ಅಕ್ರಮ ಗಣಿಗಾರಿಕೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜಾರ್ಖಂಡ್ ಸಿಎಂ ಸೊರೇನ್ ಆಪ್ತನ ಬಂಧನ
ಈ ಮೊದಲು ಪ್ರಕರಣದ ಕುರಿತು ಜಾರ್ಖಂಡ್ ಸಿಎಂ ರಾಜಕೀಯ ನಿಕಟವರ್ತಿ ಪಂಕಜ್ ಮಿಶ್ರಾ ಅವರನ್ನು ಇ.ಡಿ. ಬಂಧಿಸಿತ್ತು.
Team Udayavani, Aug 25, 2022, 10:31 AM IST
ರಾಂಚಿ: ಗಣಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಆಪ್ತ ಪ್ರೇಮ್ ಪ್ರಕಾಶ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ (ಆಗಸ್ಟ್ 25) ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಶಿರಾ ಬಳಿ ಭೀಕರ ರಸ್ತೆ ಅಪಘಾತ : 9 ಜನರ ದುರ್ಮರಣ, ಹಲವರ ಸ್ಥಿತಿ ಗಂಭೀರ
ಬುಧವಾರ ಪ್ರಕಾಶ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದ ವೇಳೆ ಎರಡು ಎ.ಕೆ.47 ರೈಫಲ್ಸ್ ಹಾಗೂ 60 ಗುಂಡುಗಳನ್ನು ವಶಪಡಿಸಿಕೊಂಡಿತ್ತು. ಪ್ರೇಮ್ ಪ್ರಕಾಶ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿಕಟವರ್ತಿ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ವರ್ಗಾವಣೆ ತಡೆ ಕಾಯ್ದೆಯನ್ವಯ ಪ್ರಕಾಶ್ ಅವರನ್ನು ಇಂದು ಮುಂಜಾನೆ ಬಂಧಿಸಿದ್ದು, ರಾಂಚಿಯ ಕೋರ್ಟ್ ಗೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಮತ್ತೊಂದೆಡೆ ಎ.ಕೆ. 47 ರೈಫಲ್ಸ್ ಪತ್ತೆಯಾದ ಪ್ರೇಮ್ ಪ್ರಕಾಶ್ ಅವರನ್ನು ಮುಖ್ಯಮಂತ್ರಿ ಹೇಮಂತ್ ಸೊರೇನ್ ನಿಕಟವರ್ತಿ ಎಂಬ ವರದಿಯನ್ನು ಜಾರ್ಖಂಡ್ ಸರ್ಕಾರ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ. ಈ ಮೊದಲು ಪ್ರಕರಣದ ಕುರಿತು ಜಾರ್ಖಂಡ್ ಸಿಎಂ ರಾಜಕೀಯ ನಿಕಟವರ್ತಿ ಪಂಕಜ್ ಮಿಶ್ರಾ ಅವರನ್ನು ಇ.ಡಿ. ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ