ಬಹುಪಾಲು,ಅಭ್ಯರ್ಥಿ ಇಲ್ಲದ ಕಡೆ ಜೆಡಿಎಸ್ ಸಹಕಾರ ಕೊಡಬಹುದು: ಬಿಎಸ್ ವೈ
Team Udayavani, Nov 27, 2021, 1:56 PM IST
ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆಗಾಗಿ ಎಲ್ಲಾ ಕಡೆ ಪ್ರಚಾರ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಥಹಳ್ಳಿ, ಸಾಗರ, ಸೊರಬ, ಚೆನ್ನಗಿರಿಯಲ್ಲೂ ಕೂಡ ಪ್ರಚಾರ ಮಾಡಲಿದ್ದೇನೆ.
ಬಿಜೆಪಿಯ ಅಭ್ಯರ್ಥಿ ಅರುಣ್ ಅವರು ಮೊದಲ ಸುತ್ತಿನಲ್ಲೇ ಗೆಲುವು ಸಾಧಿಸಬೇಕು.ರಾಜ್ಯದ 25 ಕ್ಷೇತ್ರದಲ್ಲಿ ಬಿಜೆಪಿ 20 ಕ್ಷೇತ್ರದಲ್ಲಿ ಸ್ಫರ್ಧೆ ಮಾಡಿದೆ.ಕನಿಷ್ಟ 15 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ನಲ್ಲಿ ನಮಗೆ ಬಹುಮತ ಬರಲಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಕಡೆ ಪ್ರವಾಸ ಮಾಡುತ್ತಿದ್ದೇನೆ, ನೂರಕ್ಕೇ ನೂರು ಗೆಲ್ಲುತ್ತೇವೆ. ಎಲ್ಲಾ ಕಡೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.
ಚುನಾವಣೆಗೆ ಜೆಡಿಎಸ್ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಭ್ಯರ್ಥಿ ಇಲ್ಲದ ಕಡೆ ಬೆಂಬಲ ನೀಡುವಂತೆ ಕೇಳಿದ್ದೇನೆ.ಬಹುಪಾಲು ಅವರ ಅಭ್ಯರ್ಥಿ ಇಲ್ಲದ ಕಡೆ ಸಹಕಾರ ಕೊಡಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ