ಜಾರ್ಖಂಡ್ BJPನಾಯಕನ ನಿಗೂಢ ಸಾವು
Team Udayavani, Apr 28, 2023, 6:15 AM IST
ರಾಂಚಿ: ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಗುರುವಾರ ಬೆಳಗ್ಗೆ ನಾಯಕನ ಶವ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಜೆಪಿ ಪರಿಶಿಷ್ಟ ಜಾತಿ ಘಟಕದ ಮನಾಲು ಮಂಡಲದ ಅಧ್ಯಕ್ಷರಾಗಿದ್ದ ಪ್ರಮೋದ್ ಸಿಂಗ್, ಬುಧವಾರ ಸಂಜೆ 5 ಗಂಟೆ ಸಮಯಕ್ಕೆ ಮನೆಯಿಂದ ಯಾರಬಳಿಯೋ ಹಣ ಪಡೆದುಕೊಳ್ಳಬೇಕಿದೆ ಎಂದು ತಿಳಿಸಿ ಹೊರಟಿದ್ದಾರೆ. ಬಳಿಕ ಇಡೀ ರಾತ್ರಿ ಹಿಂದಿರುಗಿಲ್ಲ. ಮರುದಿನ ಅಜ್ಞಾತ ಸ್ಥಳವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸಿಂಗ್ ಪತ್ತೆಯಾಗಿದ್ದಾರೆ.
ಆತ್ಮಹತ್ಯೆಯಂತೆ ತೋರುತ್ತಿರುವ ಪ್ರಕರಣವು ನಿಗೂಢವಾಗಿದ್ದು, ಕುಟುಂಬಸ್ಥರು ಇದು ಜಮೀನು ವಿಚಾರವಾಗಿ ನಡೆದಿರುವ ಕೊಲೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಸಿಂಗ್ ಕಾಣೆಯಾಗಿದ್ದಾರೆಂದು ದೂರು ನೀಡಲು ಹೋದಾಗ ಪೊಲೀಸರು ದೂರು ಸ್ವೀಕರಿಸಿಲ್ಲ. ಅವರು ಸರಿಯಾಗಿ ಸ್ಪಂದಿಸಿದ್ದಿದ್ದರೆ ಈ ದುರ್ಘಟನೆಯೇ ನಡೆಯುತ್ತಿಲಿಲ್ಲವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇತ್ತ ಪೊಲೀಸರು ತನಿಖೆ ಆರಂಭಿಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ