ಬಹುಮತ ಸಾಬೀತುಪಡಿಸಿದ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್, ಕಲಾಪ ಬಹಿಷ್ಕರಿಸಿದ ಬಿಜೆಪಿ
ವಿಧಾನಸಭೆ ಕಲಾಪ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಎಲ್ಲಾ 33 ಶಾಸಕರು ರಾಯ್ ಪುರ್ ನಿಂದ ರಾಂಚಿಗೆ ಬೆಳಗ್ಗೆ ಬಂದಿಳಿದಿದ್ದರು.
Team Udayavani, Sep 5, 2022, 1:30 PM IST
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಸೋಮವಾರ (ಸೆಪ್ಟೆಂಬರ್ 05) ವಿಧಾನಸಭೆಯಲ್ಲಿ ನಡೆದ ಕಲಾಪದಲ್ಲಿ ಬಹುಮತ ಸಾಬೀತುಪಡಿಸಿದ್ದು, ಇದರೊಂದಿಗೆ ಸೋರೆನ್ ಸರ್ಕಾರ ರಾಜಕೀಯ ಬಿಕ್ಕಟ್ಟಿನಿಂದ ಪಾರಾದಂತಾಗಿದೆ.
ಇದನ್ನೂ ಓದಿ:ನಿಮ್ಮ ಮನೆ ಮೊದಲು ಸರಿಪಡಿಸಿಕೊಳ್ಳಿ: ಕಾಂಗ್ರೆಸ್ ಗೆ ಸೋಮಶೇಖರ್ ತಿರುಗೇಟು
ಇಂದು ನಡೆದ ವಿಧಾನಸಭೆ ಕಲಾಪದಲ್ಲಿ,ವಿಶ್ವಾಸಮತ ಯಾಚನೆಯಲ್ಲಿ ಸೋರೆನ್ ಸರ್ಕಾರದ ಪರ 48 ಮತಗಳು ಚಲಾವಣೆಗೊಂಡಿದ್ದು, ಈ ಮೂಲಕ ವಿಶ್ವಾಸಮತ ಸಾಬೀತುಪಡಿಸಿರುವುದಾಗಿ ವರದಿ ವಿವರಿಸಿದೆ. ಸಿಎಂ ಸೋರೆನ್ ಜೆಎಂಎಂನ 33 ಶಾಸಕರು ಹಾಗೂ ಯುಪಿಎನ ಶಾಸಕರ ಜತೆಗೂಡಿ ವಿಧಾನಸಭೆ ಕಲಾಪಕ್ಕೆ ಆಗಮಿಸಿದ್ದರು.
ಕಲಾಪದಲ್ಲಿ ಸೋರೆನ್ ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ವಿಪಕ್ಷ ಬಿಜೆಪಿ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರ ನಡೆದಿದ್ದರು. ಇಂದು ವಿಧಾನಸಭೆ ಕಲಾಪ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಎಲ್ಲಾ 33 ಶಾಸಕರು ರಾಯ್ ಪುರ್ ನಿಂದ ರಾಂಚಿಗೆ ಬೆಳಗ್ಗೆ ಬಂದಿಳಿದಿದ್ದರು.
“ ಪ್ರಜಾಪ್ರಭುತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ನಾವು ವಿಧಾನಸಭೆ ಕಲಾಪವನ್ನು ಕರೆದಿರುವುದಾಗಿ ವಿಶ್ವಾಸಮತ ಯಾಚನೆಗೂ ಮುನ್ನ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್” ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ