ಬಳ್ಳಾರಿಯಲ್ಲಿ ಕುಟುಂಬ ಸದಸ್ಯರೊಂದಿಗೆ ವರಮಹಾಲಕ್ಷ್ಮೀ ಪೂಜೆ ಆಚರಿಸಿದ ಜನಾರ್ದನ ರೆಡ್ಡಿ
Team Udayavani, Aug 20, 2021, 9:42 PM IST
ಬಳ್ಳಾರಿ : ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿಗೆ ಬಂದಿದ್ದಾರೆ ಎನ್ನಲಾಗಿದೆ. ಮತ್ತೂಂದೆಡೆ ಅವರು ಬಂದಿಲ್ಲ ಎಂಬ ಸುದ್ದಿಯೂ ಹರಡಿತ್ತು. ಆದರೆ ರೆಡ್ಡಿ ಬಳ್ಳಾರಿಗೆ ಬಂದಿರುವ ಬಗ್ಗೆ ಪೊಲೀಸ್ ಮೂಲಗಳು ಖಚಿತಪಡಿಸಿವೆ.
ನಗರದ ವೀರನಗೌಡ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸಮೇತರಾಗಿ ರೆಡ್ಡಿಯವರು ವರಮಹಾಲಕ್ಷ್ಮೀ ಪೂಜೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ವರ ಮಹಾಲಕ್ಷ್ಮೀ ಪೂಜೆ ಸಲ್ಲಿಸಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಅವರ ಸಹೋದರ, ಶಾಸಕ ಜಿ.ಸೋಮಶೇಖರ ರೆಡ್ಡಿಯವರು ಮಾತ್ರ ಜನಾರ್ದನ ರೆಡ್ಡಿಯವರು ಬಳ್ಳಾರಿಗೆ ಬಂದಿಲ್ಲ ಸ್ವಾಮೀಜಿಗಳನ್ನು ಕೇಳಿ ಒಳ್ಳೆಯ ದಿನದಂದು ಅವರನ್ನು ಬಳ್ಳಾರಿಗೆ ಕರೆತರಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದರು.
ಈ ನಡುವೆ ಜನಾರ್ದನ ರೆಡ್ಡಿ ತಮ್ಮ ನಿವಾಸದಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತಿರುವುದು ಹಾಗೂ ಮನೆಯಲ್ಲಿ ವರಮಹಾಲಕ್ಷ್ಮೀ ಪೂಜೆ ಮಾಡುತ್ತಿರುವ ವೀಡಿಯೊ ವೈರಲ್ ಆಗಿದೆ. ಬಳಿಕ ಪೊಲೀಸರು ರೆಡ್ಡಿಯವರು ಬಳ್ಳಾರಿಗೆ ಬಂದಿರುವ ಬಗ್ಗೆ ಖಚಿತಪಡಿದ್ದಾರೆ.
ಇದನ್ನೂ ಓದಿ :ಷರತ್ತು ಉಲ್ಲಂಘನೆ; ಜೋಗದಲ್ಲಿ ಏಳು ಜನರ ವಿರುದ್ಧ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ