14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

2019ರಿಂದ ಸರ್ಕಾರಿ ಅಧಿಕಾರಿಗಳು ಕೆಲಸದ ಅವಧಿ ವೇಳೆ ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.

Team Udayavani, Mar 29, 2023, 6:43 PM IST

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ಟೋಕಿಯೋ: ಭಾರತದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದು ಅಪರಾಧ. ಆದರೆ ಬಹುತೇಕವಾಗಿ ಎಲ್ಲೆಡೆ ರಾಜಾರೋಷವಾಗಿ ಸಿಗರೇಟ್ ಸೇದುತ್ತಿರುವುದು ಸಾಮಾನ್ಯವಾಗಿದೆ. ಇಲ್ಲೊಂದು ಕುತೂಹಲಕಾರಿ ಪ್ರಸಂಗವಿದೆ…ನಾಗರಿಕ ಸೇವೆಯ ಅಧಿಕಾರಿಗಳು ತಮ್ಮ 14 ವರ್ಷದ ಕೆಲಸದ ಅವಧಿಯಲ್ಲಿ 4,500 ಬಾರಿ ಸಿಗರೇಟ್ ಸೇದಿದ್ದು, ಅದರ ಪರಿಣಾಮ ಆ ವ್ಯಕ್ತಿಗೆ ಬರೋಬ್ಬರಿ 11,000(ಅಂದಾಜು 9 ಲಕ್ಷ ರೂ.) ಡಾಲರ್ ದಂಡ ವಿಧಿಸಿರುವ ಘಟನೆ ಜಪಾನ್ ನಲ್ಲಿ ನಡೆದಿದೆ.

ಇದನ್ನೂ ಓದಿ:ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ದಿ ಸ್ಟ್ರೈಟ್ಸ್ ಟೈಮ್ಸ್ ವರದಿ ಪ್ರಕಾರ, ಒಸಾಕಾದ ಅಧಿಕಾರಿಗಳು 61 ವರ್ಷದ ಉದ್ಯೋಗಿ ಮತ್ತು ಪ್ರಿಫೆಕ್ಚರ್ ನ ಹಣಕಾಸು ವಿಭಾಗದ ಇಬ್ಬರು ಸಹೋದ್ಯೋಗಿಗಳು ಸೇರಿಕೊಂಡು ಪದೇ, ಪದೇ ಧೂಮಪಾನ ಮಾಡಿದ್ದಕ್ಕೆ ಮೂವರಿಗೂ ಆರು ತಿಂಗಳವರೆಗೆ ಶೇ.10ರಷ್ಟು ವೇತನ ಕಡಿತಗೊಳಿಸಲಾಗಿತ್ತು.

ಕೆಲಸದ ಅವಧಿಯಲ್ಲಿ ಧೂಮಪಾನ ಮಾಡಬಾರದು ಎಂಬ ಹಲವು ಬಾರಿ ಎಚ್ಚರಿಕೆಯ ನಡುವೆಯೂ ಇವರು ಧೂಮಪಾನ ಚಟ ಮುಂದುವರಿಸಿರುವುದಾಗಿ ವರದಿ ವಿವರಿಸಿದೆ. ಏತನ್ಮಧ್ಯೆ 2022ರ ಸೆಪ್ಟೆಂಬರ್ ನಲ್ಲಿ ಮೂವರು ರಹಸ್ಯವಾಗಿ ತಂಬಾಕು ಸಂಗ್ರಹಿಸಿಟ್ಟಿರುವ ಮಾಹಿತಿ ಮಾನವ ಸಂಪನ್ಮೂಲ(ಎಚ್ ಆರ್ ಡಿಪಾರ್ಟ್ ಮೆಂಟ್) ಕಚೇರಿಗೆ ತಲುಪಿತ್ತು. ಆಗ ಹಿರಿಯ ಅಧಿಕಾರಿಗಳು ಮೂವರಿಗೂ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆದರೂ ಮೂವರು ಧೂಮಪಾನ ಮಾಡುವುದನ್ನು ಮುಂದುವರಿಸಿದ್ದರು.

ಜಗತ್ತಿನಲ್ಲಿ ಜಪಾನ್ ನ ಒಸಾಕಾ ನಗರ ಕಟ್ಟುನಿಟ್ಟಾದ ಧೂಮಪಾನ ನಿಗ್ರಹ ಕಾನೂನು ಜಾರಿಗೆ ತಂದಿದೆ. ಅದರನ್ವಯ ಸರ್ಕಾರಿ ಕಚೇರಿ ಆವರಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ಸಂಪೂರ್ಣ ನಿಷೇಧಿಸಲಾಗಿದೆ. 2019ರಿಂದ ಸರ್ಕಾರಿ ಅಧಿಕಾರಿಗಳು ಕೆಲಸದ ಅವಧಿ ವೇಳೆ ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.

ವರದಿಯ ಪ್ರಕಾರ, ಇಬ್ಬರನ್ನು ಹೊರತುಪಡಿಸಿ 61ವರ್ಷದ ನಿರ್ದೇಶಕ ಮಟ್ಟದ ಉದ್ಯೋಗಿ ಸ್ಥಳೀಯ ಸಾರ್ವಜನಿಕ ಸೇವಾ ಕಾಯಿದೆಯಡಿ ಕಾನೂನು ಉಲ್ಲಂಘಿಸಿರುವುದಾಗಿ ಪರಿಗಣಿಸಿ, ಶಿಸ್ತು ಕ್ರಮದ ಹಿನ್ನೆಲೆಯಲ್ಲಿ ವೇತನ ಕಡಿತದ ಜೊತೆಗೆ 1.44 ಮಿಲಿಯನ್ ಯೆನ್ ಹೆಚ್ಚುವರಿಯಾಗಿ ದಂಡ ತೆರುವಂತೆ ಸೂಚಿಸಲಾಗಿತ್ತು ಎಂದು ತಿಳಿಸಿದೆ.

ಈ ವ್ಯಕ್ತಿ ಕರ್ತವ್ಯದ ಅವಧಿಯಲ್ಲಿ 355 ಗಂಟೆ 19 ನಿಮಿಷಗಳ ಕಾಲ ಧೂಮಪಾನ ಮಾಡಿರುವುದಾಗಿ ಸರ್ಕಾರ ಬಹಿರಂಗಪಡಿಸಿದೆ. ಇದರ ಪರಿಣಾಮ ಬರೋಬ್ಬರಿ 11,000 ಡಾಲರ್ ದಂಡ ತೆರುವಂತಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.