ಜಮ್ಮು-ಕಾಶ್ಮೀರ: ಜೈಶ್ ಉಗ್ರನ ಬಂಧನ, ಗ್ರೆನೇಡ್, ನಗದು ವಶಕ್ಕೆ
26/11 ಮಾದರಿಯ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರರ ಸಂಚನ್ನು ವಿಫಲಗೊಳಿಸಿದ್ದ ಭದ್ರತಾ ಪಡೆ
Team Udayavani, Nov 30, 2020, 6:23 PM IST
ಶ್ರೀನಗರ್: ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಸೋಮವಾರ(ನವೆಂಬರ್ 30, 2020) ಕುಪ್ವಾರಾದಲ್ಲಿ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಜೈಶ್ ಉಗ್ರನಿಂದ ಗ್ರೆನೇಡ್ ಹಾಗೂ 3.50 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ನವೆಂಬರ್ 19ರಂದು ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ನಗ್ರೋಟಾದಲ್ಲಿ ನಡೆಸಿದ್ದ ಎನ್ ಕೌಂಟರ್ ಗೆ ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ನಾಲ್ವರು ಉಗ್ರರು ಸಾವನ್ನಪ್ಪಿದ್ದರು. ಅಂದು 11 ಎಕೆ 47 ರೈಫಲ್ಸ್, 3 ಪಿಸ್ತೂಲ್, 29 ಗ್ರೆನೇಡ್ಸ್ ಹಾಗೂ ಇತರ ವಸ್ತುಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿತ್ತು ಎಂದು ವರದಿ ತಿಳಿಸಿದೆ.
ಈ ಘಟನೆಯ ನಂತರ ಜಮ್ಮು-ಕಾಶ್ಮೀರದಲ್ಲಿ 26/11 ಮಾದರಿಯ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರರ ಸಂಚನ್ನು ವಿಫಲಗೊಳಿಸಿದ್ದ ಭದ್ರತಾ ಪಡೆಯ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದರು.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸಿದ್ದ 370ನೇ ಕಲಂ ಅನ್ನು ರದ್ದುಪಡಿಸಿದ್ದ ನಂತರ ಮೊದಲ ಬಾರಿಗೆ ಡಿಡಿಸಿ (ಜಿಲ್ಲಾ ಅಭಿವೃದ್ಧಿ ಮಂಡಳಿ) ಚುನಾವಣೆ ನಡೆಸಲಾಗಿತ್ತು. ನವೆಂಬರ್ 19ರಿಂದ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 22ರಂದು ಮತಎಣಿಕೆ ನಡೆಯಲಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೂತನ ವಿಮಾನ ಖರೀದಿಸ್ತೀರಿ, ನೇತಾಜಿ ಸ್ಮಾರಕ ಯಾಕೆ ನಿರ್ಮಿಸಿಲ್ಲ: ಕೇಂದ್ರಕ್ಕೆ ಮಮತಾ
ಜೈಲುಪಾಲಾದ ಲಾಲು ಆರೋಗ್ಯ ಸ್ಥಿತಿ ಗಂಭೀರ; ದೆಹಲಿ ಏಮ್ಸ್ ಗೆ ಸ್ಥಳಾಂತರ ಸಾಧ್ಯತೆ
3ನೇ ಅವಧಿಗೆ ಸ್ಪರ್ಧೆ ಇಲ್ಲ; ಮೋದಿ ಬದಲು ಮುಂದಿನ ಪ್ರಧಾನಿ ಹುದ್ದೆಗೆ ಯಾರು ಅರ್ಹ?ಸಮೀಕ್ಷೆ
ಗಣರಾಜ್ಯೋತ್ಸವ ಪರೇಡ್ ಪೂರ್ವಾಭ್ಯಾಸ, ಬದಲಿ ಮಾರ್ಗ ಕಂಡುಕೊಳ್ಳಿ : ಸಂಚಾರಿ ಪೋಲಿಸರು
4ಕೆಜಿ ಮರಳು ಕೊಟ್ಟು ಚಿನ್ನದ ವ್ಯಾಪಾರಿಗೇ 50 ಲಕ್ಷ ರೂಪಾಯಿ ವಂಚಿಸಿದ! ಏನಿದು ಘಟನೆ