ಜಮ್ಮು-ಕಾಶ್ಮೀರ: ಸಿಲಿಂಡರ್‌ ದಾಸ್ತಾನು ಆದೇಶ


Team Udayavani, Jun 29, 2020, 6:10 AM IST

ಜಮ್ಮು-ಕಾಶ್ಮೀರ: ಸಿಲಿಂಡರ್‌ ದಾಸ್ತಾನು ಆದೇಶ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ 2 ತಿಂಗಳಿಗೆ ಆಗುವಷ್ಟು ಎಲ್‌ಪಿಜಿ ಸಿಲಿಂಡರ್‌ಗಳನ್ನು ದಾಸ್ತಾನು ಇರಿಸಿಕೊಳ್ಳಿ ಎಂದು ಅಲ್ಲಿನ ಸರಕಾರ ಆದೇಶ ನೀಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಭಾರತ-ಚೀನ ನಡುವಿನ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿ ಈ ಆದೇಶ ನೀಡಿರಬಹುದೇ ಎಂಬ ಚರ್ಚೆ ಆರಂಭವಾಗಿದೆ. ಮತ್ತೂಂದು ಆದೇಶದಲ್ಲಿ ಭದ್ರತಾ
ಪಡೆಗಳಿಗಾಗಿ ಶಾಲಾ ಕಟ್ಟಡಗಳನ್ನು ಖಾಲಿ ಮಾಡಿಸುವಂತೆಯೂ ಸೂಚಿಸಲಾಗಿದೆ. ಈ ಬೆಳವಣಿಗೆಗಳು ಸ್ಥಳೀಯರಲ್ಲಿ ಭಯ ಮೂಡಿಸಿವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

2 ತಿಂಗಳುಗಳಿಗೆ ಸಾಲುವಷ್ಟು ಎಲ್‌ಪಿಜಿ ಸಿಲಿಂಡರ್‌ಗಳನ್ನು ದಾಸ್ತಾನು ಮಾಡಿಕೊಳ್ಳಿ ಎಂದು ಅಲ್ಲಿನ ಸರಕಾರ ತೈಲ ಸರಬರಾಜು ಕಂಪೆನಿಗಳಿಗೆ ಸೂಚಿಸಿದೆ. ಈ ಸಂಬಂಧ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಜೂ. 27ರಂದು ಆದೇಶ ಹೊರಡಿಸಿದೆ. ಈ ಆದೇಶವನ್ನು ಅತ್ಯಂತ ತುರ್ತು ಎಂಬುದಾಗಿ ಪರಿಗಣಿಸುವಂತೆಯೂ ಸೂಚಿಸಲಾಗಿದೆ. ಇಂತಹ ಆದೇಶ ಚಳಿಗಾಲದಲ್ಲಿ ಸಾಮಾನ್ಯ; ಆದರೆ ಭಾರತ-ಚೀನ ಗಡಿ ಬಿಕ್ಕಟ್ಟು ಉಲ್ಬಣಿಸಿರುವ ಈ ಸಮಯದಲ್ಲಿ ಹೊರಬಿದ್ದಿರುವುದು ವಿಶೇಷ.

ಶಿಕ್ಷಣ ಸಂಸ್ಥೆ ಕಟ್ಟಡ ಒದಗಿಸಲು ಆದೇಶ
ಇದೇವೇಳೆ ಕಣಿವೆಯ ಗಂಡೇರ್ಬಾಲ್‌ನ ಸೀನಿಯರ್‌ ಸೂಪರಿಂಟೆಂಡೆಂಟ್‌ ಆಫ್ ಪೊಲೀಸ್‌ ಹೊರಡಿಸಿರುವ ಇನ್ನೊಂದು ಆದೇಶದಲ್ಲಿ ಅಲ್ಲಿ 16 ಶೈಕ್ಷಣಿಕ ಸಂಸ್ಥೆಗಳ ಕಟ್ಟಡಗಳನ್ನು ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್‌ ಪಡೆಗಳ ವಾಸ್ತವ್ಯಕ್ಕಾಗಿ ಬಿಟ್ಟುಕೊಡುವಂತೆ ಸೂಚಿಸಲಾಗಿದೆ.

ಈ ಎರಡೂ ಆದೇಶಗಳಿಗೂ ಅಧಿಕೃತವಾಗಿ ಮುಂಗಾರು ಕಾಲದ ಭೂಕುಸಿತ ಮತ್ತು ಅಮರನಾಥ ಯಾತ್ರಿಗಳಿಗೆ ಭದ್ರತೆ ಒದಗಿಸುವ ಉದ್ದೇಶಗಳನ್ನು ಕಾರಣಗಳನ್ನಾಗಿ ಕೊಡಲಾಗಿದೆ. ಆದರೆ ಭಾರತ-ಚೀನ ಗಡಿ ಬಿಕ್ಕಟ್ಟು ಉಲ್ಬಣಿಸಿರುವುದು ನೈಜ ಕಾರಣವೇ ಎಂಬ ಶಂಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.