
ಅತ್ಯಾಕರ್ಷಕ ಜಂಬೂ ಸವಾರಿ: ನಾಡದೇವತೆಗೆ ಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ
Team Udayavani, Oct 5, 2022, 5:56 PM IST

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಬುಧವಾರ ಕೋಟ್ಯಂತರ ಜನರ ಕಣ್ಣಿಗೆ ಸಂಭ್ರಮವಾಗಿ ಕಂಡು ಬಂದಿತು. ಸಾಂಸ್ಕೃತಿಕ ನಗರಿಯಲ್ಲಿ ವಿಜಯ ದಶಮಿಯಂದು ನಡೆದ ವೈಭವಯುತ ಸಂಭ್ರಮದಲ್ಲಿ ಅಭಿಮನ್ಯು ಹೊತ್ತಿದ್ದ ಅಂಬಾರಿಯಲ್ಲಿದ್ದ ನಾಡದೇವತೆ ಚಾಮುಂಡೇಶ್ವರಿಯ ವಿಗ್ರಹಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಗಣ್ಯರು ಪುಷ್ಪಾರ್ಚನೆ ಗೈದರು.
ಸಂಜೆ 5.18ರ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜವಂಶಸ್ಥ ಯದುವೀರ್, ಸಚಿವರಾದ ಸುನಿಲ್ ಕುಮಾರ್, ಎಸ್ . ಟಿ. ಸೋಮಶೇಖರ್ ಸೇರಿ 7 ಮಂದಿ ಗಣ್ಯರು ಚಿನ್ನದಂಬಾರಿಗೆ ಪುಷ್ಪಾರ್ಚನೆ ಮಾಡಿದರು.
ಇದನ್ನೂ ಓದಿ : ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ
ಈ ಬಾರಿ ಜಂಬೂಸವಾರಿ ತಡವಾಗಿ ಆರಂಭವಾದರಿಂದ ಬನ್ನಿಮಂಟಪ ತಲುಪುವುದು ತಡವಾಗಲಿದೆ.
2019ರ ಬಳಿಕ ಈ ಬಾರಿ ಅರಮನೆಯಿಂದ ಬನ್ನಿ ಮಂಟಪದ ಮೈದಾನದವರೆಗೆ ಮೆರವಣಿಗೆ ಸಾಗುತ್ತಿದೆ. ಅಭಿಮನ್ಯು ಜತೆಗೆ 13 ಆನೆಗಳು, ಅಶ್ವರೋಹಿಪಡೆಗಳು, ಆನೆಗಾಡಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.
ಮೆರವಣಿಗೆಯಲ್ಲಿ ರಾಜ್ಯ 31 ಜಿಪಂ, ರಾಜ್ಯಮಟ್ಟದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು, ಸ್ತಬ್ಧಚಿತ್ರ ಉಪಸಮಿತಿ ಸೇರಿ 43 ಸ್ತಬ್ಧಚಿತ್ರಗಳು ಸೇರಿ 100ಕ್ಕೂ ಜಾನಪದ ತಂಡಗಳು ಭಾಗವಹಿಸಿ ಕಣ್ಮನ ಸೆಳೆದವು.
ಲಕ್ಷಾಂತರ ಜನರು ಮೈಸೂರಿನ ಸಂಭ್ರಮದಲ್ಲಿ ಭಾಗಿಯಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿ ಶಾರುಖ್ ಸಿನಿಮಾ

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಬಾಗಲಕೋಟೆ: ತೋಟಗಾರಿಕೆ ವಿವಿಗೆ ನೀರಿನ ಸ್ವಾವಲಂಬನೆ

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ