾಯಿ ಗುರುವಾರ(ಏ.21)ಆದೇಶ ನೀಡಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ನನ್ನನ್ನು ಜೈಲಿಗೆ ಕಳುಹಿಸಲು ಪ್ರಯತ್ನ ಮಾಡಿದ್ದರು : ಹೆಚ್ ಡಿಕೆ

ದೆಹಲಿಯ ಜಹಾಂಗೀರ್ ಪುರಿಯಲ್ಲಿ ಏ.16ರಂದು ಹನುಮ ಜಯಂತಿ ವೇಳೆ ಹಿಂಸಾಚಾರ ನಡೆದ ಬೆನ್ನಲ್ಲೇ ಉತ್ತರ ದೆಹಲಿ ಮಹಾನಗರ ಪಾಲಿಕೆ ಜಹಾಂಗೀರ್ ಪುರಿಯಲ್ಲಿರುವ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಬುಧವಾರ ಆರಂಭಿಸಿತ್ತು. ಬುಲ್ಡೋಜರ್ ಕಾರ್ಯಾಚರಣೆಯಲ್ಲಿ ಹಲವಾರು ಮನೆಗಳು, ಅಂಗಡಿಗಳು, ವಾಣಿಜ್ಯ ಕಟ್ಟಡಗಳು ನೆಲಸಮಗೊಂಡಿದ್ದವು.

ಮಧ್ಯಾಹ್ನದ ಹೊತ್ತಿಗೆ ಈ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಎನ್ ಡಿಎಂಸಿ ಕಾರ್ಯಾಚರಣೆಗೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿ, ಗುರುವಾರ ವಿಚಾರಣೆ ಮುಂದುವರಿಸುವುದಾಗಿ ಮುಖ್ಯನ್ಯಾಯಮೂರ್ತಿ ಎನ್ .ವಿ.ರಮಣ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿತ್ತು.

ಕಾರ್ಯಾಚರಣೆ ವಿರೋಧಿಸಿ ಜಮೀಯತ್ ಉಲೇಮಾ ಎ ಹಿಂದ್ ಎರಡು ಅರ್ಜಿಗಳನ್ನು ಸಲ್ಲಿಸಿದ್ದು, ಅದರಲ್ಲಿ ಕೇವಲ ಒಂದು ಸಮುದಾಯವನ್ನು ಗುರಿಯಾಗಿರಿಸಿ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಆರೋಪ ಸಮರ್ಪಕವಲ್ಲ ಎಂದು ಅರ್ಜಿ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ.

ತುಷಾರ್ ಅವರ ವಾದಕ್ಕೆ ಪ್ರತಿವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದವೆ, ಈ ವಿಚಾರ ಸಾಂವಿಧಾನಿಕ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಪ್ರಶ್ನೆಯನ್ನು ಎತ್ತುತ್ತದೆ. ಇದು ಕೇವಲ ಜಹಾಂಗೀರ್ ಪುರಿಗೆ ಮಾತ್ರ ಸಂಬಂಧಿಸಿದ ಸಮಸ್ಯೆಯಲ್ಲ. ಒಂದು ವೇಳೆ ಇದಕ್ಕೆ ಅನುಮತಿ ನೀಡಿದರೆ, ಯಾವುದೇ ಕಾನೂನು ಸುವ್ಯವಸ್ಥೆಗೆ ಜಾಗವಿಲ್ಲದಂತಾಗಲಿದೆ. ಪೊಲೀಸರು ಮತ್ತು ನಾಗರಿಕ ಅಧಿಕಾರಿಗಳು ಸಂವಿಧಾನಕ್ಕೆ ಬದ್ಧರಾಗಿರಬೇಕೇ ಹೊರತು ಬಿಜೆಪಿ ಮುಖಂಡರು ಬರೆದ ಪತ್ರಕ್ಕಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ ಎಂದು ವಾದಿಸಿರುವುದಾಗಿ ವರದಿ ತಿಳಿಸಿದೆ.

ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್ ಡಿಎಂಸಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮುಂದೂಡಿದೆ.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.